Siddaramaiah: ಮುಡಾ ತನಿಖೆ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಮೇಲ್ಮನವಿ
ಮುಡಾ ಹಗರಣದ ತೀರ್ಪನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.ಮುಡಾ ಹಗರಣದಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ ಬೆನ್ನಲ್ಲೇ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ಈ ನಡುವೆ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟಕ್ಕೆ ಸಿದ್ದವಾಗಿದ್ದು ಮುಡಾ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ವಿಚಾರವಾಗಿ ಸೆಪ್ಟೆಂಬರ್ 24ರ ಆದೇಶ ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದು ಏಕಸದಸ್ಯ ಪೀಠದ ಆದೇಶ ರದ್ದುಗೊಳಿಸುವಂತೆ ಸಿಎಂ ಮನವಿ ಮಾಡಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕರ್ನಾಟಕ ಹೈಕೋರ್ಟ್ನಲ್ಲಿ ಆರಂಭವಾಗಿದೆ. ಆಗಸ್ಟ್ 19ರಂದು ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಆಗಸ್ಟ್ 29ರ ತನಕ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂದು ಅಧೀನ ನ್ಯಾಯಾಲಯಕ್ಕೆ ಸೂಚನೆ ನೀಡಿ, ವಿಚಾರಣೆ ಮುಂದೂಡಲಾಗಿತ್ತು.
ಗುರುವಾರ ಕರ್ನಾಟಕ ಹೈಕೋರ್ಟ್ನಲ್ಲಿ ಮತ್ತೆ ಅರ್ಜಿಯ ವಿಚಾರಣೆ ಆರಂಭವಾಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅರ್ಜಿಯನ್ನು ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಪರವಾಗಿ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆಯನ್ನು ಆರಂಭಿಸಿದ್ದಾರೆ. ಕರ್ನಾಟಕ ರಾಜ್ಯಪಾಲರ ಕಾರ್ಯದರ್ಶಿ ಪರವಾಗಿ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಲಿದ್ದಾರೆ.

ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿ ರಾಜ್ಯಪಾಲ ಥಾವರಚಂದ್ ಗೆಹ್ಲೇಟ್ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ್ದಾರೆ. ಆದರೆ ಸೆಕ್ಷನ್ 17-ಎ ಅನ್ವಯವಾಗುವುದಿಲ್ಲ. ಇದರ ಆಧಾರದ ಮೇಲೆ ಅನುಮತಿ ನೀಡಿರುವುದು ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.
ಪ್ರಚಾರಕ್ಕೆ ತೆರಳದಂತೆ ಸಂಚು
ಇತ್ತ ಮಹಾರಾಷ್ಟ್ರ, ಜಾರ್ಖಂಡ್ನಲ್ಲಿ ನಡೆಯುವ ಚುನಾವಣೆ ಹಾಗೂ ವಿವಿಧ ಉಪ ಚುನಾವಣೆಗಳ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಳದಂತೆ ಬಿಜೆಪಿ, ಜೆಡಿಎಸ್ ಪಿತೂರಿ ನಡೆಸಿದ್ದು, ಜಾರಿ ನಿರ್ದೇಶನಾಲಯದ ಮೂಲಕ ನವೆಂಬರ್ 7-8ರಮದು ಸಮನ್ಸ್ ನೀಡಲು ಸಿದ್ಧತೆ ನಡೆಸಿವೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ.
ಈ ಬಗ್ಗೆ ಕೆಪಿಸಿಸಿ ನಗರ ವಕ್ತಾರ ಎಂ. ಲಕ್ಷ್ಮಣ ಮಾತನಾಡಿ, 'ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಲೋಕಾಯುಕ್ತ ತನಿಖೆ ಮಾಡುತ್ತಿರುವಾಗ, ಇ.ಡಿ ಪರ್ಯಾಯ ತನಿಖೆ ಮಾಡುವುದು ಕಾನೂನು ಸಮ್ಮತವೇ? ಮಿಲಿಟರಿ ರೀತಿ ಒಳನುಗ್ಗಿ, ಗನ್ ಪಾಯಿಂಟ್ನಲ್ಲಿ ಸಿಬ್ಬಂದಿಯನ್ನು ಬೆದರಿಸಿ, ರಾತ್ರೋರಾತ್ರಿ ಕಡತಗಲನ್ನು ಹೊತ್ತೊಯ್ದಿದ್ದಾರೆ. ಈ ಅಕ್ರಮ ತನಿಖಾ ನಡೆಯನ್ನು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸುತ್ತೇವೆ' ಎಂದು ಆಕ್ರೋಶ ಹೊರಹಾಕಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications