Mysuru Dasara 2025: ಮೈಸೂರು ದಸರಾ ವೇಳೆ ಹೊಸ ಟ್ರಾಫಿಕ್ ರೂಲ್ಸ್, ಏನಿದು ದಿಢೀರ್ ಚೇಂಜ್?
ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮಾಚರಣೆ ಜೋರಾಗಿದೆ. ನಗರದ ಶ್ರೀಮಂತ ಸಂಸ್ಕೃತಿ ಮತ್ತು ರಾಜಮನೆತನದ ಸಂಪ್ರದಾಯಗಳನ್ನು ಆಚರಿಸಲಾಗುತ್ತಿದೆ. ಪ್ರವಾಸಿಗರು ಭವ್ಯ ಮೆರವಣಿಗೆಗಳು, ಅಲಂಕರಿಸಿದ ಆನೆಗಳು, ರೋಮಾಂಚಕ ಪ್ರದರ್ಶನಗಳು ಮತ್ತು ಸುಂದರವಾಗಿ ಬೆಳಗಿದ ಅರಮನೆಗಳನ್ನು ವೀಕ್ಷಿಸಲು ಮೂಲೆ ಮೂಲೆ ಮೂಲೆಗಳಿಂದ ಮೈಸೂರಿಗೆ ಕಾಲಿಡುತ್ತಿದ್ದಾರೆ. ಹೀಗಾಗಿ ಸಾಂಸ್ಕೃತಿಕ ನಗರ ಟ್ರಾಫಿಕ್ ಸಿಟಿಯಾಗಿ ಬದಲಾಗಿದೆ. ಕಿಲೋಮೀಟರ್ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿರುವ ಹಿನ್ನೆಲೆ ಪೊಲೀಸರು ಹೊಸ ರೂಲ್ಸ್ ಜಾರಿ ಮಾಡಿದ್ದಾರೆ.
ಮೈಸೂರು ದಸರಾದ ಅದ್ಧೂರಿ ಸಮಾರೋಪ ಮತ್ತು ಗುರುವಾರ ನಡೆಯಲಿರುವ ಬಹುನಿರೀಕ್ಷಿತ ಜಂಬೂ ಸವಾರಿಗೆ ಕೇವಲ ಮೂರು ದಿನಗಳು ಬಾಕಿ ಉಳಿದಿದ್ದು, ನಗರದೆಲ್ಲೆಡೆ ಪ್ರವಾಸಿಗರು ತುಂಬಿ ತುಳುಕುತ್ತಿದ್ದಾರೆ. ಚಾಮರಾಜ ರಸ್ತೆ ಸೇರಿ ಪ್ರಮುಖ ರಸ್ತೆಗಳು ಜನದಟ್ಟಣೆಯಿಂದ ಕೂಡಿದ್ದು, ಪ್ರಮುಖ ಮಾರ್ಗಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಹೀಗಾಗಿ ಮೈಸೂರು ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಆಯ್ದ ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧಗಳನ್ನು ಘೋಷಿಸಿದ್ದಾರೆ. ದಟ್ಟಣೆಯನ್ನು ಕಡಿಮೆ ಮಾಡಲು ಏಕಮುಖ ಸಂಚಾರ ವ್ಯವಸ್ಥೆಯನ್ನು ಜಾರಿಗೆ ತಂದಿದ್ದಾರೆ.

ದಸರಾ ಆಚರಣೆಗಳು ಭರದಿಂದ ಸಾಗುತ್ತಿರುವುದರಿಂದ, ಅನೇಕ ಪ್ರವಾಸಿಗರು ವಿವಿಧೆಡೆ ಪ್ರಯಾಣಿಸಲು ಆಟೋರಿಕ್ಷಾಗಳನ್ನು ಬಳಸುತ್ತಿದ್ದಾರೆ. ಕೆಲ ಚಾಲಕರು ಪ್ರವಾಸಿಗರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಹಲವಾರು ದೂರುಗಳು ಸಹ ಬಂದಿವೆ. ದಸರಾ ಹಬ್ಬವನ್ನೇ ಕೆಲವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪ್ರವಾಸಿಗರು ದೂರಿದ್ದಾರೆ.
ಸಂಚಾರ ನಿರ್ಬಂಧ ಎಲ್ಲೆಲ್ಲಿ?
ಪ್ರವಾಸಿಗರ ವಾಹನಗಳು ಏರಿಕೆಯಾಗುವ ನಿರೀಕ್ಷೆಯಿದ್ದು, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಆಯ್ದ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ಘೋಷಿಸಿದ್ದಾರೆ. ಹಲವೆಡೆ ಏಕಮುಖ ಸಂಚಾರ ನಿಯಮಗಳನ್ನು ಜಾರಿಗೆ ತಂದಿದ್ದಾರೆ. ಹೆಚ್ಚುವರಿಯಾಗಿ, ದಸರಾ ಉತ್ಸವದ ಸಮಯದಲ್ಲಿ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಕೆಲವೆಡೆ ವಾಹನಗಳ ತಾತ್ಕಾಲಿಕ ನಿಲುಗಡೆ ನಿಷೇಧ ವಲಯಗಳನ್ನು ಗುರುತಿಸಲಾಗಿದೆ.
ಮೈಸೂರಿನ ಲೈಟಿಂಗ್ ವೀಕ್ಷಿಸಲು ಪ್ರವಾಸಿಗರ ದಂಡು ದಂಡಾಗಿ ಬರುತ್ತಿದ್ದು, ದ್ವಿಚಕ್ರ ವಾಹನಗಳು, ರಸ್ತೆಯುದ್ದಕ್ಕೂ ನಿಲ್ಲುತ್ತಿವೆ. ನೋಡುಗರು ತಮ್ಮ ಫೋನ್ಗಳಲ್ಲಿ ಅದ್ಭುತ ದಸರಾ ದೀಪಗಳನ್ನು ಸೆರೆಹಿಡಿಯಲು ನಿಲ್ಲುತ್ತಿದ್ದಾರೆ. ಇದರ ಪರಿಣಾಮವಾಗಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಸಂಚಾರ ಪೊಲೀಸ್ ಸಿಬ್ಬಂದಿ ಪ್ರಮುಖ ಸ್ಥಳಗಳಲ್ಲಿ ಪರಿಸ್ಥಿತಿ ನಿಭಾಯಿಸಲು ಹರಸಾಹಸ ಪಡುತ್ತಿದ್ದಾರೆ. ಪ್ರವಾಸಿಗರು ರಸ್ತೆಗಳಲ್ಲಿ ನಿಲ್ಲದೆ ನಿರಂತರವಾಗಿ ಚಲಿಸುವಂತೆ ಸೂಚನೆ ನೀಡಲಾಗಿದೆ.
-
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications