ಡಿ.ಕೆ.ಶಿವಕುಮಾರ್ ರಾಜೀನಾಮೆಗೆ ಆಗ್ರಹ: ಕಾರಣವೇನು?
ಬೆಂಗಳೂರು,ಮಾರ್ಚ್ 25: ಸಂವಿಧಾನವಿರೋಧಿ ಧೋರಣೆ ಹೊಂದಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಕ್ಷಣವೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಅವರು ಆಗ್ರಹಿಸಿದ್ದಾರೆ. ಸಂವಿಧಾನ ಬದಲಾಯಿಸಿ ಮುಸ್ಲಿಮರಿಗೆ ಮೀಸಲಾತಿ ನೀಡುತ್ತೇನೆ' ಎಂಬ ಡಿ.ಕೆ ಶಿವಕುಮಾರ್ ರವರ ಹೇಳಿಕೆಯ ವಿರುದ್ಧ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಪ್ರತಿಭಟನೆಯು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಿತು.
ಪ್ರತಿಭಟನೆಯ ವೇಳೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಅವರು ಮಾತನಾಡಿ, ಕಾಂಗ್ರೆಸ್ಸಿನವರು ಯಾವತ್ತೂ ಸಂವಿಧಾನದ ಪರ ಹಾಗೂ ಡಾ. ಬಾಬಾಸಾಹೇಬ ಅಂಬೇಡ್ಕರರ ಪರ ಇಲ್ಲ ಎಂದು ಆಕ್ಷೇಪಿಸಿದರು. ಅವರು ಮಾತನಾಡಿದ್ದು ಸಂವಿಧಾನ ವಿರೋಧಿ ಮಾತುಗಳು ಎಂದು ಟೀಕಿಸಿದರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.

ಡಿ.ಕೆ.ಶಿವಕುಮಾರ್ ಅವರಿಗೆ ಸಂವಿಧಾನದ ಬಗ್ಗೆ ಸ್ವಲ್ಪವಾದರೂ ಗೌರವ ಇದ್ದಲ್ಲಿ, ಪ್ರಜಾಪ್ರಭುತ್ವದ ಬಗ್ಗೆ ಗೌರವ ಇದ್ದಲ್ಲಿ ಅವರು ರಾಜೀನಾಮೆ ಕೊಡಬೇಕು ಎಂದು ಆಗ್ರಹವನ್ನು ಮುಂದಿಟ್ಟರು. ಅಲ್ಲದೇ ಅವರು ದೇಶದ ಜನತೆಯ ಕ್ಷಮೆ ಕೇಳಬೇಕು ಎಂದರು. ಇದನ್ನು ಒಂದು ಜನಾಂದೋಲನವಾಗಿ ರೂಪಿಸಲು ಡಿ.ಕೆ.ಶಿವಕುಮಾರ್ ಅವರ ಪ್ರತಿಕೃತಿ ದಹನದ ಮೂಲಕ ಇವತ್ತು ಸಾಂಕೇತಿಕವಾಗಿ ಶುರು ಮಾಡಿದ್ದೇವೆ. ಇದು ನಾಳೆಯಿಂದ ಇಡೀ ರಾಜ್ಯದಲ್ಲಿ ಮುಂದುವರೆಯಲಿದೆ ಎಂದು ಪ್ರಕಟಿಸಿದರು.
ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಮಾತನಾಡಿ, ಸಿದ್ದರಾಮಯ್ಯನವರ ಸಚಿವ ಸಂಪುಟದ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅತ್ಯಂತ ಆಘಾತಕಾರಿ ಹೇಳಿಕೆ ಕೊಟ್ಟಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಸಂವಿಧಾನ ತಿದ್ದುಪಡಿ ಮಾಡುವುದಾಗಿ ಹೇಳಿದ್ದಲ್ಲ, ಸಂವಿಧಾನ ಬದಲಿಸುವುದಾಗಿ ಹೇಳಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷ ದೇಶವಿರೋಧಿ ಶಕ್ತಿಗಳ ಜೊತೆ ಸೇರಿದೆ. ಭಾರತ ದೇಶದಲ್ಲಿ ಅಭದ್ರತೆ ಸೃಷ್ಟಿಸುವ ಪಾತ್ರದಲ್ಲಿ ಕಾಂಗ್ರೆಸ್ ಇರುವುದಾಗಿ ಆರೋಪವಿದ್ದು, ಕಾಂಗ್ರೆಸ್ಸಿನ ಒಬ್ಬ ಶ್ರೀಮಂತ ಸದಸ್ಯನಾದ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದೇನು? 'ನಾವು ಏನೋ ಒಂದು ಮಾಡ್ತಾ ಇದ್ದೇವೆ. ನೀವು ಗಮನಿಸಿ; ಮುಂದಿನ ದಿನಗಳಲ್ಲಿ ಸಂವಿಧಾನವನ್ನೇ ಕಿತ್ತು ಹಾಕುತ್ತೇವೆ' ಎಂಬ ಅರ್ಥದಲ್ಲಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ ಎಂದು ಆರೋಪಿಸಿದರು.

ಜೈ ಭೀಮ್ ಎನ್ನುವ ಕಾಂಗ್ರೆಸ್ಸಿನವರ ಮುಖವಾಡ ಈಗ ಕಳಚಿಬಿದ್ದಿದೆ. ಜನತೆಯ ಮುಂದೆ ಕಾಂಗ್ರೆಸ್ ದಲಿತ ವಿರೋಧಿ, ಕಾಂಗ್ರೆಸ್ ಸಂವಿಧಾನ ವಿರೋಧಿ, ಈ ಸಂವಿಧಾನ ಬುಡಮೇಲು ಮಾಡಲು, ಬಾಬಾಸಾಹೇಬ ಡಾ. ಅಂಬೇಡ್ಕರ್ ಅವರು ಕನಸು ಕಂಡಂಥ ಅಖಂಡ ರಾಷ್ಟ್ರವನ್ನು ಛಿದ್ರಗೊಳಿಸಲು ಷಡ್ಯಂತ್ರದ ಭಾಗವಾಗಿ ಕಾಂಗ್ರೆಸ್ ಸಂಚನ್ನು ರೂಪಿಸುತ್ತಿದೆ ಎಂಬುದು ಡಿ.ಕೆ.ಶಿವಕುಮಾರ್ ಅವರ ಸಂದರ್ಶನದಿಂದ ಹೊರಬಂದಿದೆ ಎಂದು ವಿಶ್ಲೇಷಿಸಿದರು. ಸಿದ್ದರಾಮಯ್ಯನವರು ಈ ಕೂಡಲೇ ಡಿ.ಕೆ.ಶಿವಕುಮಾರ್ ಅವರನ್ನು ಸಚಿವಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ನಗರ ಜಿಲ್ಲಾ ಅಧ್ಯಕ್ಷರಾದ ಎಸ್.ಹರೀಶ್, ಸಪ್ತಗಿರಿ ಗೌಡ, ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಕೌತಾ, ಮೋರ್ಚಾದ ಉಪಾಧ್ಯಕ್ಷ ಹೂಡಿ ಮಂಜುನಾಥ್, ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications