Vande Bharat: ಮೈಸೂರು-ಚೆನ್ನೈ ನಡುವೆ ಮತ್ತೊಂದು ರೈಲು ಸಂಚಾರ; ಸಮಯ, ನಿಲ್ದಾಣ ವಿವರ
ಮೈಸೂರು, ಮಾರ್ಚ್ 09: ಪ್ರಯಾಣಿಕರ ಬೇಡಿಕೆ ಮೇರೆಗೆ ಮೈಸೂರು ಮತ್ತು ಪುರುಚ್ಚಿ ತಲೈವರ್ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ನಡುವಿನ ಮತ್ತೊಂದು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ನೀಡಲು ಕೇಂದ್ರ ರೈಲ್ವೆ ಇಲಾಖೆ ಮುಂದಾಗಿದೆ. 2024ರ ಏಪ್ರಿಲ್ 5ರಿಂದ ಮೈಸೂರು-ಚೆನ್ನೈ ಮಾರ್ಗದಲ್ಲಿ ಮತ್ತೊಂದು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ನಡೆಸಲಿದೆ.
ರೈಲು ಸಂಖ್ಯೆ 20663 ವಂದೇ ಭಾರತ್ ಎಕ್ಸ್ಪ್ರೆಸ್ ಬುಧವಾರ ಒಂದು ದಿನ ಹೊರತುಪಡಿಸಿ ವಾರದ ಆರು ದಿನ ಸಂಚಾರ ನಡೆಸಲಿದೆ. ಬೆಳಗ್ಗೆ ಆರು ಗಂಟೆಗೆ ಮೈಸೂರಿನಿಂದ ಹೊರಡಲಿರುವ ಈ ರೈಲು ಮಧ್ಯಾಹ್ನ 12:20ಕ್ಕೆ ಪುರುಚ್ಚಿ ತಲೈವರ್ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣ ತಲುಪಲಿದೆ. ಪುನಃ ಸಂಜೆ 5:00 ಗಂಟೆಗೆ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದಿಂದ ಹೊರಡಲಿರುವ ಈ ರೈಲು ರಾತ್ರಿ 11:20ಕ್ಕೆ ಮೈಸೂರು ತಲುಪಲಿದೆ.

ಮೈಸೂರು ಹಾಗೂ ಪುರುಚ್ಚಿ ತಲೈವರ್ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ನಡುವೆ ಸಂಚರಿಸಲಿರುವ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಮಂಡ್ಯ, ಬೆಂಗಳೂರು, ಕೃಷ್ಣರಾಜಪುರಂ ಹಾಗೂ ಕಟಪಾಡಿಯಲ್ಲಿ ನಿಲುಗಡೆಯನ್ನು ಹೊಂದಿದೆ ಎಂದು ಕೇಂದ್ರ ರೈಲ್ವೆ ಇಲಾಖೆ ನೀಡಿರುವ ಆದೇಶ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ. ಏಪ್ರಿಲ್ 5ರಿಂದ ಮೈಸೂರು-ಚೆನ್ನೈ ಮಾರ್ಗದಲ್ಲಿ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ನಡೆಸಲಿದ್ದು, ಪ್ರಯಾಣಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಮಾರ್ಚ್ 12ರಿಂದ ಕಲಬುರಗಿ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ
ಬಹುಬೇಡಿಕೆಯಾದ ಕಲ್ಯಾಣ ಕರ್ನಾಟಕ ಸಂಪರ್ಕಿಸುವ ವಂದೇಭಾರತ್ ಎಕ್ಸ್ ಪ್ರೆಸ್ ರೈಲು ಮಾರ್ಚ್ 12ರಿಂದ ಆರಂಭವಾಗಲಿದೆ. ಕಲಬುರಗಿ ಹಾಗೂ ರಾಜಧಾನಿ ಬೆಂಗಳೂರು ಮಧ್ಯೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಒಪ್ಪಿಗೆ ನೀಡಿದ್ದಾರೆ.
ಈ ಬಗ್ಗೆ ಸಂಸದ ಡಾ.ಉಮೇಶ್ ಜಾಧವ್ ಅವರಿಗೆ ಕೇಂದ್ರ ರೈಲ್ವೆ ಇಲಾಖೆ ಪತ್ರದ ಮೂಲಕ ತಿಳಿಸಿದ್ದಾರೆ. ಮಾರ್ಚ್ 12ರಂದು ಕಲಬುರಗಿ ರೈಲು ನಿಲ್ದಾಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ವರ್ಚುವಲ್ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೂತನ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕಲಬುರಗಿ ಸಂಸದ ಉಮೇಶ್ ಜಾಧವ್ ತಿಳಿಸಿದ್ದಾರೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ











Click it and Unblock the Notifications