ಬಿಡದಿಯಲ್ಲಿ ಸಿಗಲಿದೆ ಮಲೇಷಿಯಾದ ಮರಳು ಭಾಗ್ಯ
ಬೆಂಗಳೂರು, ಜನವರಿ 21: ಮರಳು ಕೊರತೆಗೆ ನೀಗಿಸಲು ರಾಜ್ಯದ ಜನತೆಗೆ ಕರ್ನಾಟಕ ಸರ್ಕಾರವು ಮರಳು ಭಾಗ್ಯವನ್ನು ಕರುಣಿಸಿದೆ. ಮಲೇಷಿಯಾದಿಂದ ನೈಸರ್ಗಿಕ ಮರಳನ್ನು ಆಮದು ಮಾಡಿಕೊಂಡಿದೆ. ಬ್ರ್ಯಾಂಡೆಡ್ ಮರಳು ಮೊದಲಿಗೆ ಬಿಡದಿಯಲ್ಲಿ ಸೋಮವಾರ(ಜನವರಿ 22) ದಿಂದ ಮಾರಾಟವಾಗಲಿದೆ ಎಂದು ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಜಿ.ಸಿ.ಪ್ರಕಾಶ್ ಹೇಳಿದ್ದಾರೆ.
ಮುಂದಿನ ಹಂತದಲ್ಲಿ ಬೆಂಗಳೂರಿನ ಚನ್ನಸಂದ್ರ, ದೊಡ್ಡಬಳ್ಳಾಪುರ, ತುಮಕೂರಿನ ಕ್ಯಾತ್ಸಂದ್ರ, ಮಂಡ್ಯ, ಮೈಸೂರು, ಹುಬ್ಬಳ್ಳಿ ಸೇರಿ ರಾಜ್ಯದೆಲ್ಲೆಡೆ ಎಂಎಸ್ಎಲ್ಎಲ್ ಮಳಿಗೆಗಳಲ್ಲಿ ಮರಳು ಮೂಟೆಗಳನ್ನು ಮಾರಾಟ ಮಾಡಲಾಗುತ್ತದೆ ಎಂದರು.

ಎಎಂಎಸ್ಐಎಲ್ ವತಿಯಿಂದ ನಿಗದಿತ ದರದಲ್ಲೇ ಮಾರಾಟ ಮಾಡಲಾಗುತ್ತದೆ. 50 ಕೆಜಿ ಚೀಲ ಹಾಗೂ ಟನ್ ಲೆಕ್ಕದಲ್ಲಿ ಮರಳನ್ನು ಖರೀದಿಸಬಹುದು. ಪ್ರತಿ ಟನ್ಗೆ ಜಿಎಸ್ಟಿ ತೆರಿಗೆ ಸೇರಿ 4 ಸಾವಿರ ದರ ನಿಗದಿಯಾಗಿದೆ. ಮೈಸೂರಿನಲ್ಲಿ ಚೀಲಕ್ಕೆ 4,200 ರು ಗೆ ಸಿಗಲಿದೆ.
ಮಲೇಷಿಯಾದಿಂದ ಹಡಗು ಮೂಲಕ ಆಂಧ್ರ ಪ್ರದೇಶದ ನಲ್ಲೂರು ಜಿಲ್ಲೆಯ ಕೃಷ್ಣಪಟ್ನಂ ಬಂದರ್ನಲ್ಲಿ ಮೊದಲ ಹಂತವಾಗಿ 54 ಸಾವಿರ ಟನ್ ಮರಳು ಪೂರೈಕೆಯಾಗಿದೆ ಎಂದರು.
ವಾರ್ಷಿಕ 3 ಕೋಟಿ ಟನ್ ಗಳಷ್ಟು ಮರಳು ಬೇಡಿಕೆಯಿದೆ. ನದಿ ಪಾತ್ರದಿಂದ ಸುಮಾರು 40 ಲಕ್ಷ ಟನ್ ಗಳಷ್ಟು ಮರಳು ಪಡೆಯಲಾಗುತ್ತಿದೆ. 2 ಕೋಟಿಗೂ ಅಧಿಕ ಟನ್ ಗಳಷ್ಟು ಮರಳನ್ನು ಅನಧಿಕೃತವಾಗಿ ಮಾರಾಟ ಮಾಡಲಾಗುತ್ತಿದೆ. ಒಟ್ಟು 60 ಲಕ್ಷ ಟನ್ ಗಳಷ್ಟು ಕೊರತೆ ಎದುರಿಸುತ್ತಿದ್ದೇವೆ ಎಂದು ಪ್ರಕಾಶ್ ಹೇಳಿದರು.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications