Mysore Sandal Soap: ಹೊಸ ದಾಖಲೆ ಬರೆದ ಕನ್ನಡಿಗರ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪ್
ಕನ್ನಡಿಗರ ಹೆಮ್ಮೆ ಮೈಸೂರು ಸ್ಯಾಂಡಲ್ ಸೋಪ್ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ಸಿಹಿ ಸುದ್ದಿ ನೀಡಿದ್ದಾರೆ. ಸರ್ಕಾರಿ ಉದ್ಯಮಗಳು ಹಳ್ಳ ಹಿಡಿಯುತ್ತಿವೆ ಎನ್ನುವ ಹೊತ್ತಿನಲ್ಲೇ ಈ ಸುದ್ದಿ ಬಂದಿರುವುದು ಸಮಾಧಾನ ತಂದಿದೆ.
ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ ಲಿಮಿಟೆಡ್ ಕಂಪನಿ ಉತ್ಪಾದನೆಯಲ್ಲಿ ಹೊಸ ದಾಖಲೆ ಬರೆದಿದೆ. ಕಂಪನಿಯ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ, ನವೆಂಬರ್ 2023 ರಲ್ಲಿ ಮಾಸಿಕ ಉತ್ಪಾದನೆ 4144 ಮೆಟ್ರಿಕ್ ಟನ್ ದಾಟಿದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

ಇನ್ನು ನವೆಂಬರ್ ತಿಂಗಳಲ್ಲಿ ಮೈಸೂರು ಸ್ಯಾಂಡಲ್ ಸೋಪ್ ರೂ. 133 ಕೋಟಿಗೂ ಅಧಿಕ ವಹಿವಾಟು ನಡೆದಿದೆ ಎಂದು ಹೇಳಿರುವ ಅವರು, ಇದಕ್ಕಾಗಿ ಹೆಚ್ಚುವರಿ ಹೂಡಿಕೆ ಮಾಡಿಲ್ಲ ಎಂದು ಹೇಳಿದ್ದಾರೆ. ಹೂಡಿಕೆ ಮಾಡದೆ, ವ್ಯವಸ್ಥೆಯನ್ನು ಸುಧಾರಣೆ ಮಾಡುವ ಮೂಲಕ ಈ ಸಾಧನೆ ಸಾಧ್ಯವಾಗಿದೆ ಎಂದು ಹೇಳಿದ್ದಾರೆ.
200 ಕೋಟಿ ಆದಾಯದ ಗುರಿ
ಇನ್ನು ಕೆಎಸ್ಡಿಎಲ್ ಆದಾಯದ ಬಗ್ಗೆ ಗುರಿ ಹೊಂದಿರುವುದಾಗಿ ಎಂಬಿ ಪಾಟೀಲ್ ಹೇಳಿದ್ದಾರೆ. ಕಂಪನಿ ಆದಾಯ ವಾರ್ಷಿಕ 2000 ಕೋಟಿ ರೂಪಾಯಿ ದಾಟುವ ಗುರಿ ಹೊಂದಲಾಗಿದೆ.
ಮುಂದಿನ 5 ವರ್ಷಗಳಲ್ಲಿ ಕೆಎಸ್ಡಿಎಲ್ ವಾರ್ಷಿಕ ಆದಾಯ $ 1 ಬಿಲಿಯನ್ ಗೆ ತಲುಪುವ ಗುರಿ ಹೊಂದಲಾಗಿದೆ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ.
ಕರ್ನಾಟಕದ ಹೆಮ್ಮೆ: ಐತಿಹಾಸಿಕ #ಮೈಸೂರುಸ್ಯಾಂಡಲ್_ಸೋಪ್
— M B Patil (@MBPatil) December 7, 2023
▶️ಕಂಪನಿಯ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ, ನವೆಂಬರ್ 2023 ರಲ್ಲಿ: ಮಾಸಿಕ ಉತ್ಪಾದನೆ 4144 ಮೆಟ್ರಿಕ್ ಟನ್ ದಾಟಿದೆ.
▶️ ಮಾಸಿಕ ಮಾರಾಟ: ರೂ. 133 ಕೋಟಿಗೂ ಅಧಿಕ ವಹಿವಾಟು ನಡೆದಿದೆ.
▶️ ಯಾವುದೇ ಹೆಚ್ಚುವರಿ ಹೂಡಿಕೆಯಿಲ್ಲದೆ, ಸುಧಾರಿತ ದಕ್ಷತೆಯಿಂದ ಈ ಸಾಧನೆ ಸಾಧ್ಯವಾಗಿದೆ.… pic.twitter.com/hIBKbhbX0t
ಮೈಸೂರು ಸ್ಯಾಂಡಲ್ ರಾಜ್ಯದ ಹೆಮ್ಮೆ
ಮೈಸೂರು ಅರಸರ ಕಾಲದಲ್ಲಿ ಕರ್ನಾಟಕ ಶ್ರೀಗಂಧದ ಉತ್ಪಾದನೆಗೆ ವಿಶ್ವದಲ್ಲೇ ಪ್ರಸಿದ್ಧಿ ಹೊಂದಿತ್ತು. 1916ನೇ ಇಸವಿಯಲ್ಲಿ ಮೈಸೂರು ಸಂಸ್ಥಾನದ ರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರು ಬೆಂಗಳೂರಿನಲ್ಲಿ ಸರ್ಕಾರಿ ಸೋಪ್ ಫ್ಯಾಕ್ಟರಿಯನ್ನು ಸ್ಥಾಪನೆ ಮಾಡಿದರು.
980ರಲ್ಲಿ ಸರ್ಕಾರಿ ಸೋಪ್ ಕಾರ್ಖಾನೆ ಮತ್ತು ಶಿವಮೊಗ್ಗದ ಗಂಧದೆಣ್ಣೆ ಕಾರ್ಖಾನೆಗಳನ್ನು ವಿಲೀನಗೊಳಿಸಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಕಂಪನಿ (KSDL) ಮಾಡಲಾಯಿತು. ಶ್ರೀಗಂಧದ ಎಣ್ಣೆಯನ್ನು ಬಳಸಿ ತಯಾರಾಗುವ ಜಗತ್ತಿನ ಏಕೈಕ ಸೋಪ್ ಎನ್ನುವ ಹೆಗ್ಗಳಿಕೆ ನಮ್ಮ ಮೈಸೂರು ಸ್ಯಾಂಡಲ್ ಸೋಪ್ನದ್ದಾಗಿದೆ.
ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಉತ್ತ, ಮಾರುಕಟ್ಟೆ ಹೊಂದಿದೆ. ಮೈಸೂರು ಸ್ಯಾಂಡಲ್ ಬೇಬಿ ಸೋಪ್ ಕೂಡ ತಯಾರಿಸಲಾಗುತ್ತಿದೆ. ರಾಜ್ಯದಲ್ಲಿ ಗಂಧದ ಮರಗಳ ಉತ್ಪಾದನೆ ಕಡಿಮೆಯಾದ ಕಾರಣ, ಉತ್ಪಾದನೆ ಮೊದಲಿಗಿಂತ ಕಡಿಮೆಯಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ












Click it and Unblock the Notifications