ಬಿಡದಿಯಲ್ಲಿ ಸಿಗಲಿದೆ ಮಲೇಷಿಯಾದ ಮರಳು ಭಾಗ್ಯ
ಬೆಂಗಳೂರು, ಜನವರಿ 21: ಮರಳು ಕೊರತೆಗೆ ನೀಗಿಸಲು ರಾಜ್ಯದ ಜನತೆಗೆ ಕರ್ನಾಟಕ ಸರ್ಕಾರವು ಮರಳು ಭಾಗ್ಯವನ್ನು ಕರುಣಿಸಿದೆ. ಮಲೇಷಿಯಾದಿಂದ ನೈಸರ್ಗಿಕ ಮರಳನ್ನು ಆಮದು ಮಾಡಿಕೊಂಡಿದೆ. ಬ್ರ್ಯಾಂಡೆಡ್ ಮರಳು ಮೊದಲಿಗೆ ಬಿಡದಿಯಲ್ಲಿ ಸೋಮವಾರ(ಜನವರಿ 22) ದಿಂದ ಮಾರಾಟವಾಗಲಿದೆ ಎಂದು ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಜಿ.ಸಿ.ಪ್ರಕಾಶ್ ಹೇಳಿದ್ದಾರೆ.
ಮುಂದಿನ ಹಂತದಲ್ಲಿ ಬೆಂಗಳೂರಿನ ಚನ್ನಸಂದ್ರ, ದೊಡ್ಡಬಳ್ಳಾಪುರ, ತುಮಕೂರಿನ ಕ್ಯಾತ್ಸಂದ್ರ, ಮಂಡ್ಯ, ಮೈಸೂರು, ಹುಬ್ಬಳ್ಳಿ ಸೇರಿ ರಾಜ್ಯದೆಲ್ಲೆಡೆ ಎಂಎಸ್ಎಲ್ಎಲ್ ಮಳಿಗೆಗಳಲ್ಲಿ ಮರಳು ಮೂಟೆಗಳನ್ನು ಮಾರಾಟ ಮಾಡಲಾಗುತ್ತದೆ ಎಂದರು.

ಎಎಂಎಸ್ಐಎಲ್ ವತಿಯಿಂದ ನಿಗದಿತ ದರದಲ್ಲೇ ಮಾರಾಟ ಮಾಡಲಾಗುತ್ತದೆ. 50 ಕೆಜಿ ಚೀಲ ಹಾಗೂ ಟನ್ ಲೆಕ್ಕದಲ್ಲಿ ಮರಳನ್ನು ಖರೀದಿಸಬಹುದು. ಪ್ರತಿ ಟನ್ಗೆ ಜಿಎಸ್ಟಿ ತೆರಿಗೆ ಸೇರಿ 4 ಸಾವಿರ ದರ ನಿಗದಿಯಾಗಿದೆ. ಮೈಸೂರಿನಲ್ಲಿ ಚೀಲಕ್ಕೆ 4,200 ರು ಗೆ ಸಿಗಲಿದೆ.
ಮಲೇಷಿಯಾದಿಂದ ಹಡಗು ಮೂಲಕ ಆಂಧ್ರ ಪ್ರದೇಶದ ನಲ್ಲೂರು ಜಿಲ್ಲೆಯ ಕೃಷ್ಣಪಟ್ನಂ ಬಂದರ್ನಲ್ಲಿ ಮೊದಲ ಹಂತವಾಗಿ 54 ಸಾವಿರ ಟನ್ ಮರಳು ಪೂರೈಕೆಯಾಗಿದೆ ಎಂದರು.
ವಾರ್ಷಿಕ 3 ಕೋಟಿ ಟನ್ ಗಳಷ್ಟು ಮರಳು ಬೇಡಿಕೆಯಿದೆ. ನದಿ ಪಾತ್ರದಿಂದ ಸುಮಾರು 40 ಲಕ್ಷ ಟನ್ ಗಳಷ್ಟು ಮರಳು ಪಡೆಯಲಾಗುತ್ತಿದೆ. 2 ಕೋಟಿಗೂ ಅಧಿಕ ಟನ್ ಗಳಷ್ಟು ಮರಳನ್ನು ಅನಧಿಕೃತವಾಗಿ ಮಾರಾಟ ಮಾಡಲಾಗುತ್ತಿದೆ. ಒಟ್ಟು 60 ಲಕ್ಷ ಟನ್ ಗಳಷ್ಟು ಕೊರತೆ ಎದುರಿಸುತ್ತಿದ್ದೇವೆ ಎಂದು ಪ್ರಕಾಶ್ ಹೇಳಿದರು.
-
ಶ್ರೀ ಮಾತಾ ವೈಷ್ಟೋದೇವಿ ಭಕ್ತರಿಗೆ ಕರ್ನಾಟಕ ಸರ್ಕಾರದ ವತಿಯಿಂದ ಭರ್ಜರಿ ಸುದ್ದಿ | Karnataka Budget 2026 -
5,00,00,000 ರೂಪಾಯಿ, ಕನ್ನಡ ನಾಡಿನ ಭಕ್ತರಿಗೆ ಭರ್ಜರಿ ಉಡುಗೊರೆ... Karnataka Budget 2026 -
Karnataka Budget 2026: 4.5 ಲಕ್ಷ ಕೋಟಿಯ ರಾಜ್ಯ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಗುವುದೇ ಭರ್ಜರಿ ಕೊಡುಗೆ? -
ರಾಜ್ಯ ಬಜೆಟ್ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ












Click it and Unblock the Notifications