ಹುಸೇನ್ ರೀತಿ ಅನಂತಮೂರ್ತಿಗೂ ಆಗುತ್ತಾ!

ಮೋದಿ ಅವರು ಪ್ರಧಾನಿಯಾದರೆ ನಾನು ದೇಶದಲ್ಲಿ ಉಳಿಯಲು ಸಾಧ್ಯವಿಲ್ಲ ಎಂದು ಹೇಳಿದ್ದು, ದೇಶ ಬಿಟ್ಟು ಹೋಗುತ್ತೇನೆ ಎಂದು ಎಲ್ಲೆಡೆ ಪ್ರಸಾರವಾಗಿದೆ ಎಂದು ಅನಂತಮೂರ್ತಿ ಅವರು ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ಭಾರಿ ಚರ್ಚೆಗೀಡಾಗಿದೆ.
ಬರೀ ಚರ್ಚೆ ಪರಸ್ಪರ ಕೆಸರೆರಚಾಟಕ್ಕೆ ಮಾತ್ರ ಸೀಮಿತವಾಗದೆ ಫೇಸ್ ಬುಕ್ ನಲ್ಲಿ ಅಭಿಯಾನ ಆರಂಭಿಸಲಾಗಿದೆ. ಮೋದಿ ಆಡಳಿತದ ಭಾರತದಲ್ಲಿ ನೆಲೆಸಲು ಸಾಧ್ಯವಿಲ್ಲದಿದ್ದರೆ ದೇಶ ತೊರೆಯಬಹುದು ಎಂದು ಫರ್ಮಾನು ಹೊರಡಿಸಲಾಗಿದೆ. ವಿದೇಶಿ ಯಾತ್ರೆಗೆ ಹಣ ಸಾಲದಿದ್ದರೆ ಮನಿ ಆರ್ಡರ್ ಕಳಿಸಲು ರೆಡಿ ಎನ್ನಲಾಗಿದೆ. ಕೆಲವರು ಈಗಾಗಲೇ ಮನಿ ಆರ್ಡರ್ ಮಾಡಿದ್ದಾರೆ ಎಂಬ ಸುದ್ದಿಯೂ ಇದೆ.
ಮಂಗಳೂರು ಮೂಲದ ಉದ್ಯಮಿ ನರೇಶ್ ಶೆಣೈ ಎಂಬುವವರು ಈ ಅಭಿಯಾನದ ರುವಾರಿಯಾಗಿದ್ದಾರೆ. ಈಗಾಗಲೇ ಅನಂತಮೂರ್ತಿ ಅವರಿಗೆ 12 ರು ಮನಿ ಆರ್ಡರ್ ಮಾಡಿದ್ದಾಗಿ ಹೇಳಿದ್ದಾರೆ. ಅನಂತಮೂರ್ತಿ ಅವರ ಆರ್ ಎಂವಿ ಎರಡನೇ ಹಂತದಲ್ಲಿರುವ ಮನೆಗೆ ಮನಿ ಆರ್ಡರ್ ಕಳಿಸಲಾಗಿದೆ.
ಮೋದಿ ಅವರು ಮುಂದಿನ ಪ್ರಧಾನಿಯಾಗಲಿದ್ದಾರೆ ಇದರಲ್ಲಿ ಯಾವುದೇ ಸಂಶಯಬೇಡ. ಮೋದಿ ಪ್ರಧಾನಿಯಾದರೆ ಅನಂತಮೂರ್ತಿ ಅವರು ನೆಲೆಸಲು ಸಾಧ್ಯವಿಲ್ಲವಂತೆ. ಹೀಗಾಗಿ ಅವರಿಗೆ ನನ್ನ ಕಡೆಯಿಂದ ಸ್ವಲ್ಪ ಹಣ ಸಹಾಯ ಮಾಡುತ್ತಿದ್ದೇನೆ ಎಂದು ಶೆಣೈ ಹೇಳಿದ್ದಾರೆ ಎಂದು ಡೆಕ್ಕನ್ ಕ್ರಾನಿಕಲ್ ವರದಿ ಮಾಡಿದೆ.
"ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದುಕೊಂಡು ಹಿರಿಯ ಸಾಹಿತಿಗಳಾಗಿ ಈ ರೀತಿ ಹೇಳಿಕೆ ನೀಡಿರುವುದು ತಪ್ಪಲ್ಲವೇ. ನಮ್ಮ ನಮೋ ಬ್ರಿಗೇಡ್ ನ ಸದಸ್ಯರೆಲ್ಲರೂ ಮನಿ ಆರ್ಡರ್ ಕಳಿಸಲು ಇಚ್ಛಿಸಿದ್ದಾರೆ. ಭಾರತೀಯರಾಗಿ ನಾವು ಮೋದಿ ಅವರನ್ನು ಬೆಂಬಲಿಸಬೇಕು. ಒಂದು ವೇಳೆ ಸೋನಿಯಾ ಗಾಂಧಿ ಪ್ರಧಾನಿಯಾದರೆ ನಾನೇನು ಓಡಿ ಹೋಗುವುದಿಲ್ಲ. ದೇಶ ಮೊದಲು ನಂತರ ವ್ಯಕ್ತಿ" ಎಂದು ಶೆಣೈ ವಿವರಿಸಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications