ಮೈಸೂರು ಅರಮನೆ ಫೋಟೋಶೂಟ್ ಸಾಧ್ಯವಾಗಿದ್ದು ಹೀಗೆ!
ಮೈಸೂರು, ಮೇ 27: ವಿವಾದಕ್ಕೆ ಕಾರಣವಾಗಿದ್ದ ಮೈಸೂರು ಅರಮನೆಯ ಫೋಟೋಶೂಟ್ ನ ಹಿಂದಿನ ಸತ್ಯಇದೀಗ ಬಹಿರಂಗವಾಗಿದೆ. ಫೋಟೋ ಶೂಟ್ ನಲ್ಲಿ ಇದ್ದವರು ನಿವೃತ್ತ ಐಎಎಸ್ ಅಧಿಕಾರಿ ನಂದಕುಮಾರ್ ಅವರ ಪುತ್ರ ಆದಿತ್ಯ ಬಿಎನ್ ಎಂಬುದಕ್ಕೆ ಮತ್ತಟ್ಟು ಪುರಾವೆ ಸಿಕ್ಕಿದೆ.
ಮಗನ ಮದುವೆ ವೇಳೆ ನಂದಕುಮಾರ್ ಐಎಎಸ್ ಅಧಿಕಾರಿಯಾಗಿದ್ದರು. ನಂದಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಯಾಗಿದ್ದರು. ಈ ಹುದ್ದೆಯಿಂದಲೇ ನಂದಕುಮಾರ್ ನಿವೃತ್ತರಾರಾದರು.[ಮೈಸೂರು ಅರಮನೆ ಫೋಟೋಶೂಟ್ ವಿವಾದ : ಏನು, ಎತ್ತ?]

ಇಂಗ್ಲೆಂಡಿನ ನಾಟಿಂಗ್ಯಾಮ್ ವಿವಿಯಲ್ಲಿ ಓದಿರುವ ಆದಿತ್ಯ ಬಿಎನ್ ಮತ್ತು ನವ್ಯತಾ ಪೆಂಜುರಿ ವಿವಾಹ ಕಳೆದ ಫೆಬ್ರವರಿಯಲ್ಲಿ ನಡೆದಿತ್ತು. ಮದುವೆಗೆ ಮುನ್ನ ಮೈಸೂರು ಅರಮನೆಯಲ್ಲಿ ಈ ಫೋಟೋ ಶೂಟ್ ಮಾಡಲಾಗಿದೆ ಎಂಬ ಸಂಗತಿ ಇದೀಗ ಬಹಿರಂಗವಾಗಿದೆ.
ನಂದಕುಮಾರ್ ತಮ್ಮ ಅಧಿಕಾರ ದುರ್ಬಳಕೆ ಮಾಡಿ ಮಗನ ಫೋಟೋಶೂಟ್ ಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂಬ ಸಂಗತಿ ಮೇಲ್ನೋಟಕ್ಕೆ ಸತ್ಯವಾದಂತೆ ಕಂಡುಬರುತ್ತಿದೆ. ಫೋಟೋ ಶೂಟ್ ಬಗ್ಗೆ ತನಿಖೆ ಮಾಡುವಂತೆ ಮೈಸೂರು ಜಿಲ್ಲಾಧಿಕಾರಿ ಸಿ. ಶಿಖಾ ಆದೇಶ ನೀಡಿದ್ದಾರೆ.[ಜೂನ್ 27ಕ್ಕೆ ಯದುವೀರ್ ಒಡೆಯರ್ ವಿವಾಹ]
ವಿಡಿಯೋ ಡಿಲೀಟ್
ಇನ್ನೊಂದೆಡೆ ಯು ಟ್ಯೂಬ್ ಗೆ ಅಪ್ ಲೋಡ್ ಮಾಡಲಾಗಿದ್ದ ವಿಡಿಯೋವನ್ನು ಡಿಲೀಟ್ ಮಾಡಲಾಗಿದೆ. ಯೂಟ್ಯೂಬ್ ನಲ್ಲಿ ಹಂಚಿದ್ದ ವಿಡಿಯೋ ನಾಗರಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಫೇಸ್ ಬುಕ್ ಮತ್ತು ಟ್ವಿಟರ್ ನಲ್ಲಿ ಕನ್ನಡಿಗರು ತರಾಟೆಗೆ ತೆಗೆದುಕೊಂಡಿದ್ದರು. ಇದರ ಪರಿಣಾಮ ಶುಕ್ರವಾರ ಮುಂಜಾನೆ ಯೂ ಟ್ಯೂಬ್ ನಿಂದ ವಿಡಿಯೋವನ್ನು ತೆಗೆದು ಹಾಕಲಾಗಿದೆ.[ಯದುವೀರ ಒಡೆಯರ್ ಭಾವಿ ಪತ್ನಿ ರಾಜಸ್ಥಾನಿ ಕುವರಿ]
ಕಾನೂನು ಏನು ಹೇಳುತ್ತದೆ?
ಅರಮನೆಯೊಳಗೆ ಚಿತ್ರೀಕರಣ ಸಾಧ್ಯವಿಲ್ಲದ ಮಾತು, ಅದರಲ್ಲೂ ದರ್ಬಾರ್ ಹಾಲ್ ನಲ್ಲಿ ಫೋಟೋ ತೆಗೆಯುವುದನ್ನು ನಿಷೇಧ ಮಾಡಲಾಗಿದೆ. ಕೆಲವೊಂದು ಕಡೆ ಇದು ಗ್ರಾಫಿಕ್ ಬಳಸಿ ತಯಾರಿಸಿದ ವಿಡಿಯೋ ಎಂಬ ಮಾತು ಕೇಳಿಬಂದರೂ ಅಂತಿಮವಾಗಿ ಸತ್ಯಾಸತ್ಯತೆ ತನಿಖೆಯ ನಂತರ ತಿಳಿದು ಬರಲಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications