ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ : ಕುಮಾರಸ್ವಾಮಿ ಭಾವುಕ ನುಡಿ
Recommended Video

ಬೆಂಗಳೂರು, ಅಕ್ಟೋಬರ್ 26: ಚುನಾವಣಾ ಸಮಯದಲ್ಲಿ ಸಾವಿನ ಮಾತನ್ನಾಡಿದ್ದ ಕುಮಾರಸ್ವಾಮಿ ಅವರು ಈಗ ಮತ್ತೊಮ್ಮೆ ಅದೇ ಮಾತುಗಳನ್ನು ಆಡಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಆಯೋಜಿಸಿದ್ದ ಉಪ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಭಾವುಕರಾದ ಕುಮಾರಸ್ವಾಮಿ, 'ನಾನು ಎಷ್ಟು ದಿನ ಬದುಕಿರುತ್ತೀನೋ ಗೊತ್ತಿಲ್ಲ' ಎಂದಿದ್ದಾರೆ.
ತೀವ್ರ ಭಾವುಕರಾಗಿ ಮಾತನಾಡಿದ ಸಿಎಂ, 'ಆರೋಗ್ಯ ಕೈಕೊಡುತ್ತಿದೆ, ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ, ಇಸ್ರೆಲ್ಗೆ ಹೋಗಿದ್ದಾಗಲೇ ಸಾಯಬೇಕಿತ್ತು, ಬದುಕಿ ಬಂದಿದ್ದೇನೆ' ಎಂದಿದ್ದಾರೆ.
ನಾನು ಮೂಲತಃ ರಾಜಕಾರಣಿಯಲ್ಲಿ ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದಿದ್ದೇನೆ. ಕಳೆದ ಐದು ತಿಂಗಳಿನಿಂದ ನನ್ನನ್ನು ಬಿಜೆಪಿ ನಾಯಕರು ಅನುಮಾನದಿಂದಲೇ ನೋಡುತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಮೈತ್ರಿ ಸರ್ಕಾರ ದೇವರು ಕೊಟ್ಟ ಅವಕಾಶ
ಕಾಂಗ್ರೆಸ್-ಬಿಜೆಪಿ ಪಕ್ಷಗಳ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದೇನೆ, ಆದರೆ ದೇಶ ಕವಲು ದಾರಿಯಲ್ಲಿರುವ ಸಂದರ್ಭದಲ್ಲಿ ಮೈತ್ರಿ ಸರ್ಕಾರ ರಚನೆ ಆಗಿದೆ. ಈ ಮೈತ್ರಿ ಸರ್ಕಾರ ದೇವರು ಕೊಟ್ಟ ಅವಕಾಶ ಎಂದು ಹೇಳಿದರು.

12 ವರ್ಷದ ಹಿಂದೆ ರಾಜಕೀಯ ಹೀಗಿರಲಿಲ್ಲ
12 ವರ್ಷದ ಹಿಂದೆ ಬಿಜೆಪಿ ಜೊತೆ ಸರ್ಕಾರ ರಚಿಸಿದ್ದಾಗ ಇಷ್ಟೊಂದು ಅಪಪ್ರಚಾರ ಮಾಡಲಾಗಿರಲಿಲ್ಲ. ಬಿಜೆಪಿ ಪಕ್ಷವು ಅಪಪ್ರಚಾರದಲ್ಲಿ ತೊಡಗಿಕೊಂಡಿದೆ. ಆ ಪಕ್ಷದ ಮುಖಂಡರು ನನ್ನ ಆರೋಗ್ಯ ಸಮಸ್ಯೆಯನ್ನು ಸಹ ಗೇಲಿ ಮಾಡುತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದೆ
ನಾನು ರಾಜಕೀಯಕ್ಕೆ ಬರುವ ಮುಂಚಿನಿಂದಲೇ ಭಾವುಕಜೀವಿ. ಮಾನವೀಯತೆಯನ್ನು ಮೈಗೂಡಿಸಿಕೊಂಡಿದ್ದೇನೆ. ನನ್ನ ವಿರುದ್ಧ ವೈಯಕ್ತಿಕ ದಾಳಿ ನಡೆಸಿದರೂ ನಾನು ದ್ವೇಷ ಸಾಧಿಸಲು ಹೋಗುವುದಿಲ್ಲ. ನನ್ನ ಗಮನವೆಲ್ಲಾ ಬಡವರ ಮೇಲೆ, ರೈತರ ಮೇಲೆ ಇರುತ್ತದೆ ಎಂದು ಅವರು ಭಾವುಕವಾಗಿ ಹೇಳಿದರು.

ರೈತ ಆತ್ಮಹತ್ಯೆ ನನ್ನ ಆರೋಗ್ಯದ ಮೇಲೆ ಪರಿಣಾಮ ಬೀರಿದೆ
ರೈತರ ಸರಣಿ ಆತ್ಮಹತ್ಯೆಗಳು ನನ್ನ ಮನಸ್ಸನ್ನು ಬಹಳ ಘಾಸಿಗೊಳಿಸಿವೆ. ಅದು ನನ್ನ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಆದರೆ ಕೆಲವರು ನನ್ನ ಆರೋಗ್ಯ ಸ್ಥಿತಿಯ ಬಗ್ಗೆ ವ್ಯಂಗ್ಯ ಮಾಡುತ್ತಾರೆ ಎಂದು ಸಿಎಂ ಹೇಳಿದರು.

ರೈತರ ಸಾಲಮನ್ನಾ ಮಾಡಿದ್ದೇನೆ
ಮೈತ್ರಿ ಸರ್ಕಾರ ಬೀಳುತ್ತೆ ಎಂಬ ಯಾವ ಅನುಮಾನವೂ ಬೇಡ. ಮೈತ್ರಿ ಸರ್ಕಾರದಲ್ಲಿ ಇದ್ದುಕೊಂಡೇ ರೈತರ ಸಾಲಮನ್ನಾದ ನಿರ್ಣಯ ಕೈಗೊಂಡಿದ್ದೇನೆ. ಸಹಕಾರಿ ಬ್ಯಾಂಕುಗಳ 10,300 ಕೋಟಿ ಸಾಲಮನ್ನಾ ಮಾಡಿದ್ದೇವೆ. ಸಹಕಾರಿ ಬ್ಯಾಂಕಿನ 600 ಕೋಟಿ ಸಾಲಮನ್ನಾ ಮಾಡಿದರೆ ಸಂಪೂರ್ಣ ಕಂತು ಮುಗಿದಂತಾಗುತ್ತದೆ ಎಂದರು.

ನವೆಂಬರ್ನಿಂದ ಹಿರಿಯರಿಗೆ ಸಿಹಿ ಸುದ್ದಿ
ಬಜೆಟ್ನಲ್ಲಿ ಘೋಷಿಸಿದ್ದ, ಹಿರಿಯರಿಗೆ ಪಿಂಚಣಿ ಹೆಚ್ಚಳವು ನವೆಂಬರ್ 1 ರಿಂದ ಜಾರಿಗೆ ಬರುತ್ತದೆ. 600 ರ ಬದಲಿಗೆ 1000 ಪಿಂಚಣಿಯು ನವೆಂಬರ್ ಒಂದರಿಂದ ಹಿರಿಯರ ಖಾತೆಗೆ ಜಮಾ ಆಗಲಿದೆ ಎಂದು ಅವರು ಹೇಳಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications