Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ
Summer Special Trains: ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಈಗಾಗಲೇ ಆರಂಭವಾಗಿದೆ. ಮಕ್ಕಳು, ಕುಟುಂಬಸ್ಥರೊಂದಿಗೆ ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚಿರುತ್ತದೆ. ಈ ಕಾರಣಕ್ಕೆ ಬೇಸಿಗೆ ವಿಶೇಷ ರೈಲುಗಳನ್ನು ನೈಋತ್ಯ ರೈಲು ಆರಂಭಿಸಿದೆ. ಮೈಸೂರು-ದಿಬೂಗಡ ನಡುವೆ ವಿಶೇಷ ಎಕ್ಸ್ ಪ್ರೆಸ್ ಸಂಚಾರ ಮಾಡಲಿದ್ದು, ಇದರ ಮಾರ್ಗ, ನಿಲುಗಡೆ, ವೇಳಾಪಟ್ಟಿ ಮಾಹಿತಿ ಇಲ್ಲಿ ನೀಡಲಾಗಿದೆ.
ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ನೈಋತ್ಯ ರೈಲ್ವೆ ಅಧಿಕಾರಿಗಳು ಮೈಸೂರು - ದಿಬ್ರೂಗಡ (Mysuru-Dibrugad Summer Express Train) ನಡುವೆ 2 ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳು ನಿಗದಿತ ಸಮಯದಂತೆ ಕಾರ್ಯಾಚರಣೆ ನಡೆಸಲಿವೆ ಎಂದು ತಿಳಿಸಲಾಗಿದೆ. ಪ್ರಯಾಣಿಕರ ಈ ರೈಲಿನ ವೇಳಾಪಟ್ಟಿಯಂತೆ ಪ್ರಯಾಣಕ್ಕೆ ಪ್ಲ್ಯಾನ್ ಮಾಡಿಕೊಳ್ಳಬಹುದು.

ಮೈಸೂರು-ದಿಬ್ರುಗಡ ಎಕ್ಸ್ಪ್ರೆಸ್ ರೈಲು (06253) ಏಪ್ರಿಲ್ 12 ಮತ್ತು 26ರವರೆಗೆ ಮೈಸೂರಿನಿಂದ ಬೆಳಗ್ಗೆ 08 ಗಂಟೆಗೆ ಸಂಚಾರ ಆರಂಭಿಸುತ್ತದೆ. ಬುಧವಾರ ಬೆಳಗ್ಗೆ 01:30ಕ್ಕೆ ದಿಬ್ರುಗಢ ನಿಲ್ದಾಣವನ್ನು ತಲುಪುತ್ತದೆ. ಮರಳಿ ಅದೇ ದಿಕ್ಕಿನಲ್ಲಿ ದಿಬ್ರುಗಡ-ಮೈಸೂರು ಎಕ್ಸ್ಪ್ರೆಸ್ ರೈಲು (06254) ಏಪ್ರಿಲ್ 16 ಮತ್ತು 30ರಂದು ಎರಡು ದಿನ ದಿಬ್ರೂಗ ರೈಲು ನಿಲ್ದಾಣದಿಂದ ಮಂಗಳವಾರ ಬೆಳಗ್ಗೆ 01:30 ಗಂಟೆಗೆ ಹೊರಡುತ್ತದೆ. ಅದು ಶನಿವಾರ ಮಧ್ಯಾಹ್ನ 04:15ಕ್ಕೆ ಮೈಸೂರು ನಿಲ್ದಾಣಕ್ಕೆ ಬರಲಿದೆ. ಒಟ್ಟು ಎರಡು ದಿಕ್ಕಿನಲ್ಲಿ ತಲಾ ಎರಡು ಟ್ರಪ್ಗಳ ಸೇವೆ ಪೂರೈಸಲಿದೆ.
ಮೈಸೂರು-ದಿಬ್ರುಗಢ ರೈಲಿನ ನಿಲುಗಡೆ ನಿಲ್ದಾಣಗಳು
ಮೈಸೂರಿನಿಂದ ಹೊರಡುವ ಈ ರೈಲು ಮಾರ್ಗ ಮಧ್ಯದಲ್ಲಿ (ಎರಡು ದಿಕ್ಕಿನಲ್ಲಿ) ಈ ರೈಲು ಮಂಡ್ಯ, ಮದ್ದೂರು, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರಪೇಟೆ, ಕತ್ತಾಡಿ, ರೇಣಿಗುಂಟಾ, ಗುಡೂರು, ನೆಲ್ಲೂರು, ಓಂಗೋಲ್, ವಿಜಯವಾಡ, ರಾಜಮಂಡ್ರಿ, ಕೊತ್ತವಲಸ, ವಿಜಯನಗರಂ, ಶ್ರೀಕಾಕುಳಂ ರೋಡ್, ಪಲಾಸಾ, ಬ್ರಹ್ಮಪುರ, ಬಾಲುಗಾಂ, ಖುರ್ದಾ ರೋಡ್, ಭುವನೇಶ್ವರ, ಕಟಕ್, ಜಾಜ್ಜುರ ಕೆ ರೋಡ್, ಭದ್ರಕ್, ಬಾಲಸೋರ್, ಖರಗುರ್, ಅಂಡುಲ್, ಧನಕುಣಿ, ಬರ್ಧಮಾನ, ಬಾಲ್ಪೂರ್ ಎಸ್ ನಿಕ್ಕಿನ್, ರಾಮುರ ಹಾಟ್, ನ್ಯೂ ಫರಕ್ಕಾ, ಮಾಲ್ಡಾ ಟೌನ್, ಕಿಶನ್ ಗಂಜ್, ನ್ಯೂ ಜಲ್ಪೈಗುಡಿ, ನ್ಯೂ ಕೊಚ್ ಬಿಹಾರ್, ಕೋಕರಜಾರ್, ನ್ಯೂ ಬಾಂಗಾಯಿಗಾಂವ್, ಬರಪೆಟಾ ರೋಡ್, ರಂಗಿಯಾ, ರಂಗಪಾರಾ ನಾರ್ತ್, ವಿಶ್ವನಾಥ ಚರಲಿ, ಹರ್ಮತಿ, ನಾರ್ತ್ ಲಖಿಮಪುರ್, ಧೇಮಾಜಿ ನಿಲ್ದಾಣಗಳಲ್ಲಿ ಎರಡೂ ದಿಕ್ಕುಗಳಲ್ಲಿ ನಿಲುಗಡೆಗಳನ್ನು ನೀಡಲಿದೆ.
20 ಬೋಗಿಗಳ ರೈಲು
ಈ ಬೇಸಿಗೆ ವಿಶೇಷ ರೈಲು 2 ಎಸಿ ಟು-ಟಿಯರ್, 4 ಎಸಿ ತ್ರಿ-ಟಿಯರ್, 6 ಸ್ವೀಪರ್ ವರ್ಗ, 6 ಸಾಮಾನ್ಯ ದ್ವಿತೀಯ ವರ್ಗ ಹಾಗೂ 2 ಎಸ್ಎಲ್ಆರ್ಡಿ ಸೇರಿ ಒಟ್ಟು ಒಟ್ಟು 20 ಬೋಗಿಗಳನ್ನು ಹೊಂದಿರಲಿದೆ. ಪ್ರಯಾಣಿಕರಿಗೆ ಆರಾಮದಾಯಕ ಮತ್ತು ಉತ್ತಮ ಸೇವೆ ನೀಡಲಿದೆ. ಇದರ ವೇಳಾಪಟ್ಟಿ ಆಧರಿಸಿ ಪ್ರಯಾಣಕ್ಕೆ ಯೋಜಿಸುವಂತೆ ನೈಋತ್ಯ ರೈಲ್ವೆ ಅಧಿಕಾರಿಗಳು ಪ್ರಕಟಣೆಯಲ್ಲಿ ಶನಿವಾರ ತಿಳಿಸಿದ್ದಾರೆ.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ













Click it and Unblock the Notifications