ಬಿಜೆಪಿ ಶಾಸಕರ ಮೇಲೆ ಯಾಕೆ ಎಫ್ಐಆರ್ ದಾಖಲಿಸಿದ್ದೀರಿ?: ಎನ್.ರವಿಕುಮಾರ್
ಬೆಂಗಳೂರು, ಮೇ 25: ಕಾಂಗ್ರೆಸ್ ಸರ್ಕಾರ ರಚನೆಯ ಬಳಿಕ ನಮ್ಮ ಶಾಸಕರ ಮೇಲೆ ಯಾಕೆ ಎಫ್ಐಆರ್ ದಾಖಲಿಸಿದ್ದೀರಿ? ಎಂಥ ಸರಕಾರ ನಿಮ್ಮದು ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಆಕ್ರೋಶ ಹೊರಹಾಕಿದರು.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ಡಾ. ಅಶ್ವತ್ಥನಾರಾಯಣರ ವಿರುದ್ಧ ಎಫ್ಐಆರ್ ಮಾಡಿದ್ದನ್ನು ಆಕ್ಷೇಪಿಸಿದರು. ಯಾವ ಕಾರಣಕ್ಕೆ ಎಫ್ಐಆರ್ ಮಾಡಿದ್ದೀರಿ ಎಂದು ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ನಿಮ್ಮದು ಪಿಎಫ್ಐ ಕಾರ್ಯಕರ್ತರನ್ನು ರಕ್ಷಿಸುವ ಸರಕಾರವೇ? ಕ್ಯಾಂಪಸ್ ಫ್ರಂಟ್, ನಕ್ಸಲೀಯರನ್ನು ರಕ್ಷಿಸುವ ಸರಕಾರವೇ? ಎಂದು ಪ್ರಶ್ನಿಸಿದ್ದಾರೆ.
ಇನ್ನೂ ಹರೀಶ್ ಪೂಂಜ, ಡಾ. ಅಶ್ವತ್ಥನಾರಾಯಣರವರು ಟಿಪ್ಪು ಸುಲ್ತಾನ್ ಜಯಂತಿ ಮಾಡಬಾರದು ಎಂದು ಹೇಳಿದ್ದು ತಪ್ಪೇ? ನಮ್ಮ ಹಿಂದೂ ಧರ್ಮವನ್ನು ನಾಶ ಮಾಡಿದ, ಸಾವಿರಾರು ದೇವಾಲಯ ಧ್ವಂಸ ಮಾಡಿದ, ಲಕ್ಷಾಂತರ ಜನರನ್ನು ಮತಾಂತರ ಮಾಡಿದ ಟಿಪ್ಪು ಸುಲ್ತಾನ್ ಧೋರಣೆಯನ್ನು ಅವರು ಖಂಡಿಸಿದ್ದು ತಪ್ಪೇ. ಕ್ಯಾಂಪಸ್ ಫ್ರಂಟ್, ಪಿಎಫ್ಐ, ಎಸ್ಡಿಪಿಐ ಕಾರ್ಯಕರ್ತರ ಮೇಲಿದ್ದ ಕೇಸುಗಳನ್ನು ತೆಗೆದುಹಾಕಿದ್ದೀರಿ. ನಮ್ಮ ಶಾಸಕರ ಮೇಲೆ ಎಫ್ಐಆರ್ ಮಾಡಿದ್ದೀರಿ, ಮಂಗಳೂರು ಮತ್ತಿತರ ಕಡೆ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಎಫ್ಐಆರ್ ಮಾಡುತ್ತಿಲ್ಲ ಎಂದು ಟೀಕಿಸಿದರು.

ಆರ್ ಎಸ್ ಎಸ್ ಸಂಘಟನೆಯನ್ನು ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಬ್ಯಾನ್ ಮಾಡಿದ್ದರು. ಪರಿಣಾಮ ಏನಾಗಿದೆ ಎಂದು ಪ್ರಿಯಾಂಕ್ ಖರ್ಗೆಯವರು ತಮ್ಮ ಹಿರಿಯರಿಂದ ತಿಳಿದುಕೊಳ್ಳಲಿ. ಆಮೇಲೆ ಬ್ಯಾನ್ ಮಾಡಲಿ ಎಂದು ನುಡಿದರು. ರಾಜ್ಯದಲ್ಲಿ ಕೇಸರೀಕರಣ ಏನಾಗಿದೆ ಎಂದು ಮಾಹಿತಿ ಕೊಡಿ ಎಂದು ಆಗ್ರಹಿಸಿದರು.
ಬಜರಂಗದಳ, ಆರೆಸ್ಸೆಸ್ ರದ್ದು ಮಾಡುವ ಕುರಿತು ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಕುರಿತು ಮಾತನಾಡಿ, ಪ್ರಿಯಾಂಕ್ ಖರ್ಗೆ ಅವರಿನ್ನೂ ಮಗು ಇರಬೇಕು. ಆರೆಸ್ಸೆಸ್ ಏನು ಮಾಡುತ್ತಿದೆ ಎಂದು ಅಧ್ಯಯನ ಮಾಡಬೇಕು; ಆರೆಸ್ಸೆಸ್ ಇರುವ ಕಾರಣ ಪ್ರಪಂಚದಲ್ಲಿ ಭಾರತದ ಗೌರವ ಹೆಚ್ಚಾಗಿದೆ. ಇಡೀ ಪ್ರಪಂಚಕ್ಕೆ ಆರೆಸ್ಸೆಸ್ ಕುರಿತು ಗೌರವ ಇದೆ. ನೀವು ಕೂಪ ಮಂಡೂಕರಾಗಿ ಆರೆಸ್ಸೆಸ್ ಕುರಿತು ಅಧ್ಯಯನ ಮಾಡುತ್ತಿದ್ದೀರಿ ಎಂದು ಕಿಡಿಕಾರಿದರು.
ಆರ್ ಎಸ್ ಎಸ್ ಧರ್ಮ ರಕ್ಷಣೆ ಮಾಡುತ್ತಿದೆ. ಬಡವರು, ಕಷ್ಟದಲ್ಲಿ ಇರುವವರ ಸೇವೆ ಮಾಡುತ್ತಿದೆ. ನೀವು ಪಿಎಫ್ಐ, ಕ್ಯಾಂಪಸ್ ಫ್ರಂಟ್, ಭಯೋತ್ಪಾದಕ ಸಂಘಟನೆಯನ್ನು ಬ್ಯಾನ್ ಮಾಡುವುದಿಲ್ಲ. ಧರ್ಮ ರಕ್ಷಿಸುವ ಬಜರಂಗದಳವನ್ನು ನಿಷೇಧಿಸಲು ಮುಂದಾಗಿದ್ದೀರಲ್ಲ ಎಂದು ಪ್ರಶ್ನಿಸಿದರು.
-
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
ಕೇರಳಂನಲ್ಲಿ ಕಾಂಗ್ರೆಸ್ - ಯುಡಿಎಫ್ ಮೈತ್ರಿಕೂಟಕ್ಕೆ ಮೂರನೇ ಎರಡರಷ್ಟು ಬಹುಮತ: ಡಿಸಿಎಂ ಡಿ.ಕೆ. ಶಿವಕುಮಾರ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications