ಬಂಡವಾಳ ಹೂಡಿಕೆದಾರರ ಸಮಾವೇಶ: 7.6ಲಕ್ಷ ಕೋಟಿ ಒಪ್ಪಂದಕ್ಕೆ ಸಹಿ
ಬೆಂಗಳೂರು, ನವೆಂಬರ್2: ಕೈಗಾರಿಕಾ ಇಲಾಖೆಯಲ್ಲಿ ಇಂದು ನೆನಪಿಡಬೇಕಾದ ದಿನ. 2010ರಲ್ಲಿ ಇದೇ ಜಾಗದಲ್ಲಿ ಹೂಡಿಕೆ ಸಮಾವೇಶ ಮಾಡಿದ್ದೆವು. 3.8 ಲಕ್ಷ ಕೋಟಿ ರೂಪಾಯಿ ಒಪ್ಪಂದಕ್ಕೆ ಸಹಿ ಹಾಕಿದ್ದೆವು. 2013 ರಲ್ಲಿ 7.6 ಲಕ್ಷ ಕೋಟಿ ಒಪ್ಪಂದಕ್ಕೆ ಸಹಿ ಹಾಕಿದ್ದೆವು. ಇಂದು ನಡೆಯುತ್ತಿರುವ ಸಮಾವೇಶದಲ್ಲಿ 7.6 ಲಕ್ಷ ಕೋಟಿಗಿಂತ ಹೆಚ್ಚು ಒಡಂಬಡಿಕೆಗೆ ಸಹಿ ಹಾಕುವ ಸಾಧ್ಯತೆ ಇದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದಿನಿಂದ ಆರಂಭವಾದ ಮೂರು ದಿನಗಳ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸಮಾವೇಶದ ಮೊದಲ ದಿನದ ಬಗ್ಗೆ ಮಾತನಾಡಿದ್ದಾರೆ.
ನವೆಂಬರ್ 4ರಂದು ಸಮಾರೋಪ ಸಮಾರಂಭ ಕಾರ್ಯಕ್ರಮದಂದು ಸಂಪೂರ್ಣ ಮಾಹಿತಿ ನೀಡುತ್ತೇವೆ. ಆಹ್ವಾನ ನೀಡಿದ ಎಲ್ಲ ಅತಿಥಿಗಳು ಇಂದು ಸಮಾವೇಶಕ್ಕೆ ಹಾಜರಾಗಿದ್ದರು. ಪ್ರಧಾನಿಗಳು 10.30 ವರ್ಚುವಲ್ ಮೂಲಕ ಭಾಗಿಯಾಗಿದ್ದರು. ಮೊದಲ ದಿನ ಬಹಳ ಅಚ್ಚುಕಟ್ಟಾಗಿ ನಡೆದಿದೆ ಎಂದರು.

ಇನ್ನು ಎಲ್ಲಾ ಹೂಡಿಕೆದಾರರು ಸರ್ಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದರು. ಇಂದು ರಿನೆವೆಬಲ್ ಎನರ್ಜಿ,ಮತ್ತು ಬಿಯಾಂಡ್ ಬೆಂಗಳೂರು ಬಗ್ಗೆ ಅತಿ ಹೆಚ್ಚು ಹೂಡಿಕೆ ಬಂದಿದೆ. 2ನೇ ಹಂತದ ನಗರಗಳಲ್ಲಿ ಹೂಡಿಕೆ ಬಂದಿರುವುದು ಖುಷಿ. ಇದೇ ವರ್ಷ ಶಿವಮೊಗ್ಗ, ಹಾಸನ, ವಿಜಯಪುರದಲ್ಲಿ ವಿಮಾನ ನಿಲ್ದಾಣ ಬರಲಿದೆ. ವಿಮಾನ ನಿಲ್ದಾಣ ನಿರ್ಮಾಣ, ರೈಲ್ವೇ ಅಭಿವೃದ್ಧಿ ಬಗ್ಗೆ ನಮ್ಮ ಸರ್ಕಾರ ಗಮನ ಹರಿಸಿದೆ
ಒಡಂಬಡಿಕೆಗಳು ಹೆಚ್ಚು ಅನುಷ್ಠಾನವಾಗುವ ನೀರಿಕ್ಷೆ ಇದೆ. ಈ ಹಿಂದಿನ ಹೂಡಿಕೆ ಸಮಾವೇಶಕ್ಕಿಂತ ಹೆಚ್ಚಿನ ಒಪ್ಪಂದಗಳು ಈ ಬಾರಿ ಕನ್ವರ್ಷನ್ ಆಗಲಿದೆ. ಉದ್ಯಮ ಕ್ಷೇತ್ರದ ದಿಗ್ಗಜರು ಇಂದು ವೇದಿಕೆ ಅಲಂಕರಿಸಿದ್ದಾರೆ. ದುಬೈ, ದಾವೋಸ್, ಜಪಾನ್, ಜರ್ಮನಿ, ದೆಹಲಿ, ಮುಂಬೈಗಳಲ್ಲಿ ನಾವು ಶೋ ಮಾಡಿದ್ದೇವು. ನವೆಂಬರ್ 4ರಂದು ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಸಮಾರೋಪ ಸಮಾರಂಭ ನಡೆಯಲಿದೆ ಎಂದರು.
ಇನ್ನು ಭಾರತ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ತಲುಪುವ ಗುರಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನೀಡಿದ್ದಾರೆ. ಮುಖ್ಯಮಂತ್ರಿಗಳು ಒಂದು ಟ್ರಿಲಿಯನ್ ಆರ್ಥಿಕತೆ ತಲುಪುವುದಾಗಿ ಹೇಳಿದ್ದಾರೆ. ಕರ್ನಾಟಕ ಸರ್ಕಾರ ನೂರಕ್ಕೆ ನೂರಾರಷ್ಟು ವಿವಿಧ ಸೆಕ್ಟರ್ನಲ್ಲಿ ಆ ಗುರಿಯನ್ನು ತಲುಪಲಿದೆ ಎನ್ನುವ ಭರವಸೆಯನ್ನು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವ್ಯಕ್ತಪಡಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications