ಮೈಸೂರು ರಾಜವಂಶಸ್ಥರಿಗೆ ಅಲಮೇಲಮ್ಮ ಶಾಪ ಇನ್ನೂ ವಿಮೋಚನೆಯಾಗಿಲ್ವಾ?
Recommended Video

ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ತ್ರಿಷಿಕಾ ಕುಮಾರಿ ಬುಧವಾರ (ಡಿ 7) ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಯದುವಂಶಕ್ಕೆ ಗಂಡು ಮಗುವಿನ ಆಗಮನದಿಂದ ಅಂಬಾ ವಿಲಾಸ ಅರಮನೆಯಲ್ಲಿ ಸಂಭ್ರಮವೋ.. ಸಂಭ್ರಮ..
ಹಾಗಾದರೆ, ಮೈಸೂರು ರಾಜ ಮನೆತನದ ಮೇಲಿದ್ದ ಅಲಮೇಲಮ್ಮನ ಶಾಪ ವಿಮೋಚನೆಯಾದಂತಾಗಿದೆಯೇ? ಮೈಸೂರು ಅರಸರ ಇತಿಹಾಸದ ಪುಟಗಳನ್ನೊಮ್ಮೆ ಅವಲೋಕಿಸಿದರೆ, ಅಲಮೇಲಮ್ಮನ ಶಾಪದಿಂದ ಇನ್ನೂ ರಾಜಮನೆತನ ವಿಮೋಚನೆಗೊಂಡಿಲ್ಲ.
ಮೈಸೂರು ರಾಜವಂಶಸ್ಥರ ಮೇಲಿರುವ ಶಾಪ ದತ್ತುಪುತ್ರರ ಮೇಲೆ ಎಂದೂ ತಟ್ಟಿಲ್ಲ, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ನಿಧನದ ನಂತರ, ಯದುವೀರ್ ಅವರನ್ನು ದತ್ತು ತೆಗೆದುಕೊಂಡು, ಮೈಸೂರು ಸಂಸ್ಥಾನದ 27ನೇ ಮಹಾರಾಜರನ್ನಾಗಿ ಪಟ್ಟಾಭಿಷೇಕ ಮಾಡಲಾಗಿತ್ತು.
ಯದುವೀರ್ ದಂಪತಿಗಳಿಗೆ ಬುಧವಾರ ಹುಟ್ಟಿದ ಮಗುವಿಗೆ ಸಂತಾನಪ್ರಾಪ್ತಿಯಾದಾಗ ಮಾತ್ರ ಅಲಮೇಲಮ್ಮನ ಶಾಪ ವಿಮೋಚನೆಯಾದಂತಾಗುತ್ತದೆ ಎನ್ನುತ್ತದೆ ಮೈಸೂರು ರಾಜಮನೆತನದ ಇತಿಹಾಸದ ಪುಟಗಳು.
2006ರಲ್ಲಿ ಅಂದಿನ ಮೈಸೂರು ಮಹಾರಾಜ, ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತನ್ನ ಕುಟುಂಬಕ್ಕಿರುವ ಶಾಪದ ಬಗ್ಗೆ ಹೇಳಿಕೆಯನ್ನು ನೀಡಿದ್ದರು. ಅಂದಿನಿಂದ ಅಲಮೇಲಮ್ಮನ ಶಾಪದ ಬಗ್ಗೆ ಹೆಚ್ಚಿನ ಚರ್ಚೆಗಳು ಆರಂಭವಾಯಿತು.
ಏನಿದು ಅಲಮೇಲಮ್ಮನ ಶಾಪ, ಯದುವೀರ್ ದಂಪತಿಗಳಿಗೆ ಮಕ್ಕಳಾದರೂ ಶಾಪ ವಿಮೋಚನೆಯಾಕೆ ಆಗಿಲ್ಲ, ಮುಂದೆ ಓದಿ..

ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಹೇಳಿದ್ದು
ತಮ್ಮ ವಂಶಸ್ಥರಿಗೆ ಅಲಮೇಲಮ್ಮನ ಶಾಪವಿದೆ, ಅಲಮೇಲಮ್ಮನಿಗೆ ದೇವರ ಸ್ಥಾನ ಸಿಗದೇ ಇನ್ನೂ ಆಕೆ ಆತ್ಮವಾಗಿಯೇ ಉಳಿದಿದ್ದಾಳೆ. ಅಲಮೇಲಮ್ಮನ ಆತ್ಮದ ಜೊತೆ ನಾನು ಕೆಲವು ವರ್ಷಗಳಿಂದ ಸಂಪರ್ಕದಲ್ಲಿದ್ದೇನೆ ಮತ್ತು ನನಗೆ ಇಂದಿಗೂ ಆಕೆ ಅನೇಕ ಸೂಚನೆಗಳನ್ನು ನೀಡುತ್ತಾಳೆ, ಅವಳಿಗಾಗಿ ಅರಮನೆ ಆವರಣದಲ್ಲಿ ಗುಡಿಯನ್ನು ಕಟ್ಟಿದ್ದೇನೆಂದು ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಹೇಳಿದ್ದರು.

ಅಲಮೇಲಮ್ಮನಿಗೆ ಒಡೆಯರ್ ಕುಟುಂಬದ ರಾಜಾಜ್ಞೆ
ಅಲಮೇಲಮ್ಮ ತನ್ನಲ್ಲಿದ್ದ ಆಭರಣಗಳನ್ನು ಹಬ್ಬ ಹರಿದಿನಗಳ ಸಂದರ್ಭದಲ್ಲಿ ದೇವರ ಅಲಂಕಾರಕ್ಕೆ ನೀಡಿ ನಂತರ ವಾಪಸ್ ಪಡೆಯುತ್ತಿದ್ದಳು. ಇದನ್ನರಿತ ನಮ್ಮ ವಂಶಸ್ಥರು ಆ ಆಭರಣಗಳನ್ನು ತಮ್ಮದಾಗಿಸಿ ಕೊಳ್ಳಲು ಸಂಚು ರೂಪಿಸಿದ್ದರು. ಆಭರಣವನ್ನು ತಮ್ಮ ಸುಪರ್ದಿಗೆ ನೀಡಲು ಒಡೆಯರ್ ಕುಟುಂಬ ಅಲಮೇಲಮ್ಮನಿಗೆ ರಾಜಾಜ್ಞೆ ಹೊರಡಿಸುತ್ತಾರೆ. ಜೊತೆಗೆ, ಆಭರಣಗಳನ್ನು ವಶ ಪಡಿಸಿಕೊಳ್ಳಲು ರಾಜಭಟರನ್ನು ಕಳುಹಿಸುತ್ತಾರೆ.

ಕಾವೇರಿ ನದಿಗೆ ಹಾರಿ ಪ್ರಾಣಬಿಡುವ ಅಲಮೇಲಮ್ಮ
ಆದರೆ ಆಭರಣಗಳನ್ನು ಮೈಸೂರು ಒಡೆಯರ್ ಕುಟುಂಬಕ್ಕೆ ನೀಡಲು ಒಪ್ಪದ ಅಲಮೇಲಮ್ಮ, ವಜ್ರದ ಮೂಗುತಿಯನ್ನು ಎಸೆದು "ತಲಕಾಡು ಮರಳಾಗಲಿ, ಮಾಲಿಂಗಿ ಮಡುವಾಗಲಿ, ಮೈಸೂರು ಅರಸರಿಗೆ ಮಕ್ಕಳಾಗದಿರಲಿ' ಎಂದು ಶಾಪ ಹಾಕಿ ಕಾವೇರಿ ನದಿಗೆ ಹಾರಿ ಸಾವನ್ನಪ್ಪುತ್ತಾಳೆ" ಎಂದು ಒಡೆಯರು, ಅಲಮೇಲಮ್ಮನ ಶಾಪದ ಬಗ್ಗೆ ವಿವರಿಸಿದ್ದರು.

ದತ್ತು ಪಡೆದುಕೊಂಡವರಿಗೆ ಸಂತಾನದ ತೊಂದರೆಯಿಲ್ಲ
ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್, ಮೈಸೂರು ರಾಜಮನೆತನದ 26ನೇ ಮಹಾರಾಜರು ಮತ್ತು ಇದುವರೆಗಿನ ಇತಿಹಾಸವನ್ನು ಅವಲೋಕಿಸಿದರೆ, ರಾಜವಂಶಸ್ಥರು ದತ್ತು ಪಡೆದುಕೊಂಡವರಿಗೆ ಸಂತಾನದ ತೊಂದರೆಯಾದ ಉದಾಹರಣೆಗಳಿಲ್ಲ. ಮೈಸೂರು ಸಾಮ್ರಾಜ್ಯದ ಒಂಬತ್ತನೇ ಅರಸರವರೆಗೂ ಮಕ್ಕಳಾಗಿವೆ.

ಯದುವೀರ್ ದಂಪತಿಗಳಿಗೆ ಹುಟ್ಟಿದ ಮಗುವಿಗೆ ಸಂತಾನಪ್ರಾಪ್ತಿ
ಮೈಸೂರು ಸಂಸ್ಥಾನದ 27ನೇ ಮಹಾರಾಜ ಯದುವೀರ್ ದಂಪತಿಗಳಿಗೆ ಹುಟ್ಟಿದ ಮಗುವಿಗೆ ಸಂತಾನಪ್ರಾಪ್ತಿಯಾದರೆ, ಅಲಮೇಲಮ್ಮನ ಶಾಪ ವಿಮೋಚನೆಯಾದಂತೆ ಎನ್ನುವುದು ಇತಿಹಾಸದ ಪುಟವನ್ನು ತಿರುವಿದರೆ ಸ್ಪಷ್ಟವಾಗುತ್ತದೆ. ಇತಿಹಾಸತಜ್ಞ ಎ ವೀರಪ್ಪ ಅವರ ಪ್ರಕಾರ, ಅಲಮೇಲಮ್ಮನ ಶಾಪ 400ವರ್ಷಗಳ ಹಿಂದಿನದ್ದು. 1612ರಲ್ಲಿ ಅಂದಿನ ಅರಸ ರಾಜಾ ಒಡೆಯರ್ ಕಾಲದ ಶಾಪವಿದಂತೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications