'ಚಿಕ್ಕಮಗಳೂರಿಗೆ ಬನ್ನಿ'.. ಸಿಎಂಗೆ ಕೈ ಮುಗಿದು ಮನವಿ ಮಾಡಿದ ಶಾಸಕ
Recommended Video
ಚಿಕ್ಕಮಗಳೂರು, ಆಗಸ್ಟ್.24. ಸಿಎಂ ಕುಮಾರಸ್ವಾಮಿ ಚಿಕ್ಕಮಗಳೂರು ಜಿಲ್ಲೆಗೆ ಬರುವಂತೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಕೈ ಮುಗಿದು ಮನವಿ ಮಾಡಿದ್ದಾರೆ.
ತಮ್ಮ ಫೇಸ್ ಬುಕ್ ಖಾತೆಯಲ್ಲಿ ಕೈಮುಗಿದು ಜಿಲ್ಲೆಗೆ ಬರುವಂತೆ ಮನವಿ ಮಾಡಿರುವ ಅವರು ಅತಿವೃಷ್ಡಿ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಳಿಕೊಂಡಿದ್ದಾರೆ. ಅಷ್ಟೇ ಅಲ್ಲ, ಮೂಡಿಗೆರೆ ತಾಲೂಕಿನಲ್ಲಿ ಗ್ರಾಮ ವಾಸ್ತವ ಮಾಡುವಂತೆ ಮನವಿ ಮಾಡಿದ್ದಾರೆ. ಇದೀಗ ಶಾಸಕರು ಕೈ ಮುಗಿದು ಬೇಡಿಕೊಳ್ಳುತ್ತಿರುವ ವೀಡಿಯೊ ವೈರಲ್ ಆಗಿದೆ.
ನನ್ನ ಸಾಲ ಮನ್ನಾ ಮಾಡಬೇಡಿ ಎಂದ ಕರಡಗೋಡು ಗ್ರಾಮದ ಸ್ವಾಭಿಮಾನಿ ರೈತ
ಕಾಫಿನಾಡು ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಸೋನೆ ಮಳೆ ಹಾಗೂ ರಣಗಾಳಿಗೆ ಅಲ್ಲಲ್ಲೇ ಬೆಟ್ಟ-ಗುಡ್ಡ ಹಾಗೂ ಭೂಮಿ ಕುಸಿಯುತ್ತಿದ್ದು, ಮಲೆನಾಡಿಗರು ಆತಂಕಕ್ಕೀಡಾಗಿದ್ದಾರೆ. ಕಳೆದ ನಾಲ್ಕು ದಿನದಿಂದ ಮಲೆನಾಡಿನಲ್ಲಿ ಮಳೆಯ ಪ್ರಮಾಣ ತಗ್ಗಿದ್ದು, ಗಾಳಿಯ ವೇಗ ಹೆಚ್ಚಾಗಿದೆ.
ಎರಡು ತಿಂಗಳ ಕಾಲ ಸುರಿದ ಮಳೆಗೆ ಭೂಮಿಯ ತೇವಾಂಶ ಹೆಚ್ಚಾಗಿದ್ದು ಈಗಿನ ದೈತ್ಯ ಗಾಳಿಯಿಂದ ಭೂಕುಸಿತದ ಪ್ರಕರಣ ಹೆಚ್ಚಾಗಿದೆ. ಇಂದು ಗುರುವಾರವೂ ಕೂಡ ಕೊಪ್ಪ ತಾಲೂಕಿನ ಸೋಮೇಶ್ವರಖಾನ್ ಗ್ರಾಮದಲ್ಲಿ ಇದಕ್ಕಿದ್ದಂತೆ 8 ಕ್ಕೂ ಹೆಚ್ಚು ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು ಗ್ರಾಮಸ್ಥರು ಆತಂಕದಲ್ಲಿದ್ದಾರೆ.
ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿಗೆ ಬರುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮೂಡಿಗೆರೆ ಶಾಸಕರು ಮನವಿ ಮಾಡಿದ್ದಾರೆ.