ಬಹುಮತ ಸಿಕ್ಕಿದೆ ಎಂದು ನನ್ನನ್ನು ಸಂಪುಟದಿಂದ ಕೈಬಿಡುವುದು ತಪ್ಪು: ಅಬಕಾರಿ ಸಚಿವ ಎಚ್. ನಾಗೇಶ್!
ಬೆಂಗಳೂರು, ಜ. 13: ತಮ್ಮನ್ನು ಸಚಿವ ಸಂಪುಟದಿಂದ ಕೈಬಿಡಲಾಗುತ್ತಿದೆ ಎಂಬುದರ ಕುರಿತು ಅಬಕಾರಿ ಸಚಿವ ಎಚ್. ನಾಗೇಶ್ ಅವರು ಬೆಂಗಳೂರಿನಲ್ಲಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಷ್ಟ ಕಾಲದಲ್ಲಿ ಬಿಜೆಪಿ ಸರ್ಕಾರದ ಕೈಹಿಡಿದ್ದೇನೆ. ಈಗ ಸರ್ಕಾರಕ್ಕೆ ಬಹುಮತ ಸಿಕ್ಕಿದೆ ಎಂದು ನನ್ನನ್ನು ಸಂಪುಟದಿಂದ ಕೈಬಿಡುವುದು ತಪ್ಪು ಎಂದಿದ್ದಾರೆ.
ಇಂದು ಬೆಳಗ್ಗೆ 11.30ಕ್ಕೆ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲು ಸಿಎಂ ಯಡಿಯೂರಪ್ಪ ಅವರು ಸೂಚಿಸಿದ್ದಾರೆ. ನಾನು ಸಂಪುಟ ಸಭೆಯಲ್ಲಿ ಭಾಗವಹಿಸುತ್ತಿದ್ದೇನೆ. ಮಂತ್ರಿಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸರ್ಕಾರ ಸೇರಿದ್ದೇನೆ. ಹೀಗಾಗಿ ಈಗ ರಾಜೀನಾಮೆ ಕೊಡಲು ಕಾರಣವೇ ಇಲ್ಲ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಸಚಿವ ಸ್ಥಾನಕ್ಕೆ ಅಬಕಾರಿ ಸಚಿವ ನಾಗೇಶ್ ರಾಜೀನಾಮೆ ನಿಶ್ಚಿತ?
ಸಂಪುಟ ಸಭೆಯ ಬಳಿಕ ಕೋಲಾರಕ್ಕೆ ತೆರೆಳಿ ಬೆಂಬಲಿಗರೊಂದಿಗೆ ಚರ್ಚೆ ನಡೆಸುವುದಾಗಿ ಇದೇ ಸಂದರ್ಭದಲ್ಲಿ ನಾಗೇಶ್ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. ಹೀಗಾಗಿ ಸಂಪುಟದಿಂದ ನಾಗೇಶ್ ಅವರನ್ನು ಕೈಬಿಟ್ಟಲ್ಲಿ ಅವರು ಬಿಜೆಪಿಗೆ ಕೊಟ್ಟಿರುವ ಬೆಂಬಲವನ್ನು ವಾಪಾಸ್ ಪಡೆಯುವುದು ಬಹುತೇಕ ಖಚಿತವಾಗಿದೆ.
Recommended Video
ತಮ್ಮನ್ನು ಸಂಪುಟದಿಂದ ಕೈಬಿಟ್ಟಲ್ಲಿ ಮುಂದೆನು? ಎಂಬುದನ್ನು ನಂತರ ತೀರ್ಮಾನ ಮಾಡುತ್ತೇನೆ. ಈಗಲೇ ಏನೂ ಹೇಳುವುದಿಲ್ಲ ಎಂದು ನಾಗೇಶ್ ಅವರು ತಮ್ಮ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.