ಮುಡಾ ಹಗರಣ ಪ್ರಕರಣ: ರಾಜ್ಯಪಾಲರಿಂದ ಸಚಿವ ಜಮೀರ್ ಅಹ್ಮದ್ಗೆ ಬಿಗ್ ಶಾಕ್.!
ಬೆಂಗಳೂರು, ನವೆಂಬರ್, 10: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದರು. ಇನ್ನು ಈ ಕುರಿತಂತೆ ಸಚಿವ ಜಮೀರ್ ಅಹ್ಮದ್ ಖಾನ್ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದು, ಇದೀಗ ಈ ಹೇಳಿಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.
ಸಚಿವ ಜಮೀರ್ ಅಹ್ಮದ್ ಅವರು ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಟಿ.ಜೆ.ಅಬ್ರಾಹಂ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಮುಡಾ ಹಗರಣ ಸಂಬಂಧ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದು, ಆಕ್ಷೇಪಾರ್ಹವಾಗಿದೆ ಎಂಬುದಾಗಿ ತಿಳಿಸಿದ್ದರು.

ಈ ದೂರಿನ ಹಿನ್ನೆಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಅವರಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಇದರಿಂದ ಇದೀಗ ಸಚಿವ ಜಮೀರ್ ಅಹ್ಮಸ್ಗೆ ಸಂಕಷ್ಟ ಎದುರಾದಂತಾಗಿದೆ.
ಬಿಜೆಪಿ ವಿರುದ್ಧ ಆಕ್ರೋಶ: ಸಾಂವಿಧಾನಿಕ ಸಂಸ್ಥೆಗಳಾದ ಇಡಿ, ಐಟಿ, ಸಿಬಿಐ ಹಾಗೂ ರಾಜ ಭವನಗಳನ್ನು ಕೇಂದ್ರ ಬಿ.ಜೆ.ಪಿ ಸರ್ಕಾರ ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ. ಇದನ್ನು ತಡೆಗಟ್ಟಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯು ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿತು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಡಿಎಸ್ಎಸ್ ಜಿಲ್ಲಾ ಸಮಿತಿ ಸಂಚಾಲಕ ಸಿ.ಎಂ.ಶಿವಣ್ಣ ಮಾತನಾಡಿ, ಲೋಕಾಯುಕ್ತ ಪೊಲೀಸರು, ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಮೇಲೆ ಎಫ್ಐಆರ್ ದಾಖಲಿಸಿರುವ ಹಿನ್ನೆಲೆ ಅವರು ರಾಜೀನಾಮೆ ಕೊಡಬೇಕೆಂದು ಬಿ.ಜೆ.ಪಿ. ನಾಯಕರು ಹೋರಾಟ ಪ್ರಾರಂಭಿಸಿದ್ದಾರೆ.
ಈ ಹೋರಾಟದ ತಾರ್ಕಿಕ ಅಂತ್ಯ ಯಾರ್ಯಾರ ಮನೆ ಬಾಗಿಲು ತಟ್ಟಬಹುದೆಂಬ ಕನಿಷ್ಠ ಸಾಮಾನ್ಯ ಜ್ಞಾನವಾದರೂ ಈ ನಾಯಕರಿಗಿದೆಯೇ? ಕೇಂದ್ರ ಬಿಜೆಪಿ ಸರ್ಕಾರ ಸಂವಿಧಾನಿಕ ಸಂಸ್ಥೆಗಳ ದುರುಪಯೋಗ ಪಡಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವ ಸರ್ಕಾರವನ್ನು ದುರ್ಬಲಗೊಳಿಸಲು ಮುಡಾಪ್ರಕರಣದಲ್ಲಿ ಚುನಾಯಿತ ಸರ್ಕಾರ ಪತನಗೊಳಿಸಲು ಬಿಜೆಪಿ, ಜೆಡಿಎಸ್ ನಡೆಸುತ್ತಿರುವ ಷಡ್ಯಂತ್ರ ಎಂದರು.
ಎಫ್.ಐ.ಆರ್. ಆಗಿರುವ ಕಾರಣಕ್ಕೆ ರಾಜೀನಾಮೆ ನೀಡಬೇಕೆಂದು ಮಾನದಂಡವನ್ನು ನಿಗದಿಪಡಿಸಿದರೆ ಸಿದ್ದರಾಮಯ್ಯ ನವರು ಮಾತ್ರವಲ್ಲ, ಕೇಂದ್ರ ಸರ್ಕಾರದ ಸಚಿವರ ಸಂಪುಟದಲ್ಲಿ ಸಚಿವರು ಕನಿಷ್ಠ 23-24 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ. ಉನ್ನತ ಅಧಿಕಾರದಲ್ಲಿದ್ದು, ರಾಜಧರ್ಮವನ್ನು ಮರೆತು ಜಾತಿ ಜಾತಿಧರ್ಮದ ಹೆಸರಲ್ಲಿ ಜನಾಂಗೀಯ ಹತ್ಯೆಗಳನ್ನು ತಡೆಯಲು ವಿಫಲರಾಗಿದ್ದಾರೆ ಎಂದು ದೂರಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications