ಅಂತ್ಯಸಂಸ್ಕಾರದ ವೇಳೆ ಕಣ್ಣು ಬಿಟ್ಟಿದ್ದ ಮೈಸೂರಿನ ಮಹಿಳೆ ಸಾವು
ಮೈಸೂರು, ಮೇ 24 : ಅಂತ್ಯಸಂಸ್ಕಾರದ ವೇಳೆ ಕಣ್ಣು ಬಿಟ್ಟು ಅಚ್ಚರಿ ಮೂಡಿಸಿದ್ದ ಮೈಸೂರಿನ ಪದ್ಮಾ ಲೋಡಾ ಮೃತಪಟ್ಟಿದ್ದಾರೆ. ಮೇ 17ರಂದು ಅಂತ್ಯ ಸಂಸ್ಕಾರದ ಸಂದರ್ಭದಲ್ಲಿ ಕಣ್ಣು ಬಿಟ್ಟಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಪದ್ಮಾ ಲೋಡಾ (51) ಅವರು ಸೋಮವಾರ ಮಧ್ಯಾಹ್ನ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ಸಂಜೆ ಅವರ ಅಂತ್ಯ ಸಂಸ್ಕಾರ ನಡೆಸಲಾಗಿದೆ. [ಪವಾಡ, ಅಂತ್ಯ ಸಂಸ್ಕಾರದ ವೇಳೆ ಕಣ್ಣು ಬಿಟ್ಟ ಮಹಿಳೆ!]

ಉದ್ಯಮಿ ಮಹೇಂದ್ರ ಕುಮಾರ್ ಲೋಡಾ ಅವರ ಪತ್ನಿ ಪದ್ಮಾ ಅವರು ಉಸಿರಾಟದ ಸಮಸ್ಯೆಯಿಂದಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮೇ 16ರಂದು ಪದ್ಮಾ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದರು. ಸಂಬಂಧಿಕರಿಗೆ ತಿಳಿಸಿ ಮೇ 17ರಂದು ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಲಾಗಿತ್ತು. [ಸಾವಿನಂಚಿನಲ್ಲಿದ್ದ ಅಮ್ಮನಿಗೆ ಮರುಜನ್ಮ ನೀಡಿದ ಮಗು!]
ಮೇ 17ರಂದು ಅಂತ್ಯಸಂಸ್ಕಾರದ ಕಾರ್ಯ ಮಾಡುವಾಗ ಪದ್ಮಾ ಅವರು ಕಣ್ಣುಬಿಟ್ಟು ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಸೋಮವಾರ ಮೃತಪಟ್ಟಿದ್ದಾರೆ. [ಮೈಮೇಲೆ ಮನೆ ಬಿದ್ದಿದ್ರೂ ಮಗುವನ್ನು ಹೊಟ್ಟೆಯಲ್ಲಿ ರಕ್ಷಿಸಿದ ಮಹಾತಾಯಿ!]
ಮಹೇಂದ್ರ ಕುಮಾರ್ ಲೋಡಾ ಮತ್ತು ಪದ್ಮಾ ಅವರು ಮೂಲತಃ ರಾಜಸ್ಥಾನದವರು. ಮೈಸೂರಿನ ಅಗ್ರಹಾರದಲ್ಲಿ ಅವರು ಹಲವು ವರ್ಷಗಳಿಂದ ವಾಸವಾಗಿದ್ದರು. ಪದ್ಮಾ ಅವರು ಮೃತಪಟ್ಟಿದ್ದಾರೆ ಎಂದು ಮೇ 17ರಂದು ರಾಜಸ್ಥಾನದಿಂದ ಸಂಬಂಧಿಕರನ್ನು ಮೈಸೂರಿಗೆ ಕರೆಸಲಾಗಿತ್ತು.
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei












Click it and Unblock the Notifications