ಪೆನ್ ಡ್ರೈವ್ನಲ್ಲಿರುವ ರಹಸ್ಯ ಹೊರಗೆ ಬಂದರೆ ಮಂತ್ರಿಗಳು ರಾಜೀನಾಮೆ: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು, ಜುಲೈ 06: ವರ್ಗಾವಣೆ ಧಂದೆ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ಸಿಡಿದೆದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ಪೆನ್ ಡ್ರೈವ್ನಲ್ಲಿರುವ ರಹಸ್ಯ ಹೊರಗೆ ಬಂದರೆ ಮಂತ್ರಿಗಳು ರಾಜೀನಾಮೆ ನೀಡುತ್ತಾರೆ ಎಂದು ಕುಮಾರಸ್ವಾಮಿ ಬಾಂಬ್ ಹಾಕಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪೆನ್ ಡ್ರೈವ್ ದಾಖಲೆಯನ್ನು ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುವೆ.ಈ ಸರ್ಕಾರದವರು ಏನು ಮಾತಾಡಬೇಕೋ, ಎಲ್ಲವನ್ನೂ ಮಾತನಾಡಲಿ. ನನಗೆ ಹಿಟ್ ಅಂಡ್ ರನ್ ಅಂತಾರೆ. ಏನಾದರೂ ಹೇಳಿಕೊಳ್ಳಲಿ ಅಂತಾರೆ. ಅವರು ಹೀಗೆ ಮಾತನಾಡುತ್ತಿರಲಿ ಸೂಕ್ತ ಸಮಯದಲ್ಲಿ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪೆನ್ ಡ್ರೈವ್ ದಾಖಲೆ ಬಿಡುಗಡೆಗೆ ನನಗೆ ಆತುರ ಇಲ್ಲ. ವರ್ಗಾವಣೆ ದಂಧೆ ಸಿಎಂ ಮೂಗಿನ ನೇರದಲ್ಲಿ ನಡೆಯುತ್ತಿದೆ. ಅವರ ಮೂಲಕವೇ ವರ್ಗಾವಣೆ ಆದೇಶ ಆಗುತ್ತದೆ. ತಕ್ಷಣ ಅದು ಬದಲಾವಣೆ ಆಗುತ್ತದೆ. ಸರ್ಕಾರ ನಡೆಯಬೇಕಾದರೆ ವರ್ಗಾವಣೆ ಅನಿವಾರ್ಯ. ಆದರೆ ಯಾವ ಅಳತೆಗೋಲು ಇಟ್ಟುಕೊಂಡು ವರ್ಗಾವಣೆ ಮಾಡುತ್ತಿದ್ದೀರಿ?, ಇಷ್ಟೊಂದು ಅನುಭವ ಇಟ್ಕೊಂಡು ನಿಮಗೆ ಗೊತ್ತಿಲ್ಲವಾ?, ಎಲ್ಲಾ ಪ್ರಮುಖ ಹುದ್ದೆಗಳೆಲ್ಲವೂ ದುಡ್ಡಿನಿಂದಲೇ ವರ್ಗಾವಣೆ ಆಗುತ್ತಿವೆ ಎಂದು ಕಿಡಿಕಾರಿದರು.
ನನ್ನ ಪೆನ್ ಡ್ರೈವ್ ಖಾಲಿ ಇಲ್ಲ, ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇನೆ. ನನ್ನ ಪೆನ್ ಡ್ರೈವ್ ಎಮ್ಟಿ ಅಲ್ಲ. ನನ್ನ ಪೆನ್ ಡ್ರೈವ್ ಹೈದ್ರಾಬಾದ್ ನಲ್ಲಿ ತಯಾರಿ ಮಾಡಿದಲ್ಲ. ಶೀಘ್ರದಲ್ಲೇ ನಾನು ಪೆನ್ ಡ್ರೈವ್ ಬಿಡುಗಡೆ ಮಾಡೇ ಮಾಡುತ್ತೇನೆ ಎಂದು ಹೇಳಿದ್ದಾರೆ.
ಈ ಹಿಂದೆ ಬಿಜೆಪಿ ಸರ್ಕಾರದ ಆಡಳಿತ ನಡೆಸಿದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಆರೋಪ ಮಾಡಿದ್ದರು. ಆದರೆ ಯಾವುದೇ ದಾಖಲೆಗಳನ್ನ ಬಿಡುಗಡೆ ಮಾಡಿಲ್ಲ. ಸಿದ್ದರಾಮಯ್ಯ ಅವರು ವಿಪಕ್ಷ ನಾಯಕರಾಗಿ ಹಲವು ವರ್ಷ ಕೆಲಸ ಮಾಡಿದ್ದಾರೆ. ವಿರೋಧ ಪಕ್ಷದಲ್ಲಿ ಇದ್ದಾಗ ಸಿದ್ದರಾಮಯ್ಯ ಯಾವುದೇ ದಾಖಲೆ ಬಿಡುಗಡೆ ಮಾಡಿಲ್ಲ. ಇದುವರೆಗೆ ದಾಖಲೆ ಕೊಟ್ಟು ಯಾವುದೇ ಆರೋಪಗಳಿಗೆ ತಾರ್ಕಿಕ ಅಂತ್ಯ ಕೊಟ್ಟಿಲ್ಲ. ಆದರೆ ನಾನು ವಿಪಕ್ಷದಲ್ಲಿದ್ದಾಗ ದಾಖಲೆ ಸಮೇತ ಆರೋಪ ಮಾಡುತ್ತಿದೆ ಎಂದರು.
ಸದನದಲ್ಲಿ ಸಚಿವ ಚೆಲುರಾಯಸ್ವಾಮಿ ವಿರುದ್ದ ವಿಚಾರ ಪ್ರಸ್ತಾಪಿಸುವ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಒಬ್ಬ ಮಂತ್ರಿ ಎಲ್ಲರನ್ನು ರಕ್ಷಿಸಬೇಕು. ಆದರೆ ವರ್ಗಾವಣೆ ದಂಧೆಯಿಂದ ಹಣ ವಸೂಲಿ ಮಾಡ್ತಿದ್ದಾರೆ. ಕೆ ಎಸ್ ಆರ್ ಟಿಸಿ ಸಿಬ್ಬಂದಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡ್ಕೊಂಡಿದ್ದಾನೆ. ಸದ್ಯ ಐಸಿಯುನಲಿದ್ದಾನೆ. ಕೆ ಎಸ್ ಆರ್ ಟಿ ಸಿ ಸಿಬ್ಬಂದಿಗಳು ರಸ್ತೆಗಳಿದು ಪ್ರೋಟೆಸ್ಟ್ ಮಾಡ್ತಿದ್ದಾರೆ. ಜನರಿಗೆ ಬಸ್ ಸಿಗುತ್ತಿಲ್ಲ,ಇದಕ್ಕೆ ಯಾರು ಕಾರಣ..? ಎಂದು ಸರ್ಕಾರವನ್ನ ಪ್ರಶ್ನಿಸಿದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications