ಮೈತ್ರಿಯಾ ಗೌಡ ಪ್ರಕರಣ, ಡಿವಿಎಸ್ಗೆ ನೋಟಿಸ್
ಬೆಂಗಳೂರು, ಸೆ.8 : ನಟಿ ಮೈತ್ರಿಯಾ ಗೌಡ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಆರ್.ಟಿ.ನಗರ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ತಮ್ಮ ಪುತ್ರನನ್ನು ಪೊಲೀಸರ ಮುಂದೆ ಹಾಜರುಪಡಿಸಿ ಎಂದು ಸೂಚನೆ ನೀಡಿದ್ದಾರೆ.
ಮೈತ್ರಿಯಾಗೌಡ ಅವರ ವಿರುದ್ಧದ ದೂರಿನ ಹಿನ್ನಲೆಯಲ್ಲಿ ಕಾರ್ತಿಕ್ ಗೌಡ ಬಂಧನಕ್ಕೆ ವಾರೆಂಟ್ ಇದ್ದರೂ ವಿಚಾರಣೆಗೆ ಕಾರ್ತಿಕ್ ಗೌಡ ಹಾಜರಾಗದ ಹಿನ್ನಲೆಯಲ್ಲಿ ಪೊಲೀಸರು ನೋಟಿಸ್ ನೀಡಿದ್ದಾರೆ. ಸೆ.2ರಂದು ಈ ನೋಟಿಸ್ ಜಾರಿಗೊಳಿಸಲಾಗಿದ್ದು, ವಿಚಾರಣೆಗೆ ಸಹಕಾರ ನೀಡುವಂತೆ ಸೂಚಿಸಲಾಗಿದೆ.

ಇತ್ತ ಮೈತ್ರಿಯಾ ಗೌಡ ಮತ್ತು ಕಾರ್ತಿಕ್ ಗೌಡ ಅವರ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ಸೋಮವಾರ ಅಂತಿಮ ತೀರ್ಪು ಹೊರಬೀಳಲಿದೆ. ಕಾರ್ತಿಕ್ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದ್ದರೂ ಆತನನ್ನು ಬಂಧಿಸಲು ಸಾಧ್ಯವಾಗಿಲ್ಲ. [ಮೈತ್ರಿಯಾ ಬಗ್ಗೆ ಡಾಟಿ ಸದಾನಂದ ಗೌಡರು ಹೇಳಿದ್ದೇನು?]
ಅಪರಾಧ ಪ್ರಕ್ರಿಯೆ ಸಂಹಿತೆ ಕಲಂ 41(ಎ)ರ ಅಡಿಯಲ್ಲಿ ಪ್ರಕರಣದ ತನಿಖಾಧಿಕಾರಿ ಓಂಕಾರಯ್ಯ ಅವರು ಸದಾನಂದಗೌಡರ ಇ-ಮೇಲ್ ವಿಳಾಸಕ್ಕೆ ನೋಟಿಸ್ ಕಳುಹಿಸಿದ್ದಾರೆ. ಅದಕ್ಕೂ ಮುಂಚೆ ಸದಾನಂದಗೌಡರ ಬೆಂಗಳೂರಿನ ನಿವಾಸಕ್ಕೆ ನೋಟಿಸನ್ನು ಅಂಟಿಸಲಾಗಿತ್ತು.
ವಿಚಾರಣೆಗೆ ಮತ್ತು ತನಿಖೆಗೆ ಸಹಾಯ ಮಾಡುವಂತೆ ಕೋರಿ ಪೊಲೀಸರು ಕಳುಹಿಸಿದ್ದ ಇ-ಮೇಲ್ಗೆ ಈ ವರೆಗೂ ಸದಾನಂದ ಗೌಡರಿಂದ ಅವರಿಂದ ಪ್ರತ್ಯುತ್ತರ ಬಂದಿಲ್ಲ ಎಂದು ತಿಳಿದುಬಂದಿದೆ. ಕಾರ್ತಿಕ್ ಗೌಡ ತಮ್ಮನ್ನು ವಿವಾಹವಾಗಿದ್ದು, ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ನಟಿ ಮೈತ್ರಿಯಾ ಗೌಡ ಅವರು ಬೆಂಗಳೂರಿನ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. [ಸೆ.8ಕ್ಕೆ ಕಾರ್ತಿಕ್ ಗೌಡ ಜಾಮೀನು ಅರ್ಜಿ ತೀರ್ಪು]
ಪ್ರಕರಣ ಸಂಬಂಧ ಡಿವಿಎಸ್ ಪುತ್ರ ಕಾರ್ತಿಕ್ ವಿರುದ್ಧ ಅತ್ಯಾಚಾರ, ಅಪಹರಣ ಮತ್ತು ವಂಚನೆ ಪ್ರಕರಣಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಅಲ್ಲದೆ ವಿಚಾರಣೆಗೆ ಹಾಜರಾಗುವಂತೆ ಕಾರ್ತಿಕ್ ಅವರಿಗೆ ನೋಟಿಸ್ ಸಹ ನೀಡಿದ್ದರು. ಆದರೆ, ಕಾರ್ತಿಕ್ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಅವರ ವಿರುದ್ಧ ಬಂಧನದ ವಾರೆಂಟ್ ಜಾರಿಗೊಳಿಸಲಾಗಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications