ದಾಸೀಮಯ್ಯ ವಿವಾದಕ್ಕೆ ಮುರುಘಾ ಶ್ರೀಗಳಿಂದ ಸ್ಪಷ್ಟನೆ
ದಾವಣಗೆರೆ, ಏ.6: ದಾಸೀಮಯ್ಯನವರ ಇರುವಿಕೆ ಬಗ್ಗೆ ಎದ್ದಿರುವ ವಾದ -ವಿವಾದ, ಯಾರು ನಿಜವಾದ ದಾಸೀಮಯ್ಯ ಎಂಬ ಗೊಂದಲಕ್ಕೆ ಚಿತ್ರದುರ್ಗದ ಬೃಹನ್ಮಠದ ಶಿವಮೂರ್ತಿ ಮುರುಘಾ ಶರಣರು ಸ್ಪಷ್ಟನೆ ನೀಡಿದ್ದಾರೆ.
ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಹಾಗೂ ಶಿವ ದಾಸಿಮಯ್ಯ ಮೂರು ಲಿಂಗಧಾರಿಗಳಾಗಿದ್ದರು. ಸಮಾಜದ ಪುರುಷರು, ಎಲ್ಲರಿಗೂ ಅವರು ಬೇಕಾಗಿದ್ದವರು ಎಂದು ಮುರುಘಾ ಶ್ರೀಗಳು ಹೇಳಿದ್ದಾರೆ.
ದಾವಣಗೆರೆಯ ಶಿವಯೋಗಾಶ್ರಮ ಆವರಣದಲ್ಲಿ ನಡೆದ ಶಿವ ಸಿಂಪಿ ಸಮುದಾಯದ ಬೃಹತ್ ಸಮಾವೇಶದ ಅಧ್ಯಕ್ಷತೆ ವಹಿಸಿಕೊಂಡು ಶರಣರು ಮಾತನಾಡುತ್ತಿದರು. [ಜಾತಿ ಗಣತಿ : ಏಕೆ, ಏನು, ಇದೆಲ್ಲಾ ಬೇಕೆ?]
ಶಿವ ಸಿಂಪಿ ಸಮಾಜದವರು ಸಂಸ್ಕೃತಿ, ಧರ್ಮ, ಜಾತಿ, ಕುಲ ಕಸುಬು, ನೀತಿ ನೇಮಗಳನ್ನು ಉಳಿಸಿಕೊಂಡು ಹೋಗಬೇಕು, ಜನಗಣತಿ ಕಲಂ 5ರಲ್ಲಿ ಲಿಂಗಾಯತ ಕಲಂ 6 ರಲ್ಲಿ ಶಿವಸಿಂಪಿ ಹಾಗೂ ಕಲಂ ರಲ್ಲಿ ಶಿವ ಸಿಂಪಿ ಲಿಂಗಾಯತ ಎಂದು ಸಮಾಜದವರು ಬರೆಯಲು ನಿರ್ಧರಿಸಿರುವುದು ಸರಿಯಾಗಿದೆ ಎಂದು ತಮ್ಮ ಬೆಂಬಲ ವ್ಯಕ್ತಪಡಿಸಿದರು.

ಚೇಡರ ದಾಸಿಮಯ್ಯ ಅವರ ಜಯಂತಿ ಮಾಡಬೇಕು ಎಂದು ಖ್ಯಾತ ಸಂಶೋಧಕ ಡಾ. ಎಂ. ಚಿದಾನಂದಮೂರ್ತಿ ಆಗ್ರಹಿಸಿ ಪ್ರತಿಭಟನೆ ನಡೆಸಿದ ಘಟನೆ ವಿಧಾನಸೌಧದಲ್ಲಿ ಇತ್ತೀಚೆಗೆ ನಡೆದಿತ್ತು.[ದೇವರ ದಾಸಿಮಯ್ಯ ಜಯಂತಿಗೆ ಚಿಮೂ ವಿರೋಧ]
ದೇವರ ದಾಸಿಮಯ್ಯ ವಚನಕಾರ ಅಲ್ಲ. ಅವನು ಒಬ್ಬ ಶಿವಭಕ್ತ. ಅವನು ಏನೂ ಬರೆದಿಲ್ಲ. ಜೇಡರ ದಾಸಿಮಯ್ಯ ನಿಜವಾದ ವಚನಕಾರ, ಆತನ ಹೆಸರಿನಲ್ಲಿ ಜಯಂತಿ ನಡೆಸಬೇಕು ಎಂದು ಹಿರಿಯ ಸಾಹಿತಿ ಡಾ. ಎಂ. ಚಿದಾನಂದಮೂರ್ತಿ ಅವರು ಸ್ಪಷ್ಟನೆ ನೀಡಿದ್ದರು.
ಸಿಂಪಿ (ದರ್ಜಿ ವೃತ್ತಿಯವರು), ಸಿಂಪಿಗ ಮುಂತಾದ ಹೆಸರುಗಳನ್ನು '2ಎ'ಗೆ ಸೇರಿಸಿದ್ದರೂ ಸಹ ಶಿವಸಿಂಪಿ ಸಮುದಾಯವನ್ನು ಮಾತ್ರ ಮೀಸಲಾತಿಯಿಂದ ಹೊರಗಿಡಲಾಗಿದೆ. ಶಿವಸಿಂಪಿ ಸಮುದಾಯವನ್ನೂ ಸಹ '2ಎ' ಗೆ ಸೇರಿಸಬೇಕು ಎಂದು ಆಗ್ರಹಿಸಲು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications