Mysore Sandal Brand: ಮೈಸೂರು ಸ್ಯಾಂಡಲ್ ಉತ್ಪನ್ನ: ನಟಿ ತಮನ್ನಾ ಭಾಟಿಯಾ ಆಯ್ಕೆಗೆ ಇದೇ ಕಾರಣ: ಸಚಿವ ಎಂ.ಬಿ ಪಾಟೀಲ್
Mysore Sandal Brand Ambassador: ಮೈಸೂರು ಸ್ಯಾಂಡಲ್ ಉತ್ಪನ್ನಗಳ ರಾಯಭಾರಿಯನ್ನಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿಕೊಂಡಿರುವ ಬಗ್ಗೆ ಕನ್ನಡಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ನಟಿ ತಮನ್ನಾ ಭಾಟಿಯಾ ಅವರನ್ನು ಮೈಸೂರು ಸ್ಯಾಂಡಲ್ ಉತ್ಪನ್ನಗಳ ರಾಯಭಾರಿಯನ್ನಾಗಿ ಯಾಕೆ ಆಯ್ಕೆ ಎನ್ನುವ ಬಗ್ಗೆ ಸಚಿವ ಎಂ.ಬಿ ಪಾಟೀಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ತಮನ್ನಾ ಭಾಟಿಯಾ ಅವರನ್ನು ಮೈಸೂರು ಸ್ಯಾಂಡಲ್ ಉತ್ಪನ್ನಗಳ ರಾಯಭಾರಿಯನ್ನಾಗಿ ಆಯ್ಕೆ ಮಾಡಿದ್ದರ ಕುರಿತು ಕೆಲ ತಿಂಗಳ ಹಿಂದೆಯೇ ಸ್ಪಷ್ಟನೆ ನೀಡಿದ್ದೆ. ಕರ್ನಾಟಕ ಮಾತ್ರವಲ್ಲದೇ ದೇಶದಾದ್ಯಂತ ಮಾರುಕಟ್ಟೆ ವಿಸ್ತರಣೆಗೆ ಮತ್ತು ವಿದೇಶಕ್ಕೆ ರಫ್ತು ಹೆಚ್ಚಿಸಲು ಜನಪ್ರಿಯ ರಾಯಭಾರಿಯ ಅವಶ್ಯಕತೆ ಇದ್ದು, ಅದಕ್ಕಾಗಿ ಬ್ರಾಂಡಿಂಗ್-ಮಾರ್ಕೆಟಿಂಗ್ ತಜ್ಞರೂ ಸೇರಿದಂತೆ ಒಂದು ಸಮಿತಿ ರಚಿಸಲಾಗಿತ್ತು.

ಸಮಿತಿಯು ನಮ್ಮ ರಾಜ್ಯದ 2-3 ನಟಿಯರೂ ಸೇರಿದಂತೆ 5-6 ಬಹುಭಾಷಾ ನಟಿಯರ ಹೆಸರುಗಳನ್ನು ಅಂತಿಮಗೊಳಿಸಿದ್ದರು. ಆದರೆ ಕೆಲವರು ಈಗಾಗಲೇ ಬೇರೆ ಬ್ರಾಂಡ್ ನೊಂದಿಗೆ ರಾಯಭಾರಿ ಆಗಿರುವುದು ಮತ್ತು ಕೆಲವರು ನಮ್ಮ ಮಾರ್ಗಸೂಚಿಗೆ ಹೊಂದಿಕೆಯಾಗದ ಕಾರಣ; ಅರ್ಹತೆ ಆಧಾರದ ಮೇಲೆ ಸಮಿತಿಯು ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿದೆ. ಬೆಳವಣಿಗೆಯ ದೃಷ್ಠಿಯಿಂದ ಇದು ಕೆ.ಎಸ್.ಡಿ.ಎಲ್.ನ ವ್ಯವಹಾರಿಕ ನಿರ್ಧಾರ ಎಂದು ಸಚಿವ ಎಂ. ಬಿ ಪಾಟೀಲ್ ಅವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮೈಸೂರು ಸ್ಯಾಂಡಲ್: ನಮ್ಮ ಗುರಿ
1. ಕೆ.ಎಸ್.ಡಿ.ಎಲ್. ಉತ್ಪನ್ನಗಳಿಗೆ ವಿಶ್ವದಾದ್ಯಂತ ಬೇಡಿಕೆ ಹೆಚ್ಚಿಸಿ ಮಾರುಕಟ್ಟೆ ವಿಸ್ತರಿಸುವುದು.
2. 2030ರ ವೇಳೆಗೆ 5,000 ಕೋಟಿ ರೂ. ವ್ಯವಹಾರ.
3. ಕಳೆದ ವರ್ಷ 450 ಕೋಟಿ ಲಾಭ ಮಾಡಿದ್ದು, ಈ ವರ್ಷ 500 ಕೋಟಿ ರೂ. ದಾಟುವ ನಿರೀಕ್ಷೆ ಇದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications