ರಾಜ್ಯ ಸರಕಾರದ ವಿರುದ್ಧ ಕಾಂಗ್ರೆಸ್ ಶಾಸಕರಿಂದ ಛೀಮಾರಿ: ಮುರುಗೇಶ್ ನಿರಾಣಿ
ಬೆಂಗಳೂರು, ಅಕ್ಟೋಬರ್ 12: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಲೋಡ್ ಶೆಡ್ಡಿಂಗ್ ತೀವ್ರಗೊಂಡಿದೆ. ಎಲ್ಲಾ ಇಲಾಖೆಯಲ್ಲಿ ಅಭಿವೃದ್ಧಿ ಶೂನ್ಯ ಪರಿಸ್ಥಿತಿ ತಲೆದೋರಿದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಶಾಸಕರೇ ಸರಕಾರದ ಕಾರ್ಯವೈಖರಿ ವಿರುದ್ಧ ಛೀಮಾರಿ ಹಾಕುವ ಕೆಲಸ ಮಾಡ್ತಿದ್ದಾರೆ. ವಿಶೇಷವಾಗಿ ಕೈಗಾರಿಕೆಗಳು ಎಂಎಸ್ಎಂಇ, ಸಣ್ಣ ಕೈಗಾರಿಕೆದಾರರು ತೊಂದರೆಗೆ ಸಿಲುಕಿದ್ದಾರೆ. ಸರ್ಕಾರ ವಿದ್ಯುತ್ ದರ ಗಣನೀಯವಾಗಿ ಹೆಚ್ಚಳ ಮಾಡಿದೆ. ಎಲ್ಲಾ ಕೈಗಾರಿಕೆದಾರರ ಸಂಘಗಳು, ಸಣ್ಣ- ಗುಡಿ ಕೈಗಾರಿಕೆಗಳು ವಿದ್ಯುತ್ ದರ ಇಳಿಸಲು ಸರ್ಕಾರಕ್ಕೆ ಮನವಿ ಮಾಡಿವೆ. ಹಿಂದೆ ಕರ್ನಾಟಕದಲ್ಲಿ ಬೆಂಗಳೂರನ್ನು ಇಡೀ ವಿಶ್ವವೇ ತಿರುಗಿ ನೋಡುವ ಸ್ಥಿತಿ ಇತ್ತು. ಈಗ ಎಲ್ಲಾ ಕೈಗಾರಿಕೆಗಳು ಬೇರೆ ರಾಜ್ಯದತ್ತ ಮುಖ ಮಾಡಿವೆ. ಹೊಸದಾಗಿ ಬರಬೇಕಿದ್ದ ಕೈಗಾರಿಕೆಗಳೂ ಈಗ ಬೇರೆ ಕಡೆ ಹೋಗುವ ಪರಿಸ್ಥಿತಿ ಇದೆ ಎಂದು ಅವರು ತಿಳಿಸಿದ್ದಾರೆ.

ಸರಕಾರವು ಕೂಡಲೇ ಎಚ್ಚೆತ್ತುಕೊಳ್ಳಬೇಕು. ಮೊದಲ ದರದಲ್ಲೇ ವಿದ್ಯುತ್ ಪೂರೈಕೆ ಮಾಡಬೇಕು ಎಂದಿರುವ ಅವರು, ಸರ್ಕಾರ ಬಿಟ್ಟಿ ಭಾಗ್ಯ ಕೊಟ್ಟಿದ್ದು, ಅದನ್ನು ಸ್ವಾಗತ ಮಾಡುತ್ತೇವೆ. ಅವು ಜನರಿಗೆ ಸರಿಯಾಗಿ ಮುಟ್ಟಿಲ್ಲ. ಬಿಟ್ಟಿ ಭಾಗ್ಯದ ಹೆಸರಲ್ಲಿ ಅಭಿವೃದ್ಧಿ ಕಾರ್ಯ ಆಗಿಲ್ಲ. ಇವರ ಬಳಿ ಅನುದಾನ ಇಲ್ಲ ಎಂದು ಟೀಕಿಸಿದ್ದಾರೆ.
ನಮ್ಮ ಕ್ಷೇತ್ರದ ವಿಚಾರವಾಗಿ ಹೇಳಬೇಕಿದ್ದರೆ, ನಮ್ಮ ಶಾಸಕ ಜಿ.ಟಿ ಪಾಟೀಲ್ ಎಲ್ಲಾ ಕಂಟ್ರಾಕ್ಟ್, ಪ್ರಾಜೆಕ್ಟ್ ಎಲವನ್ನೂ ಮೌಕಿಕವಾಗಿ ಸ್ಥಗಿತಗೊಳಿಸಿದ್ದಾರೆ. ಅತ್ಯಂತ ಪ್ರಾಮಾಣಿಕ ಶಾಸಕ ಅಂತಾರೆ. ಅವರು ಎಲ್ಲರನ್ನೂ ಕರೆದು ಇಷ್ಟು ಪಸರ್ಂಟೇಜ್ ಬೇಕು ಅಂತ ಕೇಳಿದ್ದಾರೆ. ಮುಂದಿನ ಬಾರಿ ಎಂಎಲ್ಎ ಗೆ ನಿಲ್ಲೋದಿಲ್ಲ. ನನಗೆ ದುಡ್ಡು ಕೊಟ್ರೇನೇ ಕೆಲಸ ಮಾಡಿಕೊಡೋದು ಎಂದು ಮುಕ್ತವಾಗಿ ಅಧಿಕಾರಿಗಳು ಹಾಗೂ ಕಂಟ್ರಾಕ್ಟರ್ಸ್ ಬಳಿ ಹೇಳಿದ್ದಾರೆ. ಇದರ ತನಿಖೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಮತದಾರರು ಕೂಡ ಎಚ್ಚೆತ್ತುಕೊಳ್ಳಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಕೃಷ್ಣ ಜಲಭಾಗ್ಯ ನಿಗಮದಿಂದ, ಆಲಮಟ್ಟಿಯಿಂದ ಸಾಕಷ್ಟು ಅಭಿವೃದ್ಧಿ ಪಡೆದಿದ್ದೇವೆ. ಎಲ್ಲಾ ಅಭಿವೃದ್ಧಿ ಯೋಜನೆ ಮುಂದುವರೆಸಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡುತ್ತೇವೆ. ಬೀಳಗಿ ಶಾಸಕ ಜಿ.ಟಿ ಪಾಟೀಲ್ ಮತ್ತು ಅವರ ಪಿ.ಎ ಪ್ರಕಾಶ್ ಅವರ ಮೇಲೆ ಆರೋಗ್ಯ ಇಲಾಖೆ ಎಫ್ಐಆರ್ ಹಾಕಿದ್ದಾರೆ. ಅವರ ಮೇಲೆ ಕೇಸ್ ಆಗಿದೆ. ಪ್ರಾಮಾಣಿಕ ಶಾಸಕರು ಅಂತ ಹೇಳಿಕೊಂಡು ತಮ್ಮ ಪಿಎ ಮೂಲಕ ಹಗಲು ದರೋಡೆ ಮಾಡ್ತಿದ್ದಾರೆ. ಕೂಡಲೇ ಅದನ್ನು ನಿಲ್ಲಿಸಬೇಕು ಎಂದಿದ್ದಾರೆ.
ಮತ್ತೆ ಹಿಂದಿನ ಸರ್ಕಾರದ ರೀತಿ ಅಭಿವೃದ್ಧಿ ಮಾಡಬೇಕು. ಬಾಗಲಕೋಟೆಯಲ್ಲಿ ಹಗಲು ದರೋಡೆ ಆಗುತ್ತಿದೆ. ಸರ್ಕಾರದ ಎಲ್ಲಾ ಸ್ಕೀಮ್ ನಲ್ಲಿ ಪಸೆರ್ಂಟೇಜ್ ಇಟ್ಟುಕೊಂಡೇ ಹಣ ಕೊಡುತ್ತಿದ್ದಾರೆ. ಇದರಲ್ಲಿ ಯಾರಿಗೆ ಏನು ಮುಟ್ಟಿಸಬೇಕೋ ಅದನ್ನು ಮುಟ್ಟಿಸಿದರೆ ಆಯಿತೆಂಬ ದುಸ್ಥಿತಿ ಇದೆ ಎಂದು ಟೀಕಿಸಿದ್ದಾರೆ.
-
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications