ಬಜೆಟ್ ಬಳಿಕ ರಾಜ್ಯದಲ್ಲಿ ಹಾಲಿನ ದರ ಏರಿಕೆ ಫಿಕ್ಸ್, ಲೀಟರ್ಗೆ ಎಷ್ಟು?
ಈಗಾಗಲೇ ಬಸ್ ಪ್ರಯಾಣ ದರ, ಮೆಟ್ರೋ ಪ್ರಯಾಣ ದರ ಏರಿಕೆ ಶಾಕ್ನಿಂದ ರಾಜ್ಯದ ಜನ ಇನ್ನೂ ಹೊರಬಂದಿಲ್ಲ. ಇದೀಗ ಹಾಲಿನ ದರ ಏರಿಕೆ ಮಾಡುವ ಕುರಿತಾಗಿಯೂ ಭಾರಿ ಚರ್ಚೆಗಳು ನಡೆಯುತ್ತಿವೆ. ಮಾರ್ಚ್ ಮೊದಲ ವಾರದಲ್ಲಿ ಕರ್ನಾಟಕ ಬಜೆಟ್ ಮಂಡನೆಯಾಗಲಿದ್ದು, ಬಳಿಕ ರಾಜ್ಯಾದ್ಯಂತ ನಂದಿನಿ ಹಾಲಿನ ದರ ಕೂಡ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಮಹತ್ವದ ಮಾಹಿತಿ ತಿಳಿಸಿದ್ದಾರೆ.
ಬಜೆಟ್ ನಂತರ ರಾಜ್ಯ ಸರ್ಕಾರ ಕೆಎಂಎಫ್ ನಂದಿನಿ ಹಾಲಿನ ದರವನ್ನು ಲೀಟರ್ಗೆ 5 ರೂಪಾಯಿ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾಲಿನ ದರ ಏರಿಕೆ ಮಾಡುವ ಸಂಬಂಧ ಭಾರಿ ಒತ್ತಡವಿದೆ. ಈ ಹಿನ್ನೆಲೆ ಹಾಲು ನಿಗಮಗಳ ಸಭೆ ಕರೆದು ಚರ್ಚೆ ಕೂಡ ನಡೆದಿದೆ. ಒಟ್ಟಾರೆ ಹಾಲಿನ ದರವನ್ನು ಐದು ರೂಪಾಯಿ ಹೆಚ್ಚಳ ಮಾಡಬೇಕು ಎಂದು ಒತ್ತಾಯ ಕೇಳಿಬಂದಿದೆ. ಈ ವಿಚಾರವನ್ನು ಸರ್ಕಾರಕ್ಕೆ ತಿಳಿಸಿದ್ದು, ಈ ಹೆಚ್ಚಿಸುವ ಹಣವನ್ನು ರೈತರಿಗೆ ನೀಡಬೇಕು ಎಂದು ನಿರ್ಧರಿಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುಳಿವು ನೀಡಿದ್ದಾರೆ.

ಪಶುಸಂಗೋಪನೆ ಇಲಾಖೆಯೂ ಸೇರಿದಂತೆ ಹಲವರಿಂದ ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ಮೊದಲಿನಿಂದಲೂ ಒತ್ತಡವಿದೆ. ಈ ಬಗ್ಗೆ ಸರ್ಕಾರದ ಗಮನಕ್ಕೂ ತಂದಿದ್ದೇವೆ. ಆದರೆ, ಸರ್ಕಾರದಿಂದ ಈವರೆಗೆ ಇನ್ನೂ ಯಾವುದೇ ಅಂತಿಮ ನಿರ್ಧಾರ ಹೊರಬಂದಿಲ್ಲ. ಹಾಗಾಗಿ ಸದ್ಯಕ್ಕೆ ಹಾಲಿನ ದರ ಏರಿಸುವ ಬಗ್ಗೆ ಸರ್ಕಾರ ತೀರ್ಮಾನವೂ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹಾಲು ಒಕ್ಕೂಟಗಳಿಂದಲೂ ದರ ಏರಿಕೆಗೆ ಒತ್ತಡವಿದೆ. ಹಾಗಾಗಿ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಹೆಚ್ಚಳ ಮಾಡುವಂತೆ ಡಿಮ್ಯಾಂಡ್ ಮಾಡಿವೆ. ಈ ಸಂಬಂಧ ಕಳೆದ ತಿಂಗಳು ಕೂಡ ಪಶು ಸಂಗೋಪನಾ ಸಚಿವರು ಕೆಎಂಎಫ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಈ ಸಭೆಯಲ್ಲೂ ಹಾಲಿನ ದರ ಏರಿಕೆ ಮಾಡುವುದು ಅನಿವಾರ್ಯ ಎಂದೇ ಅಭಿಪ್ರಾಯ ವ್ಯಕ್ತವಾಗಿತ್ತು. ಕೊನೆಗೆ ಹಾಲಿನ ದರ ಲೀಟರ್ಗೆ 5 ರೂಪಾಯಿ ಹೆಚ್ಚಿಸಬೇಕು ಎಂದು ಒಕ್ಕೂಟಗಳು ಪ್ರಸ್ತಾವನೆ ಸಲ್ಲಿಸಿದ್ದವು. ಸದ್ಯ ರಾಜ್ಯ ಬಜೆಟ್ ಇರುವುದರಿಂದ ದರ ಏರಿಕೆ ವಿಚಾರಕ್ಕೆ ಸರ್ಕಾರ ಸೈಲೆಂಟ್ ಆಗಿದೆ. ಬಜೆಟ್ ಮಂಡನೆ ಬಳಿಕ ದರ ಏರಿಕೆ ಘೋಷಣೆಯಾಗುವ ಸಾಧ್ಯತೆ ದಟ್ಟವಾಗಿದೆ.

ಅಧಿಕಾರಕ್ಕೆ ಬಂದ 20 ತಿಂಗಳುಗಳಲ್ಲಿ ಈಗಾಗಲೇ ಎರಡೆರಡು ಬಾರಿ ಹಾಲಿನ ದರ ಏರಿಕೆ ಮಾಡಿ ಪ್ರತಿ ಹಾಲಿನ ಪಾಕೆಟ್ ದರ 5 ರೂಪಾಯಿ ದುಬಾರಿ ಮಾಡಿ ಗ್ರಾಹಕರ ಜೇಬಿಗೆ ಕನ್ನ ಹಾಕಿರುವ ಕಾಂಗ್ರೆಸ್ ಸರ್ಕಾರ, ಇದೀಗ ಮತ್ತೊಮ್ಮೆ ಪ್ರತಿ ಪಾಕೆಟ್ ಹಾಲಿನ ದರವನ್ನು 5 ರೂಪಾಯಿ ಹೆಚ್ಚಳ ಮಾಡುವ ಮೂಲಕ ಹಗಲು ದರೋಡೆ ಮಾಡಲು ಹೊರಟಿದೆ ಎಂದು ಬಿಜೆಪಿ ಶಾಸಕ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ












Click it and Unblock the Notifications