Get Updates
Get notified of breaking news, exclusive insights, and must-see stories!

MUDA row: ಮುಡಾ ಹಗರಣದಿಂದ ಕರ್ನಾಟಕದ ಉಪ ಚುನಾವಣೆಯ ಮೇಲೆ ಕರಿನೆರಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾಗಿಯೇ ಇದೆ ಎಂದು ಹೈಕೋರ್ಟ್‌ ಮಂಗಳವಾರ ತೀರ್ಪು ನೀಡಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಾರೀ ಹಿನ್ನಡೆಯಾಗಿದೆ. ಅಲ್ಲದೇ ಇದನ್ನೇ ವಿರೋಧ ಪಕ್ಷಗಳು ಅಸ್ತ್ರವನ್ನಾಗಿ ಬಳಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಚನ್ನಪಟ್ಟಣ ಉಪ ಚುನಾವಣೆ ಕಾವು ತೀವ್ರವಾಗಿದೆ. ಇದರೊಂದಿಗೆ ಶಿಗ್ಗಾವಿ ಹಾಗೂ ಸಂಡೂರ್ ವಿಧಾನಸಭಾ ಕ್ಷೇತ್ರದಲ್ಲೂ ಉಪ ಚುನಾವಣೆಗಳು ನಡೆಯಲಿವೆ.

ಈಚೆಗೆ ರಾಜ್ಯ ಸರ್ಕಾರದ ಮೇಲೆ ಕೇಳಿ ಬಂದಿರುವ ಭ್ರಷ್ಟಾಚಾರ ಹಾಗೂ ಹಗರಣದ ಆರೋಪಗಳಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರ ತೀವ್ರ ಮುಜುಗರಕ್ಕೆ ಒಳಗಾಗಿದೆ. ಇದೀಗ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆ ಉಂಟಾಗಿರುವುದು ಸಹಜವಾಗಿಯೇ ರಾಜ್ಯ ಸರ್ಕಾರದ ಮೇಲೂ ಪ್ರಭಾವ ಬೀರಿದ್ದು, ಇದರಿಂದ ಉಪ ಚುನಾವಣೆಗಳ ಮೇಲೆ ಕರಿನೆರಳು ಮೂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಗಂಭೀರವಾದ ಆರೋಪಗಳು ಇವೆ. ಈ ಸಂದರ್ಭದಲ್ಲಿ ಉಪ ಚುನಾವಣೆಯೂ ಸಮೀಪಿಸುತ್ತಿರುವುದರಿಂದ ಅದು ಮತದಾರರ ಮೇಲೆ ಹೇಗೆ ಪರಿಣಾಮ ಬೀರಲಿದೆ ಎನ್ನುವ ಚರ್ಚೆ ಶುರುವಾಗಿದೆ.

Muda scam row Impact of Muda scam on Karnataka by-elections

ಚನ್ನಪಟ್ಟಣದಲ್ಲಿ ಜಿದ್ದಾಜಿದ್ದಿ

ಎಚ್‌.ಡಿ ಕುಮಾರಸ್ವಾಮಿ ಅವರು ಲೋಕಸಭೆಗೆ ಮಂಡ್ಯದಿಂದ ಸ್ಪರ್ಧೆ ಮಾಡಿರುವುದರಿಂದ ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಈ ನಡುವೆ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಮಾಜಿ ಸಂಸದ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ಸಹೋದರ ಡಿ.ಕೆ ಸುರೇಶ್‌ ಅವರು ಸೋತಿದ್ದರು. ಡಿ.ಕೆ ಸುರೇಶ್‌ ಅವರ ಸೋಲಿಗೆ ಬಿಜೆಪಿ ಹಾಗೂ ಜೆಡಿಎಸ್‌ ರಣತಂತ್ರ ರೂಪಿಸಿದ್ದವು. ಬಿಜೆಪಿಯ ರಾಷ್ಟ್ರೀಯ ನಾಯಕ ಅಮಿತ್‌ ಶಾ ಅವರು ಸಹ ಕರ್ನಾಟಕದ ಈ ಭಾಗದಲ್ಲಿ ನಡೆದಿದ್ದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು. ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಪ್ರಬಲವಾಗಿದ್ದರಿಂದಾಗಿ ಸಿ.ಎನ್‌ ಮಂಜುನಾಥ ಅವರ ಗೆಲುವು ಸುಲಭವಾಗಿತ್ತು. ಇದೀಗ ಈ ಕ್ಷೇತ್ರದಲ್ಲಿ ತೀವ್ರ ಪೈಪೋಟಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪ ಚುನಾವಣೆಯ ಪ್ರಚಾರದಿಂದ ಅಂತರ ಕಾಪಾಡಿಕೊಂಡರೆ, ಡಿ.ಕೆ ಶಿವಕುಮಾರ್‌ ಅವರು ಏಕಾಂಗಿಯಾಗಲಿದ್ದಾರೆ. ಆದರೆ, ಈ ಸಾಧ್ಯತೆ ವಿರಳ. ಆದರೆ, ಈ ಪ್ರಕರಣವು ರಾಜ್ಯದ ಉಪ ಚುನಾವಣೆಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಮಾತ್ರ ದಟ್ಟವಾಗಿದೆ.

ಕರ್ನಾಟಕದ ಯಾವ ಕ್ಷೇತ್ರಗಳಲ್ಲಿ ಉಪ ಚುನಾವಣೆ

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದೆ. ಇದರಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವು ಹೈವೋಲ್ಟೇಜ್ ಕಣವಾಗಿದ್ದರೆ. ಉತ್ತರ ಕರ್ನಾಟಕದ ಶಿಗ್ಗಾಂವಿ ಹಾಗೂ ಸಂಡೂರ್ ವಿಧಾನಸಭಾ ಕ್ಷೇತ್ರದಲ್ಲೂ ಉಪ ಚುನಾವಣೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಶಾಸಕ ಈ ತುಕರಾಮ್ ಅವರು ಸಹ ಲೋಕಸಭೆ ಕಣಕ್ಕೆ ಇಳಿದು ಸಂಸತ್‌ ಪ್ರವೇಶಿಸಿದ್ದಾರೆ. ಹೀಗಾಗಿ, ಮೂರು ನಾಯಕರು ಪ್ರತಿನಿಧಿಸುತ್ತಿದ್ದ ವಿಧಾನಸಭಾ ಕ್ಷೇತ್ರಗಳು ತೆರವಾಗಿದ್ದು, ಈ ಕ್ಷೇತ್ರಗಳಲ್ಲಿ ಕೆಲವೇ ದಿನಗಳಲ್ಲಿ ಉಪಚುನಾವಣೆ ನಡೆಯಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+