Get Updates
Get notified of breaking news, exclusive insights, and must-see stories!

ರಸ್ತೆಯಲ್ಲೇ ನಮಾಜ್: ಶರಣ್‌ ಪಂಪ್‌ವಲ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು, ಜೂನ್ 08: ಮಂಗಳೂರು ನಗರದ ರಸ್ತೆಯಲ್ಲಿ ನಮಾಜ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಸೃಷ್ಟಿಸುವ ಪೋಸ್ಟ್ ಹಂಚಿಕೊಂಡ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ವಿಭಾಗ ಸಹ ಸಂಚಾಲಕ ಶರಣ್ ಪಂಪ್‌ವೆಲ್ ವಿರುದ್ಧದ ಎಫ್ಐಆರ್‌ಗೆ ಹೈಕೋರ್ಟ್ ತಡೆ ನೀಡಿದೆ.

ಶರಣ್ ಪಂಪ್‌ವೆಲ್ ಸಲ್ಲಿಸಿರುವ ಅರ್ಜಿ ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ನ್ಯಾಯಪೀಠ, ಹಲವು ಪ್ರಕರಣಗಳಲ್ಲಿ ಒಂದು ಚಾರ್ಜ್ ಶೀಟ್ ಸಲ್ಲಿಸಲು ತಿಂಗಳುಗಟ್ಟಲೇ ಸಮಯ ತೆಗೆದುಕೊಳ್ಳುತ್ತೀರಿ. ಅದು ಹೇಗೆ ಈ ಪ್ರಕರಣದಲ್ಲಿ 24 ಗಂಟೆಗೊಳಗಾಗಿ 'ಬಿ' ರಿಪೋರ್ಟ್ ಸಲ್ಲಿಸಿದ್ದೀರಿ?. ಅದು ಹೇಗೆ ಸಾಧ್ಯವಾಯಿತು? ಎಂದು ಪೊಲೀಸರ ಕಾರ್ಯವೈಖರಿ ಕುರಿತು ಸರ್ಕಾರಿ ಪರ ವಕೀಲರನ್ನು ಖಾರವಾಗಿ ಪ್ರಶ್ನಿಸಿತು.

Namaz On A Public Road At Mangaluru HC Stayed Case Against Sharan Pumpwell

ಅರ್ಜಿದಾರರ ಪರ ವಕೀಲರು, ಅರ್ಜಿದಾರರು ಕಾನೂನು ಪಾಲಿಸುವ ನಾಗರೀಕರಾಗಿದ್ದಾರೆ. ನಗರದ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದು, ರಸ್ತೆ ಸಂಚಾರಕ್ಕೆ ತಡೆ ಉಂಟಾಯಿತು. ಬಳಿಕ ಕದ್ರಿ ಠಾಣಾ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದರು. ತದನಂತರ ಪ್ರಕರಣ ದಾಖಸಿದ್ದ ಅಧಿಕಾರಿಯನ್ನು ಕಡ್ಡಾಯ ರಜೆ ಮೇಲೆ ಮನೆಗೆ ಕಳುಹಿಸಿ, ಕೆಲವೇ ಗಂಟೆಗಳಲ್ಲಿ 'ಬಿ 'ರಿಪೋರ್ಟ್ ಸಲ್ಲಿಸಿದ್ದರು ಎಂದರು.

ಅಲ್ಲದೆ, ಅದರಲ್ಲಿ ಪೊಲೀಸರು ನಮಾಜ್ ಮಾಡುವವರಿಗೆ ರಸ್ತೆ ಸಂಚಾರಕ್ಕೆ ತಡೆ ಉಂಟುಮಾಡುವ ಯಾವುದೇ ಉದ್ದೇಶ ಇರಲಿಲ್ಲ ಎಂದು ಉಲ್ಲೇಖಿಸಿದ್ದರು. ಈ ಘಟನೆ ಖಂಡಿಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಅರ್ಜಿದಾರರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಈ ಕುರಿತು ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದ್ದು ಸುಳ್ಳು ಆರೋಪ ಹೊರಿಸಲಾಗಿದೆ. ಹಾಗಾಗಿ ಪ್ರಕರಣ ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.

ಪ್ರಕರಣದ ಹಿನ್ನೆಲೆ: ನಗರದ ಕಂಕನಾಡಿ ಸಮೀಪದ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲೇ ನಮಾಜ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದರು. ಬಳಿಕ ಪ್ರಕರಣ ದಾಖಸಿದ ಅಧಿಕಾರಿಯನ್ನು ಕಡ್ಡಾಯ ರಜೆ ಮೇಲೆ ಮನೆಗೆ ಕಳುಹಿಸಿ, ಕೆಲವೇ ಗಂಟೆಗಳಲ್ಲಿ 'ಬಿ' ರಿಪೋರ್ಟ್ ಸಲ್ಲಿಸಿದ್ದರು.

ಅದರಲ್ಲಿ ಪೊಲೀಸರು ನಮಾಜ್ ಮಾಡುವವರಿಗೆ ರಸ್ತೆ ಸಂಚಾರಕ್ಕೆ ತಡೆ ಉಂಟುಮಾಡುವ ಯಾವುದೇ ಉದ್ದೇಶ ಇರಲಿಲ್ಲ ಎಂದು ಉಲ್ಲೇಖಿಸಿದ್ದರು. ತದನಂತರ ಪ್ರಕರಣದ ವಿಚಾರಣೆಗೆ ಎಸಿಪಿ ದರ್ಜೆಯ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ಮಾಹಿತಿ ನೀಡಿದರು.

ಈ ಎಲ್ಲ ಘಟನೆಯ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಶರಣ್ ಪಂಪವೆಲ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ, 'ಮಂಗಳೂರಿನ ಕಂಕನಾಡಿ ಬಳಿ ಸಾರ್ವಜನಿಕರಿಗೆ ಉದ್ದೇಶಪೂರ್ವಕವಾಗಿ ತೊಂದರೆ ನೀಡಲು ನಡೆಸಿರುವ ನಮಾಜ್ ಬಗ್ಗೆ ಸಂಬಂಧಪಟ್ಟವರಿಗೆ ಈಗಾಗಲೇ ತಿಳಿಸಲಾಗಿದೆ. ಶುಕ್ರವಾರ ಮತ್ತೆ ಅದೇ ಜಾಗದಲ್ಲಿ ನಮಾಜ್ ನಡೆದರೆ ಬಜರಂಗದಳ ಇದರ ವಿರುದ್ಧ ನೇರ ಕಾರ್ಯಾಚರಣೆ ನಡೆಸಿ ನಿಲ್ಲಿಸುತ್ತದೆ' ಎಂದು ಪೋಸ್ಟ್ ಮಾಡಿದ್ದರು.

ಬಳಿಕ ಜನರಲ್ಲಿ ದ್ವೇಷ ಭಾವನೆ ಉಂಟಾಗುವಂತೆ ಹಾಗೂ ಕಾನೂನನ್ನು ಕೈಗೆತ್ತಿಕೊಳ್ಳುವ ಬೆದರಿಕೆ ಹಾಕಿ ಸಮಾಜದಲ್ಲಿ ಭಯವನ್ನುಂಟು ಮಾಡುವ ರೀತಿಯಲ್ಲಿ ಪೋಸ್ಟನ್ನು ಮಾಡಿದ್ದಾರೆ. ಈ ಬಗ್ಗೆ ಮಂಗಳೂರು ನಗರದಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವುದರಿಂದ ಅವರ ವಿರುದ್ಧ ಮಂಗಳೂರು ಸಿಟಿ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಇದನ್ನು ರದ್ದುಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+