Siddaramaiah: ಪತ್ನಿ ಸೈಟ್ ವಾಪಾಸ್ ನಿರ್ಧಾರದ ಬೆನ್ನಲ್ಲೇ ಸಿದ್ದರಾಮಯ್ಯ ಅಚ್ಚರಿಯ ನಿರ್ಧಾರ ಪ್ರಕಟ
ಬೆಂಗಳೂರು, ಅಕ್ಟೋಬರ್ 01: ನಾನು ಅತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ ರಾಜಿನಾಮೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.
ಈ ಕುರಿತು ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನನ್ನ ಪತ್ನಿ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪತ್ರ ಬರೆದಿರುವ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ. ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿಯವರು ಜಮೀನಿನ ಮಾಲೀಕರಾಗಿದ್ದರು. ಉಡುಗೊರೆ ರೂಪದಲ್ಲಿ ನನ್ನ ಪತ್ನಿಗೆ 3 ಎಕರೆ 16 ಗುಂಟೆ ಜಮೀನು ನೀಡಿದ್ದರು. ಅದನ್ನು ಮುಡಾದವರು ಒತ್ತುವರಿ ಮಾಡಿಕೊಂಡು ನಿವೇಶನಗಳನ್ನು ರಚಿಸಿ ಮಾರಿಕೊಂಡಿದ್ದರು. ಅದಕ್ಕೆ ಬದಲಿ ನಿವೇಶನ ಕೋರಿದ್ದು, ವಿಜಯನಗರದ 3 ಮತ್ತು 4 ನೇ ಹಂತದಲ್ಲಿ ನಿವೇಶನ ಮಂಜೂರು ಮಾಡಿತ್ತು.

ನನ್ನ ಪತ್ನಿಯವರು ವಿಜಯನಗರದಲ್ಲೇ ನೀಡುವಂತೆ ಕೇಳಿರಲಿಲ್ಲ. ಈಗ ಅದು ದೊಡ್ಡ ವಿವಾದವಾಗಿದೆ. ಇದರಿಂದ ನನ್ನ ಪತಿಯ ತೇಜೋವಧೆಯಾಗುತ್ತಿರುವುದು ಹಾಗೂ ರಾಜಕೀಯ ದ್ವೇಷ ಹಾಗೂ ಸೇಡನ್ನು ತೀರಿಸಿಕೊಳ್ಳತ್ತಿರುವ ಕೆಲಸವನ್ನು ವಿರೋಧಿಗಳು ಮತ್ತು ವಿರೋಧ ಪಕ್ಷಗಳು ಮಾಡುತ್ತಿರುವುದರಿಂದ ಮನನೊಂದು ನಿವೇಶನಗಳನ್ನು ಮರಳಿ ನೀಡಲು ತೀರ್ಮಾನಿಸಿದ್ದಾರೆ ಎಂದು ತಿಳಿಸಿದರು.
ನಿನ್ನೆ ಇಡಿಯವರು ಇಸಿಐಆರ್ ಫೈಲ್ ಮಾಡಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಮುಖ್ಯಮಂತ್ರಿಯವರು ಕಾನೂನು ರೀತಿ ಯಾವೆಲ್ಲಾ ಕ್ರಮವಿದೆ ತೆಗೆದುಕೊಳ್ಳಲಿ ಎಂದರು. ಜಮೀನಿನ ಬದಲಿಗೆ ನಿವೇಶನಗಳನ್ನು ಹಂಚಿಕೆ ಮಾಡಿರುವುದು ನನ್ನ ಪ್ರಕಾರ Money Laundering ಆಗುವುದಿಲ್ಲ ಈ ಪ್ರಕರಣದಲ್ಲಿ ನನ್ನ ಪಾತ್ರವೇನು? ವಿರೋಧ ಪಕ್ಷದವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ರಾಜಿನಾಮೆ ನೀಡುವುದರಿಂದ ಎಲ್ಲವೂ ಮುಗಿಯುತ್ತದೆಯೇ? ಅನಗತ್ಯವಾಗಿ ರಾಜಿನಾಮೆ ಕೇಳುತ್ತಿದ್ದಾರೆ ನನ್ನ ತಪ್ಪಿಲ್ಲ ಎಂದ ಮೇಲೆ ರಾಜಿನಾಮೆ ಯಾಕೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರ ಪ್ರಕರಣಕ್ಕೂ ಹಾಗೂ ನನ್ನ ಪ್ರಕರಣಕ್ಕೂ ವ್ಯತ್ಯಾಸವಿದೆ. ಇದರಲ್ಲಿ ನನ್ನ ಪಾತ್ರವಿಲ್ಲ ಯಡಿಯೂರಪ್ಪ ಡಿನೊಟಿಫೈ ಮಾಡಿದ್ದರು ನಾನು ಡಿನೋಟಿಫೈ ಮಾಡಿಲ್ಲ; Money Laundering ಮಾಡಿಲ್ಲ ನಾನು ಅತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ ರಾಜಿನಾಮೆ ನೀಡುವ ಅಗತ್ಯವಿಲ್ಲ ಎಂದು ಹೇಳಿದರು.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ












Click it and Unblock the Notifications