ದಾಸೀಮಯ್ಯ ವಿವಾದಕ್ಕೆ ಮುರುಘಾ ಶ್ರೀಗಳಿಂದ ಸ್ಪಷ್ಟನೆ
ದಾವಣಗೆರೆ, ಏ.6: ದಾಸೀಮಯ್ಯನವರ ಇರುವಿಕೆ ಬಗ್ಗೆ ಎದ್ದಿರುವ ವಾದ -ವಿವಾದ, ಯಾರು ನಿಜವಾದ ದಾಸೀಮಯ್ಯ ಎಂಬ ಗೊಂದಲಕ್ಕೆ ಚಿತ್ರದುರ್ಗದ ಬೃಹನ್ಮಠದ ಶಿವಮೂರ್ತಿ ಮುರುಘಾ ಶರಣರು ಸ್ಪಷ್ಟನೆ ನೀಡಿದ್ದಾರೆ.
ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಹಾಗೂ ಶಿವ ದಾಸಿಮಯ್ಯ ಮೂರು ಲಿಂಗಧಾರಿಗಳಾಗಿದ್ದರು. ಸಮಾಜದ ಪುರುಷರು, ಎಲ್ಲರಿಗೂ ಅವರು ಬೇಕಾಗಿದ್ದವರು ಎಂದು ಮುರುಘಾ ಶ್ರೀಗಳು ಹೇಳಿದ್ದಾರೆ.
ದಾವಣಗೆರೆಯ ಶಿವಯೋಗಾಶ್ರಮ ಆವರಣದಲ್ಲಿ ನಡೆದ ಶಿವ ಸಿಂಪಿ ಸಮುದಾಯದ ಬೃಹತ್ ಸಮಾವೇಶದ ಅಧ್ಯಕ್ಷತೆ ವಹಿಸಿಕೊಂಡು ಶರಣರು ಮಾತನಾಡುತ್ತಿದರು. [ಜಾತಿ ಗಣತಿ : ಏಕೆ, ಏನು, ಇದೆಲ್ಲಾ ಬೇಕೆ?]
ಶಿವ ಸಿಂಪಿ ಸಮಾಜದವರು ಸಂಸ್ಕೃತಿ, ಧರ್ಮ, ಜಾತಿ, ಕುಲ ಕಸುಬು, ನೀತಿ ನೇಮಗಳನ್ನು ಉಳಿಸಿಕೊಂಡು ಹೋಗಬೇಕು, ಜನಗಣತಿ ಕಲಂ 5ರಲ್ಲಿ ಲಿಂಗಾಯತ ಕಲಂ 6 ರಲ್ಲಿ ಶಿವಸಿಂಪಿ ಹಾಗೂ ಕಲಂ ರಲ್ಲಿ ಶಿವ ಸಿಂಪಿ ಲಿಂಗಾಯತ ಎಂದು ಸಮಾಜದವರು ಬರೆಯಲು ನಿರ್ಧರಿಸಿರುವುದು ಸರಿಯಾಗಿದೆ ಎಂದು ತಮ್ಮ ಬೆಂಬಲ ವ್ಯಕ್ತಪಡಿಸಿದರು.

ಚೇಡರ ದಾಸಿಮಯ್ಯ ಅವರ ಜಯಂತಿ ಮಾಡಬೇಕು ಎಂದು ಖ್ಯಾತ ಸಂಶೋಧಕ ಡಾ. ಎಂ. ಚಿದಾನಂದಮೂರ್ತಿ ಆಗ್ರಹಿಸಿ ಪ್ರತಿಭಟನೆ ನಡೆಸಿದ ಘಟನೆ ವಿಧಾನಸೌಧದಲ್ಲಿ ಇತ್ತೀಚೆಗೆ ನಡೆದಿತ್ತು.[ದೇವರ ದಾಸಿಮಯ್ಯ ಜಯಂತಿಗೆ ಚಿಮೂ ವಿರೋಧ]
ದೇವರ ದಾಸಿಮಯ್ಯ ವಚನಕಾರ ಅಲ್ಲ. ಅವನು ಒಬ್ಬ ಶಿವಭಕ್ತ. ಅವನು ಏನೂ ಬರೆದಿಲ್ಲ. ಜೇಡರ ದಾಸಿಮಯ್ಯ ನಿಜವಾದ ವಚನಕಾರ, ಆತನ ಹೆಸರಿನಲ್ಲಿ ಜಯಂತಿ ನಡೆಸಬೇಕು ಎಂದು ಹಿರಿಯ ಸಾಹಿತಿ ಡಾ. ಎಂ. ಚಿದಾನಂದಮೂರ್ತಿ ಅವರು ಸ್ಪಷ್ಟನೆ ನೀಡಿದ್ದರು.
ಸಿಂಪಿ (ದರ್ಜಿ ವೃತ್ತಿಯವರು), ಸಿಂಪಿಗ ಮುಂತಾದ ಹೆಸರುಗಳನ್ನು '2ಎ'ಗೆ ಸೇರಿಸಿದ್ದರೂ ಸಹ ಶಿವಸಿಂಪಿ ಸಮುದಾಯವನ್ನು ಮಾತ್ರ ಮೀಸಲಾತಿಯಿಂದ ಹೊರಗಿಡಲಾಗಿದೆ. ಶಿವಸಿಂಪಿ ಸಮುದಾಯವನ್ನೂ ಸಹ '2ಎ' ಗೆ ಸೇರಿಸಬೇಕು ಎಂದು ಆಗ್ರಹಿಸಲು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications