ಔರಾದ್ ನಲ್ಲಿ ಜಮೀನು ಜಗಳಕ್ಕೆ ತಮ್ಮನನ್ನೇ ಕೊಂದ ಅಣ್ಣ
ಬೀದರ್, ಮೇ 22: ಇಲ್ಲಿನ ಔರಾದ್ ತಾಲೂಕಿನ ನಾರಾಯಣಪುರದಲ್ಲಿ ಜಮೀನು ಹಂಚಿಕೆ ವಿಚಾರದ ಅಸಮಾಧಾನ ಕೊಲೆಯಲ್ಲಿ ಅಂತ್ಯವಾಗಿದೆ. ಅಣ್ಣ್-ತಮ್ಮನ ಮಧ್ಯದ ಜಗಳದಲ್ಲಿ ತಮ್ಮನ ಕೊಲೆಯಾಗಿದೆ. ನಾರಾಯಣಾಪುರದ ಕಾಮಶೆಟ್ಟಿ ಬಿರಾದಾರ ಕೊಲೆಯಾದ ವ್ಯಕ್ತಿ.
ಹೊಲದಲ್ಲಿ ಕಾಮಶೆಟ್ಟಿ ಕೆಲಸ ಮಾಡುತ್ತಿದ್ದರು. ಆ ಸಮಯಕ್ಕೆ ಸ್ಥಳಕ್ಕೆ ಆತನ ಅಣ್ಣ ಅಮರೇಶ, ಅವರ ಮಕ್ಕಳಾದ ರೆವಣಪ್ಪ, ಸುರೇಶ ಬಂದಿದ್ದಾರೆ. ಆ ನಂತರ ಕಾಮಶೆಟ್ಟಿ ಅವರೊಂದಿಗೆ ಜಗಳ ತೆಗೆದು, ಮರ್ಮಾಂಗಕ್ಕೆ ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.

ಅಮರೇಶ ಅವರಿಗೆ ಹಂಚಿಕೆಯಾಗಿದ್ದ ಜಮೀನಿನಲ್ಲಿ ಕಾಮಶೆಟ್ಟಿ ಉಳುಮೆ ಮಾಡುತ್ತಿದ್ದರಂತೆ ಆ ಕಾರಣಕ್ಕೆ ಆಮರೇಶ ಹಾಗೂ ಆತನ ಮಕ್ಕಳು ಹಲ್ಲೆ ನಡೆಸಿದ್ದಾರೆ. "ಸ್ಥಳಕ್ಕೆ ನಾನು, ಮಗ ರಜನಿಕಾಂತ ಬರುವಷ್ಟರಲ್ಲಿ ಮೂವರು ಆರೋಪಿಗಳು ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ನನ್ನ ಪತಿ ಕಾಮಶೆಟ್ಟಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟರು ಎಂದು ಮೃತರ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.
ಅಣ್ಣ-ತಮ್ಮಂದಿರು ಇಪ್ಪತ್ತು ವರ್ಷಗಳ ಹಿಂದೆಯೇ ಜಮೀನು ಹಂಚಿಕೊಂಡಿದ್ದರು. ಆದರೆ ಆ ಪ್ರಕಾರವಾಗಿ ಖಾತೆ ಮಾಡಿಕೊಂಡಿರಲಿಲ್ಲ. ಇದೇ ವಿಚಾರವಾಗಿ ಹತ್ತು ದಿನಗಳಿಂದ ಇಬ್ಬರ ಮಧ್ಯೆ ಜಗಳವಾಗುತ್ತಿತ್ತು ಎಂದು ತಿಳಿಸಲಾಗಿದೆ.
{promotion-urls}
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications