ರಾಜ್ಯೋತ್ಸವದ ದಿನದಂದು ಬಿಎಸ್ವೈ ಸರಕಾರದ ಅಪಚಾರ: ಟ್ವಿಟ್ಟರ್ ಅಭಿಯಾನ
ಬೆಂಗಳೂರು, ನ 2: ಕನ್ನಡ ರಾಜ್ಯೋತ್ಸವದ ದಿನ, ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಹಲವಾರು ಜಿಲ್ಲಾ ಉಸ್ತುವಾರಿ ಸಚಿವರುಗಳು ಕನ್ನಡ ಧ್ವಜ ಅನಾವರಣಗೊಳಿಸದೇ ಅಪಚಾರವೆಸಗಿಸಿದ್ದಾರೆಂದು ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತ ಪಡಿಸಿವೆ.
ಈ ಸಂಬಂಧ, ಸಾಮಾಜಿಕ ತಾಣದಲ್ಲಿ ಅಭಿಯಾನ ನಡೆಸಲು ಕರೆ ನೀಡಲಾಗಿದೆ. ಇಂದು (ನ 2) ಸಂಜೆ ಐದು ಗಂಟೆಯಿಂದ #ನಮ್ಮಧ್ವಜ_ನಮ್ಮಹೆಮ್ಮೆ ಹ್ಯಾಷ್ ಟ್ಯಾಗ್ ಅಡಿಯಲಿ ಟ್ವಿಟ್ಟರ್ ಅಭಿಯಾನ ನಡೆಯಲಿದೆ.
ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಕನ್ನಡ ಧ್ವಜಾರೋಹಣ ನಡೆಸಿರುವಾಗ ಸಚಿವರುಗಳು ಜಿಲ್ಲಾ ಕೇಂದ್ರಗಳಲ್ಲಿ ಬಾವುಟ ಹಾರಿಸದೇ ಇರುವ ಹಿಂದಿನ ಕುತಂತ್ರ ಶಕ್ತಿಗಳು ಯಾವುವು ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರಶ್ನಿಸಿದೆ.

"ಬಾವುಟ ಹಾರಿಸದೇ ಸಚಿವರುಗಳು ಕನ್ನಡ ಧ್ವಜ, ಕನ್ನಡತನ, ಕನ್ನಡ ಅಸ್ಮಿತೆಯನ್ನು ಅವಮಾನಿಸಿದ್ದಾರೆ. ಕನ್ನಡ ಬಾವುಟವನ್ನು ಕನ್ನಡಿಗರು ತಮ್ಮ ಎದೆಯಲ್ಲಿಟ್ಟುಕೊಂಡು ಪೂಜಿಸುತ್ತ ಬಂದಿದ್ದಾರೆ. ನಮಗೆ ರಾಷ್ಟ್ರಪ್ರೇಮ ಎಷ್ಟು ಮುಖ್ಯವೋ ನಾಡಪ್ರೇಮವೂ ಅಷ್ಟೇ ಮುಖ್ಯ. ಕರ್ನಾಟಕದಿಂದ ಭಾರತ ಎಂಬುದನ್ನು ಮರೆಯಬಾರದು" ಎಂದು ಕರವೇ ಆಕ್ರೋಶ ವ್ಯಕ್ತ ಪಡಿಸಿದೆ .
ಕನ್ನಡಿಗರ ಸ್ವಾಭಿಮಾನವನ್ನು ಕೆಣಕುವ ಯಾವುದೇ ಶಕ್ತಿಗಳನ್ನು ನಾವು ಸಹಿಸುವುದಿಲ್ಲ. ಕನ್ನಡ ಧ್ವಜಾರೋಹಣ ಮಾಡದೇ ಕನ್ನಡಿಗರನ್ನು ಅಪಮಾನಿಸಿರುವ ಎಲ್ಲ ಸಚಿವರನ್ನು ಸಚಿವ ಸಂಪುಟದಿಂದ ಕೂಡಲೇ ವಜಾ ಮಾಡಬೇಕು. ಉಂಡ ಮನೆಗೆ ಕೇಡು ಬಯಸುವ ಇಂಥ ಜನಪ್ರತಿನಿಧಿಗಳು ನಮಗೆ ಬೇಕಾಗಿಲ್ಲ. ಹೆತ್ತ ತಾಯಿಯನ್ನೇ ಗೌರವಿಸದವರು ಜನರ ಹಿತ ಕಾಪಾಡಲು ಹೇಗೆ ಸಾಧ್ಯ ಎಂದು ಕರವೇ ಕಿಡಿಕಾರಿದೆ.
ಕರ್ನಾಟಕ ತನ್ನ ಎಲ್ಲ ಸಾಂಸ್ಕೃತಿಕ ಅನನ್ಯತೆಯೊಂದಿಗೆ ಭಾರತ ಒಕ್ಕೂಟದ ಭಾಗವಾಗಿದೆ. ವಿವಿಧತೆಯಲ್ಲಿ ಏಕತೆ ಎಂಬುದು ಒಕ್ಕೂಟದ ಮೂಲಮಂತ್ರ. ರಾಷ್ಟ್ರೀಯತೆಯ ಮೆರವಣಿಗಾಗಿ ನಾವು ನಮ್ಮತನಗಳನ್ನು ಕಳೆದುಕೊಳ್ಳಲು ಸಾಧ್ಯವಿಲ್ಲ. ಕರ್ನಾಟಕದ ಗೌರವ, ಕನ್ನಡಿಗರ ಸ್ವಾಭಿಮಾನವನ್ನು ಕೆಣಕುವ ಯಾವುದೇ ಶಕ್ತಿಯನ್ನು ನಾವು ಸಹಿಸುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಹೇಳಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications