MSIL ಅದ್ವಿತೀಯ ಸಾಧನೆ: ಐಪಿಎಸ್ ಅಧಿಕಾರಿ ವಿಕಾಶ್ ಕುಮಾರ್ಗೆ ಜಾಗತಿಕ ಪ್ರಶಸ್ತಿ
ಬೆಂಗಳೂರು, ಆ. 28: ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿ. ಒಂದು ವರ್ಷದಲ್ಲಿ 91 ಕೋಟಿ ರೂ. ಲಾಭ ಗಳಿಸಿ ಕಾರ್ಯಕ್ಷಮತೆ ತೋರಲು ಕಾರಣವಾದ ಐಪಿಎಸ್ ಅಧಿಕಾರಿ ವಿಕಾಶ್ ಕುಮಾರ್ ವಿಕಾಶ್ ಅವರಿಗೆ ಏಷ್ಯಾದ ಪ್ರತಿಷ್ಠಿತ ಏಷಿಯಾ ಒನ್ ಗ್ಲೋಬಲ್ ಇಂಡಿಯನ್ ಆಫ್ ದಿ ಇಯರ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ದೆಹಲಿಯ ಖಾಸಗಿ ಹೋಟೆಲ್ನಲ್ಲಿ ಇತ್ತೀಚೆಗೆ ಓಪನ್ ಮ್ಯಾಗಜಿನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಯಿತು. ವಿವಿಧ ದೇಶದ ರಾಯಬಾರ ಪ್ರತಿನಿಧಿಗಳು, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಮಾಲೀಕರು ಮತ್ತು ಹೂಡಿಕೆದಾರರು ಪಾಲ್ಗೊಂಡಿದ್ದರು.
ಐಪಿಎಸ್ ಅಧಿಕಾರಿ ವಿಕಾಶ್ ಕುಮಾರ್ ವಿಕಾಶ್ ಅವರನ್ನು ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ಗೆ ವ್ಯವಸ್ಥಾಪಕ ನಿರ್ದೇಕರನ್ನಾಗಿ ನೇಮಿಸಿ ಸರ್ಕಾರ ಆದೇಶಿಸಿತ್ತು.

ಆರು ದಶಕದ ಇತಿಹಾಸ ಹೊಂದಿದ್ದ ಎಂಎಸ್ಐಎಲ್, ಚಿಟ್ ಫಂಡ್, ಮದ್ಯ ಮಾರಾಟ, ವಿದ್ಯಾ ಮತ್ತು ಲೇಖಕ್ ನೋಟ ಪುಸ್ತಕ ಲೇಖನ ಸಾಮಗ್ರಿ, ಸೋಲಾರ್ ವಾಟರ್ ಹೀಟರ್, ಪ್ರವಾಸ ಮತ್ತು ಪ್ರಯಾಣ, ಜನರಿಕ್ ಔಷಧಿ, ಇನ್ನಿತರೆ ಉತ್ಪನ್ನಗಳ ಮಾರಾಟ ಸೇವೆಯಲ್ಲಿ ಎಂಎಸ್ಐಎಲ್ ತೊಡಗಿಸಿಕೊಂಡಿದೆ.
ಅನಧಿಕೃತ ಚಿಟ್ ವ್ಯವಹಾರ ನಿಯಂತ್ರಿಸುವ ನಿಟ್ಟಿನಲ್ಲಿ ಎಂಎಸ್ಐಎಲ್ 26 ಚಿಟ್ ಶಾಖೆಗಳನ್ನು ಹೊಂದಿದ್ದು, ಎರಡು ಲಕ್ಷಕ್ಕೂ ಅಧಿಕ ಚಂದಾದಾರರು ಇದರ ಅನುಕೂಲ ಪಡೆದಿದ್ದಾರೆ. ಎಂಎಸ್ಐಎಲ್ ರಾಜ್ಯದಲ್ಲಿ 980 ಮದ್ಯ ಮಳಿಗೆಗಳನ್ನು ಒಗೊಂಡಿದ್ದು, ಗ್ರಾಹಕರಿಗೆ ಗುಣಮಟ್ಟದ ಮದ್ಯ ಪೂರೈಕೆ ಮಾಡುತ್ತಿದೆ.
ಎಂಎಸ್ಐಎಲ್ ವ್ಯವಸ್ಥಾಪಕರಾಗಿ ವಿಕಾಶ್ ಕುಮಾರ್ ವಿಕಾಶ್ ಅಧಿಕಾರ ವಹಿಸಿಕೊಂಡ ಬಳಿಕ ಸಂಸ್ಥೆ ಹೆಚ್ಚು ಲಾಭ ಗಳಿಸುತ್ತಿದೆ. 2021-22 ನೇ ಸಾಲಿನಲ್ಲಿ 2901 ಕೋಟಿ ರೂ. ವಹಿವಾಟು ನಡೆಸಿ, 91 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದ್ರೆ ಶೇ. 33 ರಷ್ಟು ಹೆಚ್ಚುಲಾಭ ಗಳಿಸಿದೆ. 2022-23 ನೇ ಸಾಲಿನಲ್ಲಿ 3350 ಕೋಟಿ ರೂ. ವಹಿವಾಟು ತಲುಪುವ ನಿರಿಕ್ಷೆ ಹೊಂದಿದ್ದು, 110 ಕೋಟಿ ರೂ ಲಾಭ ಗಳಿಸುವ ನಿರೀಕ್ಷೆ ಹೊಂದಿದೆ.

ಹೀಗೆ ಕಳೆದ ಒಂದು ವರ್ಷದಲ್ಲಿ ಅತ್ಯುತ್ತಮ ವಹಿವಾಟು ನಡೆಸಿದ ಹಿನ್ನೆಲೆಯಲ್ಲಿ ಎಂಎಸ್ಐಎಲ್ ದಾಖಲಿಸಿದ ಪ್ರಗತಿ ಗಮನಿಸಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications