ಕುಟುಂಬಕ್ಕೊಂದೇ ರಿಯಾಯ್ತಿ ದರದ ಮೈಸೂರು ಸಿಲ್ಕ್ ರೇಷ್ಮೆ ಸೀರೆ!
Recommended Video

ಬೆಂಗಳೂರು, ಆಗಸ್ಟ್ 1: ವರಮಹಾಲಕ್ಷ್ಮೀ ಹಬ್ಬ ಹತ್ತಿರ ಬಂದಿದೆ, ಈ ಹಬ್ಬಕ್ಕೆ ಮಧ್ಯಮ ವರ್ಗದ ಮಹಿಳೆಯರಿಗೆ 4500 ರೂಗೆ ಮೈಸೂರು ರೇಷ್ಮೆ ಸೀರೆ ನೀಡಲು ಸೂಕ್ತ ಮಾನದಂಡ ರಚಿಸಲಾಗುತ್ತಿದೆ. ಅದರಂತೆ ಕುಟುಂಬಕ್ಕೆ ಒಂದೇ ಸೀರೆ ನೀಡುವ ಚಿಂತನೆ ಇದೆ ಎಂದು ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ.
ಮೈಸೂರು ಸಿಲ್ಕ್ ಸೀರೆ ದುಬಾರಿ ಬೆಲೆಯದ್ದಾಗಿದೆ, ಕುಟುಂಬದಲ್ಲಿರುವ ಎಲ್ಲ ಮಹಿಳೆಯರಿಗೂ 15 ಸಾವಿರ ಬೆಲೆಯ ಸೀರೆಯನ್ನು 4500 ರೂ.ಗೆ ನೀಡಲು ಕಷ್ಟವಾಗುತ್ತದೆ ಹಾಗಾಗಿ ಮಧ್ಯಮ ವರ್ಗದ ಕುಟುಂಬಗಳಿಗೆ ಒಂದರಂತೆ ಮೈಸೂರು ಸಿಲ್ಕ್ ಸೀರೆಯನ್ನು ನೀಡಲಾಗುತ್ತದೆ ಎಂದು ಎಂದು ಮಂಗಳವಾರ ತಿಳಿಸಿದ್ದಾರೆ.
ಸೀರೆ ದುಬಾರಿಯಾಗಿರುವ ಕಾರಣ ಮಧ್ಯಮ ವರ್ಗದವರು ಇದನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ ಎಂಬ ಆರೋಪವಿತ್ತು. ಆದ ಕಾರಣ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ 15ರಿಂದ 16ಸಾವಿರ ರೂ. ಬೆಲೆ ಬಾಳುವ ರೇಷ್ಮೆ ಸೀರೆಯನ್ನು 4500 ರೂ.ಗೆ ನೀಡುವುದಾಗಿ ಭರವಸೆ ನೀಡಿದ್ದೆ ಎಂದು ಹೇಳಿದರು.
ಇದು ಸ್ವಲ್ಪ ತಡವಾಗುವುದರಿಂದ ಟೀಕೆ ಕೇಳಿಬರುತ್ತಿದ್ದು, ನಾವು ಸೀರೆ ಕೊಡಲು ಬದ್ಧರಾಗಿದ್ದೇವೆ. ಇದಕ್ಕೆ ಅಗತ್ಯ ಮಾನದಂಡ ರಚಿಸಲಾಗುತ್ತದೆ, ಒಂದು ಕುಟುಂಬಕ್ಕೆ ಒಂದೇ ಸೀರೆ ನೀಡಿರುವುದರಿಂದ ಅಸಮಧಾನಗೊಳ್ಳುತ್ತಾರೆ ಆದರೂ ರಿಯಾಯಿತಿ ದರದಲ್ಲಿ ರೇಷ್ಮೆ ಸೀರೆ ನೀಡುವುದರಿಂದ 5-6ಕೋಟಿ ರೂ ನಷ್ಟವಾಗುತ್ತದೆ. ಇದನ್ನು ಎಂಎಸ್ಐಎಲ್ ಹಾಗೂ ಇಲಾಖೆ ತಲಾ ಶೇ.50ರಷ್ಟು ಭರಿಸಲಿದೆ. ಹೀಗಾಗಿ ಕುಟುಂಬಕ್ಕೆ ಒಂದಕ್ಕಿಂತ ಹೆಚ್ಚು ಸೀರೆ ನೀಡುವುದು ಕಷ್ಟವಾಗುತ್ತದೆ ಎಂದು ಹೇಳಿದ್ದಾರೆ.

ವರಮಹಾಲಕ್ಷ್ಮೀ ಹಬ್ಬ ಎರಡು ದಿನ ಇರುವಾಗ ಸೀರೆ ಮಾರಾಟ
ಸರ್ಕಾರ ರಿಯಾಯಿತಿ ದರದಲ್ಲಿ ಕುಟುಂಬಕ್ಕೊಂದು ಸೀರೆ ನೀಡಲು ಚಿಂತನೆ ನಡೆಸಿದೆ. 15-16 ಸಾವಿರ ಮೌಲ್ಯದ ಸೀರೆಯನ್ನು 4500 ರೂ.ಗೆ ನೀಡಲಾಗುತ್ತಿದೆ. ಆದರೆ 5-6 ಕೋಟಿ ನಷ್ಟ ಅನುಭವಿಸಬೇಕಾಗಿರುವುದರಿಂದ ಕುಟುಂಬಕ್ಕೆ ಒಂದೇ ಸೀರೆ ನೀಡಲು ನಿರ್ಧರಿಸಲಾಗಿದೆ. ಹಬ್ಬ ಎರಡು ದಿನ ಇರುವಾಗ ಸೀರೆ ಮಾರಾಟವನ್ನು ಆರಂಭಿಸಲಾಗುತ್ತದೆ.

ಈ ರಿಯಾಯಿತಿ ಆಗಸ್ಟ್ ಎರಡನೇ ವಾರದ ಬಳಿಕ ಆರಂಭ
ಆಷಾಢ ಮಾಸದ ಸಲುವಾಗಿ ಶೇ. 25 ವರೆಗೆ ರಿಯಾಯಿತಿ ಜುಲೈ 14ರಿಂದ ಆರಂಭವಾಗುತ್ತದೆ ಎಂದು ಹೇಳಲಾಗಿತ್ತು. ಕಂತಿನ ಲೆಕ್ಕದಲ್ಲಿ ಸೀರೆ ಖರೀದಿ ಮಾಡಬಹುದು. ಅದಕ್ಕೆ ಕೆಲವು ಮುಖ್ಯ ದಾಖಲಾತಿಗಳನ್ನು ನೀಡಬೇಕಾಗುತ್ತದೆ. ಆಷಾಢ ಮಾಸದಿಂದಾಗಿ ಕೆಲವರು ಸೀರೆಗಳನ್ನು ಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಹಾಗಾಗಿ ಆಗಸ್ಟ್ ಎರಡನೇ ವಾರದ ಬಳಿಕ ರಿಯಾಯಿತಿ ನೀಡಲಾಗುತ್ತದೆ.

ರಿಯಾಯ್ತಿಯಲ್ಲಿ ದೊರೆಯುತ್ತಿರುವುದು ಜರಿಯಲ್ಲ ಪ್ರಿಂಟೆಡ್ ರೇಷ್ಮೆ ಸೀರೆ
ಸರ್ಕಾರ ರಿಯಾಯ್ತಿಯಲ್ಲಿ ಕೊಡುತ್ತಿರುವುದು ಜರಿ ಸೀರೆ ಅಲ್ಲ ಬದಲಾಗಿ ಪ್ರಿಂಟೆಡ್ ರೇಷ್ಮೆ ಸೀರೆ, ಜರಿ ಇರುವುದಿಲ್ಲ ಆದರೂ ಉತ್ತಮ ಸೀರೆ, ಸದ್ಯಕ್ಕೆ ಎಲ್ಲಾ ಕಡೆಗಳಲ್ಲಿಯೂ ರಿಯಾಯ್ತಿ ದರದ ಸೀರೆ ಮಾರಾಟ ಆರಂಭವಾಗಿಲ್ಲ.

ಮೈಸೂರು ಸಿಲ್ಕ್ ಹುಟ್ಟು ಯಾವಾಗ
1942ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಇಂಗ್ಲೆಂಡಿಗೆ ಭೇಟಿ ನೀಡಿದರು, ಅಲ್ಲಿ ನೇಯ್ಗೆ ಯಂತ್ರಗಳನ್ನು ಕೊಂಡು ಅದರ ಬಗ್ಗೆ ವಿವರಗಳನ್ನು ಪಡೆದರು 1912ರಲ್ಲಿ 32 ನೇಯ್ಗೆ ಯಂತ್ರಗಳನ್ನು ಮೈಸೂರಿಗೆ ತಂದರು. ದೇಶದಲ್ಲೇ ಯಂತ್ರದ ಮೂಲಕ ನೇಯ್ಗೆಯನ್ನು ಆರಂಭಿಸಿದ ಮೊದಲ ರಾಜ್ಯ ಮೈಸೂರು ಎಂಬ ಕೀರ್ತಿ ದೊರೆಯುವಂತಾಯಿತು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications