Get Updates
Get notified of breaking news, exclusive insights, and must-see stories!

ಬಜೆಟ್‌ ಬಳಿಕ ರಾಜ್ಯದಲ್ಲಿ ಹಾಲಿನ ದರ ಏರಿಕೆ ಫಿಕ್ಸ್‌, ಲೀಟರ್‌ಗೆ ಎಷ್ಟು?

ಈಗಾಗಲೇ ಬಸ್‌ ಪ್ರಯಾಣ ದರ, ಮೆಟ್ರೋ ಪ್ರಯಾಣ ದರ ಏರಿಕೆ ಶಾಕ್‌ನಿಂದ ರಾಜ್ಯದ ಜನ ಇನ್ನೂ ಹೊರಬಂದಿಲ್ಲ. ಇದೀಗ ಹಾಲಿನ ದರ ಏರಿಕೆ ಮಾಡುವ ಕುರಿತಾಗಿಯೂ ಭಾರಿ ಚರ್ಚೆಗಳು ನಡೆಯುತ್ತಿವೆ. ಮಾರ್ಚ್‌ ಮೊದಲ ವಾರದಲ್ಲಿ ಕರ್ನಾಟಕ ಬಜೆಟ್‌ ಮಂಡನೆಯಾಗಲಿದ್ದು, ಬಳಿಕ ರಾಜ್ಯಾದ್ಯಂತ ನಂದಿನಿ ಹಾಲಿನ ದರ ಕೂಡ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಮಹತ್ವದ ಮಾಹಿತಿ ತಿಳಿಸಿದ್ದಾರೆ.

ಬಜೆಟ್ ನಂತರ ರಾಜ್ಯ ಸರ್ಕಾರ ಕೆಎಂಎಫ್ ನಂದಿನಿ ಹಾಲಿನ ದರವನ್ನು ಲೀಟರ್‌ಗೆ 5 ರೂಪಾಯಿ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾಲಿನ ದರ ಏರಿಕೆ ಮಾಡುವ ಸಂಬಂಧ ಭಾರಿ ಒತ್ತಡವಿದೆ. ಈ ಹಿನ್ನೆಲೆ ಹಾಲು ನಿಗಮಗಳ ಸಭೆ ಕರೆದು ಚರ್ಚೆ ಕೂಡ ನಡೆದಿದೆ. ಒಟ್ಟಾರೆ ಹಾಲಿನ ದರವನ್ನು ಐದು ರೂಪಾಯಿ ಹೆಚ್ಚಳ ಮಾಡಬೇಕು ಎಂದು ಒತ್ತಾಯ ಕೇಳಿಬಂದಿದೆ. ಈ ವಿಚಾರವನ್ನು ಸರ್ಕಾರಕ್ಕೆ ತಿಳಿಸಿದ್ದು, ಈ ಹೆಚ್ಚಿಸುವ ಹಣವನ್ನು ರೈತರಿಗೆ ನೀಡಬೇಕು ಎಂದು ನಿರ್ಧರಿಸಿದ್ದೇವೆ ಎಂದು ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ್ ಸುಳಿವು ನೀಡಿದ್ದಾರೆ.

Nandini Milk Price Hike Likely After Karnataka Budget 2025 Says KMF Chief

ಪಶುಸಂಗೋಪನೆ ಇಲಾಖೆಯೂ ಸೇರಿದಂತೆ ಹಲವರಿಂದ ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ಮೊದಲಿನಿಂದಲೂ ಒತ್ತಡವಿದೆ. ಈ ಬಗ್ಗೆ ಸರ್ಕಾರದ ಗಮನಕ್ಕೂ ತಂದಿದ್ದೇವೆ. ಆದರೆ, ಸರ್ಕಾರದಿಂದ ಈವರೆಗೆ ಇನ್ನೂ ಯಾವುದೇ ಅಂತಿಮ ನಿರ್ಧಾರ ಹೊರಬಂದಿಲ್ಲ. ಹಾಗಾಗಿ ಸದ್ಯಕ್ಕೆ ಹಾಲಿನ ದರ ಏರಿಸುವ ಬಗ್ಗೆ ಸರ್ಕಾರ ತೀರ್ಮಾನವೂ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹಾಲು ಒಕ್ಕೂಟಗಳಿಂದಲೂ ದರ ಏರಿಕೆಗೆ ಒತ್ತಡವಿದೆ. ಹಾಗಾಗಿ ಪ್ರತಿ ಲೀಟರ್‌ ಹಾಲಿಗೆ 5 ರೂಪಾಯಿ ಹೆಚ್ಚಳ ಮಾಡುವಂತೆ ಡಿಮ್ಯಾಂಡ್‌ ಮಾಡಿವೆ. ಈ ಸಂಬಂಧ ಕಳೆದ ತಿಂಗಳು ಕೂಡ ಪಶು ಸಂಗೋಪನಾ ಸಚಿವರು ಕೆಎಂಎಫ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಈ ಸಭೆಯಲ್ಲೂ ಹಾಲಿನ ದರ ಏರಿಕೆ ಮಾಡುವುದು ಅನಿವಾರ್ಯ ಎಂದೇ ಅಭಿಪ್ರಾಯ ವ್ಯಕ್ತವಾಗಿತ್ತು. ಕೊನೆಗೆ ಹಾಲಿನ ದರ ಲೀಟರ್‌ಗೆ 5 ರೂಪಾಯಿ ಹೆಚ್ಚಿಸಬೇಕು ಎಂದು ಒಕ್ಕೂಟಗಳು ಪ್ರಸ್ತಾವನೆ ಸಲ್ಲಿಸಿದ್ದವು. ಸದ್ಯ ರಾಜ್ಯ ಬಜೆಟ್‌ ಇರುವುದರಿಂದ ದರ ಏರಿಕೆ ವಿಚಾರಕ್ಕೆ ಸರ್ಕಾರ ಸೈಲೆಂಟ್‌ ಆಗಿದೆ. ಬಜೆಟ್‌ ಮಂಡನೆ ಬಳಿಕ ದರ ಏರಿಕೆ ಘೋಷಣೆಯಾಗುವ ಸಾಧ್ಯತೆ ದಟ್ಟವಾಗಿದೆ.

Nandini Milk Price Hike Likely After Karnataka Budget 2025 Says KMF Chief

ಅಧಿಕಾರಕ್ಕೆ ಬಂದ 20 ತಿಂಗಳುಗಳಲ್ಲಿ ಈಗಾಗಲೇ ಎರಡೆರಡು ಬಾರಿ ಹಾಲಿನ ದರ ಏರಿಕೆ ಮಾಡಿ ಪ್ರತಿ ಹಾಲಿನ ಪಾಕೆಟ್‌ ದರ 5 ರೂಪಾಯಿ ದುಬಾರಿ ಮಾಡಿ ಗ್ರಾಹಕರ ಜೇಬಿಗೆ ಕನ್ನ ಹಾಕಿರುವ ಕಾಂಗ್ರೆಸ್‌ ಸರ್ಕಾರ, ಇದೀಗ ಮತ್ತೊಮ್ಮೆ ಪ್ರತಿ ಪಾಕೆಟ್‌ ಹಾಲಿನ ದರವನ್ನು 5 ರೂಪಾಯಿ ಹೆಚ್ಚಳ ಮಾಡುವ ಮೂಲಕ ಹಗಲು ದರೋಡೆ ಮಾಡಲು ಹೊರಟಿದೆ ಎಂದು ಬಿಜೆಪಿ ಶಾಸಕ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್‌ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+