ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಹುಮತ ಸಿಕ್ಕಿದೆ ಎಂದು ನನ್ನನ್ನು ಸಂಪುಟದಿಂದ ಕೈಬಿಡುವುದು ತಪ್ಪು: ಅಬಕಾರಿ ಸಚಿವ ಎಚ್. ನಾಗೇಶ್!

|
Google Oneindia Kannada News

ಬೆಂಗಳೂರು, ಜ. 13: ತಮ್ಮನ್ನು ಸಚಿವ ಸಂಪುಟದಿಂದ ಕೈಬಿಡಲಾಗುತ್ತಿದೆ ಎಂಬುದರ ಕುರಿತು ಅಬಕಾರಿ ಸಚಿವ ಎಚ್. ನಾಗೇಶ್ ಅವರು ಬೆಂಗಳೂರಿನಲ್ಲಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಷ್ಟ ಕಾಲದಲ್ಲಿ ಬಿಜೆಪಿ ಸರ್ಕಾರದ ಕೈಹಿಡಿದ್ದೇನೆ. ಈಗ ಸರ್ಕಾರಕ್ಕೆ ಬಹುಮತ ಸಿಕ್ಕಿದೆ ಎಂದು ನನ್ನನ್ನು ಸಂಪುಟದಿಂದ ಕೈಬಿಡುವುದು ತಪ್ಪು ಎಂದಿದ್ದಾರೆ.

ಇಂದು ಬೆಳಗ್ಗೆ 11.30ಕ್ಕೆ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲು ಸಿಎಂ ಯಡಿಯೂರಪ್ಪ ಅವರು ಸೂಚಿಸಿದ್ದಾರೆ. ನಾನು ಸಂಪುಟ ಸಭೆಯಲ್ಲಿ ಭಾಗವಹಿಸುತ್ತಿದ್ದೇನೆ. ಮಂತ್ರಿಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸರ್ಕಾರ ಸೇರಿದ್ದೇನೆ. ಹೀಗಾಗಿ ಈಗ ರಾಜೀನಾಮೆ ಕೊಡಲು ಕಾರಣವೇ ಇಲ್ಲ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ಸಚಿವ ಸ್ಥಾನಕ್ಕೆ ಅಬಕಾರಿ ಸಚಿವ ನಾಗೇಶ್ ರಾಜೀನಾಮೆ ನಿಶ್ಚಿತ?ಸಚಿವ ಸ್ಥಾನಕ್ಕೆ ಅಬಕಾರಿ ಸಚಿವ ನಾಗೇಶ್ ರಾಜೀನಾಮೆ ನಿಶ್ಚಿತ?

ಸಂಪುಟ ಸಭೆಯ ಬಳಿಕ ಕೋಲಾರಕ್ಕೆ ತೆರೆಳಿ ಬೆಂಬಲಿಗರೊಂದಿಗೆ ಚರ್ಚೆ ನಡೆಸುವುದಾಗಿ ಇದೇ ಸಂದರ್ಭದಲ್ಲಿ ನಾಗೇಶ್ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. ಹೀಗಾಗಿ ಸಂಪುಟದಿಂದ ನಾಗೇಶ್ ಅವರನ್ನು ಕೈಬಿಟ್ಟಲ್ಲಿ ಅವರು ಬಿಜೆಪಿಗೆ ಕೊಟ್ಟಿರುವ ಬೆಂಬಲವನ್ನು ವಾಪಾಸ್ ಪಡೆಯುವುದು ಬಹುತೇಕ ಖಚಿತವಾಗಿದೆ.

Nagesh said its wrong that dropping me from cabinet as BJP govt has got majority

Recommended Video

ಮೈಸೂರು: ಡಿಸಿ ರೋಹಿಣಿ ಮತ್ತು ಸಾರಾ ಮಹೇಶ್ ಮಧ್ಯೆ ಶೀತಲ ಸಮರ | Oneindia Kannada

ತಮ್ಮನ್ನು ಸಂಪುಟದಿಂದ ಕೈಬಿಟ್ಟಲ್ಲಿ ಮುಂದೆನು? ಎಂಬುದನ್ನು ನಂತರ ತೀರ್ಮಾನ ಮಾಡುತ್ತೇನೆ. ಈಗಲೇ ಏನೂ ಹೇಳುವುದಿಲ್ಲ ಎಂದು ನಾಗೇಶ್ ಅವರು ತಮ್ಮ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

English summary
Excise Minister H Nagesh said that Now it is wrong that dropping me from the cabinet as the BJP government has got majority. Minister Nagesh speaking to the media responded in Bengaluru. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X