Get Updates
Get notified of breaking news, exclusive insights, and must-see stories!

Muda Scam: ವಿರೋಧ ಪಕ್ಷದ ಹೇಳಿಕೆಯೇ ಕಾಂಗ್ರೆಸ್‌ಗೆ ವರದಾನವಾಯ್ತು!

ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರದ) ಬದಲಿ ನಿವೇಶನ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಣಿಸಬೇಕು ಎಂದು ಲೆಕ್ಕಾಚಾರ ಹಾಕಿದ್ದ ಜೆಡಿಎಸ್‌ ಪಕ್ಷಕ್ಕೆ ಜೆಡಿಎಸ್‌ ಶಾಸಕರಿಂದಲೇ ಹಿನ್ನಡೆ ಆಗಿದೆ. ಈ ಬೆಳವಣೆಗೆಯಿಂದ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ತೀವ್ರ ಮುಜುಗರಕ್ಕೆ ಒಳಗಾಗಿದ್ದರೆ. ಕಾಂಗ್ರೆಸ್‌ ಪಕ್ಷ ಇದನ್ನೇ ಅಸ್ತ್ರವನ್ನಾಗಿ ಬಳಸಿಕೊಂಡು ಬಿಜೆಪಿ ಹಾಗೂ ಜೆಡಿಎಸ್‌ಗೆ ಟಾಂಗ್‌ ನೀಡಿದೆ. ಜೆಡಿಎಸ್‌ ಪ್ರಭಾವಿ ಶಾಸಕನ ಹೇಳಿಕೆಯಿಂದ ಜೆಡಿಎಸ್‌ ಮುಖಭಂಗ ಅನುಭವಿಸುವಂತಾಗಿದೆ.

ಮುಡಾ ಹಗರಣದ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ರಾಜ್ಯ ಕಾಂಗ್ರೆಸ್‌ ಸರ್ಕಾರವು ತೀವ್ರ ಮುಜುಗರಕ್ಕೆ ಒಳಗಾಗುತ್ತಿದೆ ಎನ್ನುವುದರ ಒಳಗಾಗಿ ಜೆಡಿಎಸ್‌ನ ಪ್ರಭಾವಿ ಶಾಸಕರಾದ ಜಿ.ಟಿ. ದೇವೇಗೌಡ ಅವರು ಕಾಂಗ್ರೆಸ್‌ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮಾತನಾಡಿದ್ದಾರೆ. ಇದನ್ನೇ ಕಾಂಗ್ರೆಸ್‌ ಅಸ್ತ್ರವಾಗಿಸಿಕೊಂಡು ಸೋಷಿಯಲ್‌ ಮೀಡಿಯಾದಲ್ಲಿ ತನ್ನ ಪರವಾಗಿ ಜನಾಭಿಪ್ರಾಯ ರೂಪಿಸಿಕೊಳ್ಳಲು ಬಳಸಿಕೊಳ್ಳುತ್ತಿದೆ. ಕಾಂಗ್ರೆಸ್‌ ಸೋಷಿಯಲ್‌ ಮೀಡಿಯಾ ಖಾತೆಗಳಲ್ಲಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೋಷಿಯಲ್‌ ಮೀಡಿಯಾ ಎಕ್ಸ್‌ ಹಾಗೂ ಫೇಸ್‌ಬುಕ್‌ ಖಾತೆಯಲ್ಲಿ ಜಿ.ಟಿ ದೇವೇಗೌಡ ಅವರ ಮಾತುಗಳನ್ನು ಉಲ್ಲೇಖಿಸಲಾಗಿದೆ. ಅಲ್ಲದೇ ಮುಡಾದಲ್ಲಿ ಸಿದ್ದರಾಮಯ್ಯ ಅವರ ಪಾತ್ರವೇನೂ ಇಲ್ಲ. ಇದೆಲ್ಲ ವಿರೋಧ ಪಕ್ಷಗಳ ಷಡ್ಯಂತ್ರವಷ್ಟೇ ಎಂದು ಹೇಳಲಾಗುತ್ತಿದೆ.

Muda Scam Leaders of Opposition came in support of Chief Minister Siddaramaiah

ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌: ಜೆಡಿಎಸ್‌ನ ಶಾಸಕರಾದ ಜಿ.ಟಿ. ದೇವೇಗೌಡ ಅವರ ಮಾತುಗಳನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, "ಎಫ್.ಐ.ಆರ್‌ ದಾಖಲಾದ ಮಾತ್ರಕ್ಕೆ ರಾಜೀನಾಮೆ ನೀಡುವುದಾರೆ ಬಿಜೆಪಿ - ಜೆಡಿಎಸ್‌ ನಾಯಕರು ವಿಧಾನಸೌಧದ ಮುಂದೆ ಸಾಲಾಗಿ ನಿಲ್ಲಬೇಕಾಗುತ್ತದೆ" ಎಂದು ಜೆಡಿಎಸ್‌ ಶಾಸಕ ಜಿ.ಟಿ. ದೇವೇಗೌಡ ಅವರು ಮೈಸೂರು ದಸರಾದ ಉದ್ಘಾಟನಾ ಸಮಾರಂಭದಲ್ಲಿ ಹೇಳಿದ್ದಾರೆ ಎಂದು ಅವರು ಮಾತನಾಡಿರುವ ವಿಡಿಯೋವನ್ನು ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಮತ್ತೊಂದೆಡೆ ಜೆಡಿಎಸ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿಯನ್ನು ಮುಂದುವರಿಸಿದೆ. ಅಶುದ್ಧ ಕೈಗಳಿಂದ ನಾಡಹಬ್ಬ ದಸರಾ ಉದ್ಘಾಟನೆ ಮಾಡಿದ್ದು ಸರಿಯೇ ಎಂದು ಪ್ರಶ್ನೆ ಮಾಡಿದೆ. ಈ ಸಂಬಂಧ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಜೆಡಿಎಸ್‌, ಅಶುದ್ಧ ಕೈಗಳಿಂದ ನಾಡಹಬ್ಬ ದಸರಾ ಉದ್ಘಾಟನೆ ಮಾಡಿದ್ದು ಸರಿಯೇ, ಮುಡಾ ಪ್ರಕರಣದಲ್ಲಿ A1 ಆರೋಪಿಯಾಗಿರುವ ಭ್ರಷ್ಟ್ರರಾಮಯ್ಯ ಅವರಿಂಧ ಐತಿಹಾಸಿಕ ಹಿನ್ನೆಲೆಯ ಭವ್ಯ ಪರಂಪರೆಯ ಮೈಸೂರು ದಸರಾ ಉದ್ಘಾಟಿಸಿದ್ದು ನಾಡಿಗೆ ಕಪ್ಪು ಚುಕ್ಕೆ ಎಂದು ಕಿಡಿಕಾರಿದೆ.

Muda Scam Leaders of Opposition came in support of Chief Minister Siddaramaiah

ಅಲ್ಲದೇ ಕಳಂಕಿತ ಮುಖ್ಯಮಂತ್ರಿ ಹಣೆಪಟ್ಟಿ ಹೊತ್ತಿರುವ ನೀವು, ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದರೆ ನಾಡಿಗೆ ಅಪಖ್ಯಾತಿ ತಂದಿದ್ದೀರಿ. ಹಲವು ಹಗರಣಗಳಲ್ಲಿ ಮುಳುಗಿ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಸಿದ್ದರಾಮಯ್ಯ ಅವರೇ ಕರುನಾಡಿನ ಜನರ ಆತ್ಮಸಾಕ್ಷಿಗೆ ದ್ರೋಹ ಬಗೆಯಬೇಡಿ ಎಂದಿದೆ.

ಒಟ್ಟಾರೆ ಜೆಡಿಎಸ್‌ನಾಯಕರ ಮಾತಿನಿಂದ ಜೆಡಿಎಸ್‌ ತೀವ್ರ ಮುಜುಗರಕ್ಕೆ ಒಳಗಾಗಿದ್ದು, ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಹಿನ್ನಡೆ ಆಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+