Nandini Milk: ನಂದಿನಿ ಹಾಲಿನ ದರ 3 ರೂಪಾಯಿ ಏರಿಕೆ!
ಬೆಂಗಳೂರು: ರಾಜ್ಯದಲ್ಲಿ ಹಾಲಿನ ಬೆಲೆ ಏರಿಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಕರ್ನಾಟದಲ್ಲಿ ನಂದಿನಿ ಹಾಲಿನ ದರವನ್ನ ಪ್ರತಿ ಲೀಟರ್ಗೆ 3 ರೂಪಾಯಿ ಏರಿಕೆ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಇನ್ನು ಈ ಹೊಸ ದರವು ಇದೇ ಆಗಸ್ಟ್ 1ರಿಂದ ಜಾರಿಗೆ ಬರಲಿದೆ. ಬೆಲೆ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಲು ಇಂದು ಮಹತ್ವದ ಸಭೆ ಕರೆಯಲಾಗಿತ್ತು. ಇದೇ ಸಭೆಯಲ್ಲಿ ಬೆಲೆ ಏರಿಕೆಗೆ ಅನುಮತಿ ನೀಡಲಾಗಿದೆ.
ಅಂದಹಾಗೆ ಕೆಎಂಎಫ್ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಅಂತಿಮವಾಗಿ ಸಿಎಂ ಸಿದ್ದರಾಮಯ್ಯ ಅವರು 3 ರೂಪಾಯಿ ಬೆಲೆ ಹೆಚ್ಚಳಕ್ಕೆ ಅನುಮತಿ ನೀಡಿದ್ದಾರೆ. ಹಾಗೇ ಇದೀಗ ಹೆಚ್ಚಳವಾದ 3 ರೂಪಾಯಿ ಹಾಲು ಉತ್ಪಾದಕರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರಂತೆ. ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಸಭೆಯನ್ನು ನಡಿದ್ದರು. ಇದೇ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ.

2 ಗಂಟೆ ಕಾಲ ನಡೆದ ಮೀಟಿಂಗ್!
ಹೌದು, ನಂದಿನ ಹಾಲಿನ ದರ ಪರಿಷ್ಕರಣೆ ಕುರಿತು ಚರ್ಚೆಗೆ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಬೆಲೆ ಹೆಚ್ಚಳದ ಬಗ್ಗೆ ಸಾಕಷ್ಟು ಚಿಂತನೆ ನಡೆಸಿ ಕ್ರಮ ಕೈಗೊಳ್ಳಲಾಗಿದೆ. ನಂದಿನಿ ಹಾಲಿನ ದರ ಪರಿಷ್ಕರಣೆ ಸಂಬಂಧ ನಡೆದ ಸಭೆ ಸಂಜೆ 7 ಗಂಟೆ ಸುಮಾರಿಗೆ ಶುರುವಾಗಿತ್ತು. ಎರಡು ಗಂಟೆ ಕಾಲ ನಡೆದ ಸಭೆಯಲ್ಲಿ ಬಹಳಷ್ಟು ವಿಚಾರ ಚರ್ಚೆ ಆಗಿವೆ. ಮಹತ್ವದ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನೆ ಇಲಾಖೆ ಸಚಿವ ಕೆ.ವೆಂಕಟೇಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.
ನಂದಿನಿ vs ಅಮುಲ್ vs ಮಿಲ್ಮಾ!
ಕೆಲ ತಿಂಗಳ ಹಿಂದೆ ಕರ್ನಾಟಕದಲ್ಲಿ ನಂದಿನಿ ವರ್ಸಸ್ ಅಮುಲ್ (Nandini vs Amul) ವಿವಾದ ಭುಗಿಲೆದ್ದು ಸೋಷಿಯಲ್ ಮೀಡಿಯಾದಲ್ಲಿ ಕನ್ನಡಿಗರು ಆಕ್ರೋಶ ಹೊರಹಾಕಿದ್ದರು. ಆಗ ಅಧಿಕಾರದಲ್ಲಿ ಇದ್ದ ಬಿಜೆಪಿ ಸರ್ಕಾರಕ್ಕೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿತ್ತು. ಆ ನಂತರ ನೆರೆ ರಾಜ್ಯ ಕೇರಳ ಇದೇ ವಿವಾದ ಇಟ್ಟುಕೊಂಡು ಜಗಳಕ್ಕೆ ಬಂದಿತ್ತು. ಹೀಗಾಗಿ ನಂದಿನಿ & ಕೇರಳದ ಮಿಲ್ಮಾ ವಿವಾದ (Nandini vs Milma) ದೇಶದ ಗಮನ ಸೆಳೆದಿತ್ತು. ಇದೀಗ ಬೆಲೆ ಏರಿಕೆ ಮೂಲಕ ಮತ್ತೆ ನಂದಿನಿ ಬ್ರ್ಯಾಂಡ್ ಗಮನ ಸೆಳೆಯುತ್ತಿದೆ.
ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಕಿಂಗ್!
20 ವರ್ಷದಲ್ಲಿ ಕರ್ನಾಟಕದ ಹಾಲು ಉತ್ಪಾದನೆ ಮೂರು ಪಟ್ಟು ಹೆಚ್ಚಾಗಿದ್ದರೆ, ಕೇರಳದ ಹಾಲು ಉತ್ಪಾದನೆ ಮಾತ್ರ ಪಾತಾಳ ಸೇರುತ್ತಿದೆ. 2001-02ರಲ್ಲಿ ಕೇರಳ ಹಾಲು ಉತ್ಪಾದನೆ ಸಾಮರ್ಥ್ಯ 2,718 ಟನ್ ಇತ್ತು. ಆದರೆ ಕೇರಳದ ಹಾಲು ಉತ್ಪಾದನೆ 2021-22ರ ಹೊತ್ತಿಗೆ 2,532 ಟನ್ಗೆ ಕುಸಿತ ಕಂಡಿದೆ. ಅಂದರೆ ನೀವೆ ಲೆಕ್ಕ ಹಾಕಿ, ಕರ್ನಾಟಕದ ಹಾಲು ಉತ್ಪಾದನೆ ಮೂರು ಪಟ್ಟು ಅಭಿವೃದ್ಧಿ ಹೊಂದಿದೆ. ಕೇಳರದಲ್ಲಿ ಹಾಲಿನ ಉತ್ಪಾದನೆ ಕುಸಿತ ಕಾಣುತ್ತಿದೆ. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಒಟ್ನಲ್ಲಿ ನಂದಿನಿ ಬ್ರ್ಯಾಂಡ್ ಎಲ್ಲೆಲ್ಲೂ ಸದ್ದು ಮಾಡುತ್ತಿತ್ತು, ಆದರೆ ಇದೀಗ ಬೆಲೆ ಏರಿಕೆ ವಿಚಾರವಾಗಿ ಕೂಡ ಮುನ್ನೆಲೆಗೆ ಬರುವಂತಾಗಿದೆ. ಅಲ್ಲದೆ ರೈತರ ಹಿತಕ್ಕಾಗಿ ಹಾಲಿನ ಬೆಲೆ ಏರಿಕೆ ಅನಿವಾರ್ಯ ಎಂಬ ವಾದ ಮಂಡಿಸಲಾಗಿತ್ತು. ಹೀಗಾಗಿ ನಂದಿನಿ ಹಾಲಿನ ಬೆಲೆಯ ಮೇಲೆ 3 ರೂಪಾಯಿ ಹೆಚ್ಚಿಸಲಾಗಿದ್ದು, ಯಾವ ರೀತಿ ಪ್ರತಿಕ್ರಿಯೆ ವ್ಯಕ್ತವಾಗುತ್ತೆ ಅಂತಾ ಕಾದು ನೋಡಬೇಕು. ಆದರೆ ರಾಜ್ಯ ಸರ್ಕಾರ ಮಾತ್ರ ಹೆಚ್ಚಳದ ಅಷ್ಟೂ ಹಣವನ್ನು ಈಗ ರೈತರಿಗೆ ನೀಡಲು ನಿರ್ಧರಿಸಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG: ಬೆಂಗಳೂರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ತಕ್ಷಣವೇ ಆರಂಭಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ











Click it and Unblock the Notifications