ಸಿಎಂ ಹುದ್ದೆ ಡೀಲ್ ಹೇಳಿಕೆ ನೀಡಿದ ಯತ್ನಾಳ್ಗೆ ಶಿಸ್ತು ಸಮಿತಿ ನೋಟಿಸ್: ಕಟೀಲ್ ಎಚ್ಚರಿಕೆ
ತುಮಕೂರು, ಮೇ. 07: ''2500 ಕೋಟಿ ರೂ.ಗೆ ಕರ್ನಾಟಕ ಸಿಎಂ ಹುದ್ದೆ ಆಫರ್ ಕೊಟ್ಟಿದ್ದರು'' ಎಂಬ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಶಿಸ್ತು ಸಮಿತಿ ಮೂಲಕ ನೋಟಿಸ್ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಶನಿವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಟೀಲ್, ಮುಖ್ಯಮಂತ್ರಿ ಸ್ಥಾನ ನೀಡಲು 2500 ಕೋಟಿ ರೂ. ಹಣ ಕೇಳಿದ್ದಾಗಿ ಹೇಳಿಕೆ ನೀಡಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೋಟಿಸ್ ನೀಡಿ ವಿವರ ಪಡೆಯಲಾಗುವುದು ಎಂದು ಕಟೀಲ್ ಸ್ಪಷ್ಟಪಡಿಸಿದ್ದಾರೆ.

ಅನಗತ್ಯ ಹೇಳಿಕೆ ನೀಡುವ ಯತ್ನಾಳ್ ಅವರಿಗೆ ಈವರೆಗೂ ಎರಡು ನೋಟಿಸ್ ಕೊಟ್ಟು ವಿವರಣೆ ಪಡೆದುಕೊಳ್ಳಲಾಗಿದೆ. ಈ ಭಾರಿಯೂ ಕೇಂದ್ರ ಶಿಸ್ತು ಸಮಿತಿ ಮೂಲಕ ನೋಟಿಸ್ ನೀಡಲಾಗುವುದು. ಈ ಬಗ್ಗೆ ವರಿಷ್ಠರಿಗೆ ದೂರು ನೀಡಲಾಗಿದೆ. ಅವರಿಂದ ಪೂರ್ಣ ವಿವರಣೆ ಪಡೆದ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟ ಪಡಿಸಿದ್ದಾರೆ.

ಅನಗತ್ಯ ಹೇಳಿಕೆ ನೀಡುವ ಯತ್ನಾಳ್ ಪದೇ ಪದೇ ಈ ರೀತಿಯ ಅನಗತ್ಯ ಹೇಳಿಕೆ ನೀಡಿ ಗೊಂದಲ ಸೃಷ್ಠಿ ಮಾಡುತ್ತಿದ್ದಾರೆ. ಈ ಬಗ್ಗೆ ಈವರೆಗೂ ಎರಡು ನೋಟಿಸ್ ಕೊಟ್ಟು ವಿವರ ಪಡೆದುಕೊಳ್ಳಲಾಗಿದೆ. ಈ ಬಾರಿಯೂ ಕೇಂದ್ರ ಶಿಸ್ತು ಸಮಿತಿ ಮೂಲಕ ನೋಟಿಸ್ ನೀಡಲಗುವುದು. ಉತ್ತರ ಬಂದ ನಂತರ ಕ್ರಮ ಜರುಗಿಸಲಾಗುವುದು.

ಬಿಜೆಪಿಯಲ್ಲಿ ದೊಡ್ಡವರು, ಸಣ್ಣವರು ಎನ್ನುವ ಪ್ರಮೆಯವೇ ಇಲ್ಲ. ಎಲ್ಲರೂ ಶಿಸ್ತು ಸಮಿತಿ ವ್ಯಾಪ್ತಿಗೆ ಒಳಪಡುತ್ತಾರೆ ಎಂದು ಕಟೀಲ್ ಸ್ಪಷ್ಟನೆ ನೀಡಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications