Karnataka State Anthem : ಹೈಕೋರ್ಟ್ ಮೆಟ್ಟಿಲೇರಿದ ನಾಡ ಗೀತೆ ವಿವಾದ; ಸರ್ಕಾರಕ್ಕೆ ನೋಟಿಸ್ ಜಾರಿ
ಬೆಂಗಳೂರು.ಸೆ.30.ಬೂದಿ ಮುಚ್ಚಿದ ಕೆಂಡದಂತಿದ್ದ ನಾಡಗೀತೆ ವಿವಾದ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ಅನಂತಸ್ವಾಮಿ ಸಂಗೀತ ಸಂಯೋಜನೆ ಮಾಡಿರುವ ನಾಡಗೀತೆಯನ್ನು ಅಳವಡಿಸಿಕೊಂಡಿರುವ ಸಂಬಂಧ ಹೊರಡಿಸಿರುವ ಆದೇಶ ರದ್ದುಪಡಿಸಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್ ಶುಕ್ರವಾರ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಖ್ಯಾತ ರಾಗ ಸಂಯೋಜಕ ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ2 ನಿಮಿಷ 30 ಸೆಕೆಂಡ್ಗಳಲ್ಲಿನಾಡಗೀತೆ ಹಾಡುವ ಸಂಬಂಧ ಸರಕಾರ ಸೆ.25ರಂದು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಆ ಅರ್ಜಿ ಕುರಿತು ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯಪೀಠ ವಿಚಾರಣೆ ನಡೆಸಿ, ಪ್ರತಿವಾದಿಗಳಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಿಗೆ ತುರ್ತು ನೋಟಿಸ್ ಜಾರಿಗೆ ಆದೇಶಿಸಿತು.
ಅಲ್ಲದೇ ಯಾವ ಅಧಿಕಾರದಡಿ ಮತ್ತು ಯಾವ ನಿಯಮಗಳಡಿ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ ಎಂಬ ಬಗ್ಗೆ ದಾಖಲೆ ಸಮೇತ ವಿವರ ನೀಡುವಂತೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿದೆ.

ಅರ್ಜಿದಾರರ ವಾದವೇನು?
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ನಾಡಗೀತೆಗೆ ಮೈಸೂರು ಅನಂತಸ್ವಾಮಿಯವರ ರಾಗ ಸಂಯೋಜನೆ ಅಳವಡಿಸಿಕೊಳ್ಳುವಂತೆ ಸರ್ಕಾರ ಹೊರಡಿಸಿರುವ ಆದೇಶವು 2013ರ ಜೂ.12ರಂದು ವಸಂತ ಕನಕಪುರ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ತೀರಾ ತದ್ವಿರುದ್ಧವಾಗಿದೆ ಎಂದು ಹೇಳಿದರು.
ಅಲ್ಲದೆ, ಮೈಸೂರು ಅನಂತಸ್ವಾಮಿಯವರು ಪೂರ್ಣ ನಾಡಗೀತೆಗೆ ರಾಗ ಸಂಯೋಜನೆ ಮಾಡಿಲ್ಲವೆಂದು ಆ ಸಭೆಯಲ್ಲಿ ಚರ್ಚಿಸಲಾಗಿತ್ತು. ಡಾ. ಸಿ. ಅಶ್ವಥ್ ರಾಗ ಸಂಯೋಜನೆ ಮುಂದುವರಿಸುವ ಬಗ್ಗೆ ಸ್ವತಃ ಮೈಸೂರು ಅನಂತಸ್ವಾಮಿ ಒಪ್ಪಿಕೊಂಡಿದ್ದರು. ಅಲ್ಲದೇ ರಾಜ್ಯ ಸರ್ಕಾರ ನಾಡೋಜ ಚನ್ನವೀರ ಕಣವಿ ನೇತೃತ್ವದ ಸಮಿತಿಯ ಶಿಫಾರಸನ್ನು ಕಡೆ ಗಣಿಸಿದೆ. ಆ ಸಮಿತಿ ಡಾ. ಸಿ. ಅಶ್ವಥ್ ರಾಗ ಸಂಯೋಜನೆ ಅಳವಡಿಸಿಕೊಳ್ಳಲು ಶಿಫಾರಸು ಮಾಡಿತ್ತು ಎಂದು ವಿವರಿಸಿದರು.
ತರಾತುರಿಯಲ್ಲಿ ಆದೇಶ:
ಮೈಸೂರು ಅನಂತಸ್ವಾಮಿ ಅವರ ನಾಡಗೀತೆಗೆ ಅನಂತಸ್ವಾಮಿ ರಾಗ ಸಂಯೋಜನೆ ಮಾಡಿದ್ದರು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಈ ಸಂಬಂಧ ಅರ್ಜಿದಾರರ ಸಲ್ಲಿಸಿರುವ ಮನವಿಯನ್ನು ಸರ್ಕಾರ ಪರಿಗಣಿಸಿಲ್ಲ. ಈ ಹಿನ್ನೆಲೆಯಲ್ಲಿನಾಡಗೀತೆಯ ರಾಗ, ಧಾಟಿ ಮತ್ತು ಸಮಯದ ಮಿತಿ ಕುರಿತು ರಾಜ್ಯ ಸರಕಾರ ತರಾತುರಿಯಲ್ಲಿಆದೇಶ ಹೊರಡಿಸಿದೆ. ಹಾಗಾಗಿ, ಈ ಆದೇಶ ರದ್ದುಗೊಳಿಸಬೇಕೆಂದರು.
ಆದ್ದರಿಂದ, ಖ್ಯಾತ ರಾಗ ಸಂಯೋಜಕ ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ2 ನಿಮಿಷ 30 ಸೆಕೆಂಡ್ಗಳಲ್ಲಿನಾಡಗೀತೆ ಹಾಡುವ ಸಂಬಂಧ ರಾಜ್ಯ ಸರ್ಕಾರ ಸೆ.25ರಂದು ಹೊರಡಿಸಿರುವ ಆದೇಶ ರದ್ದುಪಡಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications