ಎಲ್ಐಸಿ ಏಜೆಂಟರು, ನೌಕರರಿಗೆ ಪ್ರಯೋಜನ: ಮೋದಿಗೆ ಧನ್ಯವಾದ ತಿಳಿಸಿದ ಕಟೀಲ್
ಬೆಂಗಳೂರು, ಸೆಪ್ಟೆಂಬರ್ 19: ಗೌರಿ, ಗಣೇಶ ಹಬ್ಬದ ಸಂದರ್ಭದಲ್ಲಿ ಭಾರತೀಯ ಜೀವವಿಮಾ ನಿಗಮದ (ಎಲ್ಐಸಿ) ಏಜೆಂಟರು ಮತ್ತು ಉದ್ಯೋಗಿಗಳಿಗೆ ವಿವಿಧ ಸೌಲಭ್ಯಗಳನ್ನು ಪ್ರಕಟಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರದ ಬಿಜೆಪಿ ಸರಕಾರದ ಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಸಂತಸ ಸೂಚಿಸಿದ್ದು, ಪ್ರಧಾನಿಯವರು ಮತ್ತು ಸಚಿವಸಂಪುಟಕ್ಕೆ ಧನ್ಯವಾದ ತಿಳಿಸಿದ್ದಾರೆ.
ಕೌಟುಂಬಿಕ ಪಿಂಚಣಿ ಹೆಚ್ಚಳ, ಏಜೆಂಟರ ಗ್ರಾಚ್ಯುಟಿ ಮಿತಿ ಏರಿಕೆ, ಮರುನೇಮಕಗೊಂಡ ಏಜೆಂಟರ ರಿನೀವಲ್ ಕಮಿಷನ್ ನೀಡುವ ನಿರ್ಧಾರ ಮಾಡಲಾಗಿದೆ. ಇದು ಎಲ್ಐಸಿಯಲ್ಲಿ ಕೆಲಸ ಮಾಡುವ 1 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಮತ್ತು 13 ಲಕ್ಷಕ್ಕೂ ಹೆಚ್ಚು ಏಜೆಂಟರಿಗೆ ಪ್ರಯೋಜನ ಕೊಡಲಿದೆ ಎಂದು ಅವರು ತಿಳಿಸಿದ್ದಾರೆ.

ಏಜೆಂಟರ ಗ್ರಾಚ್ಯುಟಿ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಸಿದ್ದಾರೆ. ಇದರಿಂದ 13 ಲಕ್ಷಕ್ಕೂ ಹೆಚ್ಚು ಏಜೆಂಟರಿಗೆ ಪ್ರಯೋಜನ ಸಿಗಲಿದೆ. ಮರುನೇಮಕಗೊಂಡ ಏಜೆಂಟರಿಗೆ ಹಿಂದೆ ರಿನಿವಲ್ ಕಮಿಷನ್ ಸಿಗುತ್ತಿರಲಿಲ್ಲ. ಇದೀಗ ಈ ಸೌಲಭ್ಯ ಕಲ್ಪಿಸಲಾಗಿದೆ. ಏಜೆಂಟರ ಟರ್ಮ್ ಇನ್ಶೂರೆನ್ಸ್ ಕವರ್ ಸೌಲಭ್ಯದಲ್ಲೂ ಬದಲಾವಣೆ ಮಾಡಲಾಗಿದೆ. ಉದ್ಯೋಗಿಗಳ ಕುಟುಂಬಗಳ ಯೋಗಕ್ಷೇಮವನ್ನು ಗಮನದಲ್ಲಿ ಇಟ್ಟುಕೊಂಡು ಕುಟುಂಬ ಪಿಂಚಣಿ ಪ್ರಮಾಣದ ಬದಲಾವಣೆ ಮಾಡಿದ್ದಾರೆ ಎಂದು ವಿವರಿಸಿದ್ದಾರೆ.

ಎಲ್ಐಸಿಗೆ ಸಂಬಂಧಿಸಿದ ಈ ಉತ್ತಮ ಕ್ರಮಗಳಿಂದ ಉದ್ಯೋಗಿಗಳು ಮತ್ತು ಏಜೆಂಟರು ಹೆಚ್ಚಿನ ಉತ್ಸಾಹದಿಂದ ಕೆಲಸ ಮಾಡಲು ಪ್ರೇರೇಪಣೆ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications