ಎಎಪಿ ಸೇರಿದ್ದ ಮುಖ್ಯಮಂತ್ರಿ ಚಂದ್ರುಗೆ ಮಹತ್ವದ ಹುದ್ದೆ
ಬೆಂಗಳೂರು, ಜುಲೈ 04: ನಟ ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷದ ರಾಜ್ಯ ಜನಸಂಪರ್ಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ತೊರೆದಿದ್ದ ಅವರು ಎಎಪಿ ಸೇರಿದ್ದರು.
ಎಎಪಿ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ ನಿರ್ದೇಶನದಂತೆ ಮುಖ್ಯಮಂತ್ರಿ ಚಂದ್ರು ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಆದೇಶ ಹೊರಡಿಸಿದ್ದಾರೆ. ಪಕ್ಷವನ್ನು ಸದೃಢವಾಗಿ ಬೆಳೆಸುವುದರಲ್ಲಿ ಚಂದ್ರುರವರು ಮಹತ್ವದ ಪಾತ್ರ ವಹಿಸವ ದೃಢ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, "ದೆಹಲಿ ಹಾಗೂ ಪಂಜಾಬ್ನಲ್ಲಿ ಆಮ್ ಆದ್ಮಿ ಪಾರ್ಟಿ ಸರ್ಕಾರಗಳು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿವೆ. ಪಕ್ಷವು ಸ್ವಚ್ಛ ರಾಜಕೀಯ ಹಾಗೂ ಪ್ರಾಮಾಣಿಕ ಆಡಳಿತ ನೀಡುತ್ತಿದೆ" ಎಂದರು.

"ಅಲ್ಲಿನ ಸರ್ಕಾರದ ಸಾಧನೆಗಳನ್ನು ಕರ್ನಾಟಕದ ಜನತೆಗೆ ತಿಳಿಸಿ, ಇಲ್ಲಿ ಕೂಡ ಎಎಪಿಯನ್ನು ಅಧಿಕಾರಕ್ಕೆ ತರಬೇಕಿದೆ. ಈ ನಿಟ್ಟಿನಲ್ಲಿ ಜನಸಂಪರ್ಕ ಹಾಗೂ ಪ್ರಚಾರ ಸಮಿತಿಯು ಶ್ರಮಿಸಲಿದೆ. ನನ್ನ ಮೇಲೆ ವಿಶ್ವಾಸವನ್ನಿಟ್ಟು ಸಮಿತಿಯ ಅಧ್ಯಕ್ಷ ಜವಾಬ್ದಾರಿ ನೀಡಿದ ಪಕ್ಷದ ಮುಖಂಡರಿಗೆ ಧನ್ಯವಾದಗಳು" ಎಂದು ಹೇಳಿದರು.
ಗೌರಿಬಿದನೂರು ಕ್ಷೇತ್ರದ ಮಾಜಿ ಶಾಸಕ, ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಜೂನ್ನಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗಿದ್ದರು. ಬೆಂಗಳೂರಿನ ಪರಾಗ್ ಹೋಟೆಲ್ನಲ್ಲಿ ನಡೆದ ಸಮಾರಂಭದಲ್ಲಿ ಚಂದ್ರು ಅವರನ್ನು ಪಕ್ಷದ ಮುಖಂಡರು ಬರಮಾಡಿಕೊಂಡಿದ್ದರು.
ಬಿಬಿಎಂಪಿಯ ಚುನಾವಣೆ ಕೆಲವೇ ತಿಂಗಳಲ್ಲಿ ಎದುರಾಗಲಿದೆ. 2023ರಲ್ಲಿ ರಾಜ್ಯ ವಿಧಾನಸಭೆಯ ಚುನಾವಣೆಯು ಎದುರಾಗಲಿದೆ. ಇಂತಹ ಸಂದರ್ಭದಲ್ಲಿ ಎಎಪಿಯಲ್ಲಿ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು












Click it and Unblock the Notifications