ಬೆಂಗಳೂರಿನಲ್ಲಿ ಮೋದಿ ಸಭೆ: ಯಡಿಯೂರಪ್ಪ ಕಥೆಯೇನು?
ಬೆಂಗಳೂರು, ನ.16: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಗಾಗಿ ಹಂಬಲಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮೋದಿ ಬೆಂಗಳೂರಿಗೆ ಬರುತ್ತಿರುವಾಗ ಶೇಷಾದ್ರಿ ರಸ್ತೆಯಲ್ಲಿ ಧರಣಿ ಕುಳಿತಿರುವುದು ನಿಜಕ್ಕೂ ಶೋಚನೀಯವೇ.

ಬಿಜೆಪಿಗೆ ಮರಳಿ, ಸಮಾವೇಶದಲ್ಲಿ ವೇದಿಕೆಯಲ್ಲಿ ಮೋದಿ ಪಕ್ಕ ಕುಳಿತುಕೊಳ್ಳಬೇಕೆಂದು ಬಯಸಿದ್ದ ಯಡಿಯೂರಪ್ಪಗೆ ಈ ವಾಸ್ತವ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪಂಚರಾಜ್ಯಗಳ ನೆಪವೊಡ್ಡಿ ಯಡಿಯೂರಪ್ಪ ಪಕ್ಷಕ್ಕೆ ಮರಳುವುದನ್ನು ಮುಂದೂಡುತ್ತಾ ಬಂದಿರುವ ರಾಜ್ಯ ಬಿಜೆಪಿ ನಾಯಕರು ಬಿಎಸ್ವೈ ಮರಳಬೇಕು ಎಂದು ಬಹಿರಂಗವಾಗಿ ಹೇಳುತ್ತಿದ್ದರೂ ಒಳಗೊಳಗೆ ಅವರ ವಿರುದ್ಧ ಮಸಲತ್ತು ನಡೆಸುತ್ತಿರುವುದೇ ಇದಕ್ಕೆ ಅನಂತ ಕಾರಣ ಎಂಬುದು ಬಿಜೆಪಿಯಲ್ಲಿರುವ ಬಿಎಸ್ವೈ ನಿಷ್ಠರ ಅನಿಸಿಕೆಯಾಗಿದೆ.
ಒಂದೆಡೆ ತನ್ನ ಬೆಂಬಲ/ ನಿಷ್ಠೆ ಏನಿದ್ದರೂ ಎನ್ ಡಿಎಗೆ ಹೊರತು, ಬಿಜೆಪಿಗಲ್ಲ. ಯಾವುದೇ ಕಾರಣಕ್ಕೂ ಬಿಜೆಪಿಗೆ ಮರಳುವುದಿಲ್ಲ ಎಂದು ಯಡಿಯೂರಪ್ಪ ಬಹಿರಂಗವಾಗಿಯೇ ಹೇಳುತ್ತಿದ್ದರೂ ಮೋದಿಗೆ ಹತ್ತಿರವಾಗಲು ಬಿಜೆಪಿಗೆ ಮರಳುವುದು ಅನಿವಾರ್ಯ ಎಂಬುದು ಅವರಿಗೂ ಮನದಟ್ಟಾಗಿದೆ. ಬಿಜೆಪಿ ನಾಯಕರಿಗೂ ಮನವರಿಕೆಯಾಗಿದೆ.
ವಿಧಾನಸಭೆ ಚುನಾವಣೆ ವೇಳೆ ದೂರವಾಗಿ ಮಣ್ಣುಮುಕ್ಕಿದ್ದು ಲೋಕಸಭೆ ವೇಳೆಗೆ ಬಿಜೆಪಿ-ಕೆಜೆಪಿ ಕೂಡಿಕೆ ಆಗಬೇಕು ಎಂಬುದು ಎರಡೂ ಕಡೆಯ ನಾಡಿಮಿಡಿತವಾಗಿದೆ. ಆದರೂ... ಮೋದಿ ಸಮಾವೇಶದ ವೇಳೆಗೆ ಅದು ಸಾಧ್ಯವಾಗದಿರುವುದು ಯಡಿಯೂರಪ್ಪನವರ ಮುಂದಿನ ನಡೆಯೇನು ಎಂಬುದು ಕುತೂಹಲಕಾರಿಯಾಗಿದೆ.
More From
-
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್











Click it and Unblock the Notifications