'ರವಿ ಅವರ 2ನೇ ಪತ್ನಿಗೂ ಸುನೀಲ್ ಗೂ ಸಂಬಂಧವಿಲ್ಲ'
ಚಿಕ್ಕಮಗಳೂರು, ಡಿಸೆಂಬರ್ 10: 'ನನ್ನ ಪತಿ ಸುನೀಲ್ ಹೆಗ್ಗರವಳ್ಳಿ ಅವರ ಜೀವಕ್ಕೆ ಅಪಾಯವಿದೆ, ಅವರಿಗೆ ಪೊಲೀಸ್ ರಕ್ಷಣೆ ನೀಡಬೇಕು, ನಮ್ಮ ಕುಟುಂಬಕ್ಕೂ ರಕ್ಷಣೆ ಬೇಕು' ಎಂದು ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಅವರ ಪತ್ನಿ ಸುಚಿತಾ ಅವರು ಮಾಧ್ಯಮ ಪ್ರತಿನಿಧಿಗಳ ಮುಂದೆ ಹೇಳಿಕೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೆಗ್ಗರವಳ್ಳಿ ಗ್ರಾಮದಲ್ಲಿ ಸುನೀಲ್ ಅವರ ಮನೆಗೆ ಭೇಟಿ ನೀಡಿದ ಮಾಧ್ಯಮ ಪ್ರತಿನಿಧಿಗಳ ಜತೆ ಸುನಿಲ್ ಅವರ ತಂದೆ ನಂಜೇಗೌಡ ಮತ್ತು ಪತ್ನಿ ಸುಚಿತಾ ಅವರು ಮಾತನಾಡಿದರು.
ರಕ್ಷಣೆ ಕೋರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರುಗೆ ಮನವಿ ಸಲ್ಲಿಸುವುದಾಗಿ ಹೇಳಿದರು.

ಯಾವುದೇ ಸಂಬಂಧವಿಲ್ಲ: ನನ್ನ ಪತಿ ಸುನೀಲ್ ನಮ್ಮ ಕುಟುಂಬದ ಸದಸ್ಯರ ಜತೆ ಚೆನ್ನಾಗಿದ್ದಾರೆ. ಅವರಿಗೆ ಯಾವುದೇ ಅಕ್ರಮ ಸಂಬಂಧವಿಲ್ಲ. ರವಿ ಬೆಳಗೆರೆಯ ಅವರ 2ನೇ ಪತ್ನಿಗೂ ನನ್ನ ಗಂಡನಿಗೂ ಯಾವುದೇ ಸಂಬಂಧವಿಲ್ಲ ಎಂದು ಸುನೀಲ್ ಅವರ ಪತ್ನಿ ಸುಚಿತಾ ಸ್ಪಷ್ಟಪಡಿಸಿದ್ದಾರೆ.
ಸೋದರನಂತೆ ಕಾಣುತ್ತಿದ್ದರು: ರವಿ ಬೆಳಗೆರೆ ಅವರು ನಮ್ಮ ಮನೆಗೂ ಬಂದಿದ್ದರು. ಇಲ್ಲೇ ಅವರ ಫಾರ್ಮ್ ಹೌಸ್ ಕೂಡಾ ಇದೆ. ನನ್ನ ಗಂಡನನ್ನು ಮನೆ ಮಗನಂತೆ ಕಾಣುತ್ತಿದ್ದರು.
ಈಗ ಅವರನ್ನು ಕೊಲ್ಲಲು ಸುಪಾರಿ ಕೊಟ್ಟಿದ್ದರು ಎಂದು ಕೇಳಿ ನಿಜಕ್ಕೂ ನಮಗೆಲ್ಲರಿಗೂ ಆಘಾತವಾಗಿದೆ. ಯಾರನ್ನು ನಂಬುವುದು ಯಾರನ್ನು ಬಿಡುವುದು ತಿಳಿಯುತ್ತಿಲ್ಲ. ನಮ್ಮ ಕುಟುಂಬಕ್ಕೆ ರಕ್ಷಣೆ ಬೇಕಿದೆ ಎಂದು ಸುಚಿತಾ ತಮ್ಮ ನೋವು ತೋಡಿಕೊಂಡರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications