ಗೌರಿ ಲಂಕೇಶ್ ಹತ್ಯೆ ಹಿನ್ನೆಲೆ ನಾರಾಯಣ ಗುರು ಜಯಂತಿ ಮುಂದಕ್ಕೆ
ಬೆಂಗಳೂರು, ಸೆಪ್ಟೆಂಬರ್ 6: ಪತ್ರಕರ್ತೆ ಗೌರಿ ಲಂಕೇಶ್ ಅವರ ಅಮಾನುಷ ಹತ್ಯೆಯ ಹಿನ್ನೆಲೆಯಲ್ಲಿ ಇಂದು ಸಂಜೆ 6 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದ್ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆಯನ್ನು ಮುಂದೂಡಲು ಸರ್ಕಾರ ನಿರ್ಧರಿಸಿದೆ.
ಕಾರ್ಯಕ್ರಮ ಮುಂದೂಡಿರುವುದನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಹೇಳಿದ್ದಾರೆ. ಜಯಂತಿ ಆಚರಣೆಯ ಮುಂದಿನ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಉಮಾಶ್ರೀ, ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿರುವ ಸಚಿವೆ ಉಮಾಶ್ರೀ ಇದು 'ವೈಚಾರಿಕತೆಯ ಕಗ್ಗೊಲೆ' ಎಂದು ಹೇಳಿದ್ದಾರೆ. ಈ ಘಟನೆಯ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಅವರು, "ಇದೊಂದು ಪೈಶಾಚಿಕ, ವಿಕೃತ ಮನಸ್ಸಿನ ಘೋರ ಕೃತ್ಯ" ಎಂದು ಹೇಳಿದ್ದಾರೆ.
"ಪತ್ರಕರ್ತೆಯಾಗಿ ಸಾಮಾಜಿಕ ಹೋರಾಟಗಾರ್ತಿಯಾಗಿ ವೈಚಾರಿಕ ಚಿಂತನೆಯ ದಿಟ್ಟ ಮಹಿಳೆಯಾಗಿದ್ದ ಗೌರಿ ಲಂಕೇಶ್ ಮಹಿಳಾ ಸ್ವಾಭಿಮಾನದ ಸಂಕೇತವಾಗಿದ್ದರು. ಸ್ವಾವಲಂಬನೆ, ದಿಟ್ಟತನ ಮತ್ತು ಮಹಿಳೆಯರ ಸಾಮರ್ಥ್ಯಕ್ಕೆ ಮಾದರಿಯಂತಿದ್ದ ಗೌರಿ ಲಂಕೇಶ್ ಕರ್ನಾಟಕ ಕಂಡ ಅಪರೂಪದ ಮಹಿಳಾ ಹೋರಾಟಗಾರ್ತಿಯಾಗಿದ್ದರು," ಎಂದು ಉಮಾಶ್ರೀ ಹೇಳಿದ್ದಾರೆ.
"ಸಮಕಾಲೀನ ವಿದ್ಯಮಾನಗಳ ಬಗ್ಗೆ ಅವರಿಗಿದ್ದ ಅರಿವು ಮತ್ತು ಅವರು ಅದನ್ನು ವಿಶ್ಲೇಷಿಸುತ್ತಿದ್ದ ರೀತಿ ಬೆರಗು ಹುಟ್ಟಿಸುವಂತಿತ್ತು. ಅವರ ಹತ್ಯೆ ನಾಗರೀಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಕೊಲೆಗಡುಕರು ಯಾರೇ ಆಗಿರಲಿ ಅವರಿಗೆ ಅತ್ಯುಗ್ರ ಶಿಕ್ಷೆ ಆಗಬೇಕು. ವೈಯಕ್ತಿಕವಾಗಿ ನನಗೆ ಅವರ ಅಗಲಿಕೆ ಅಪಾರ ನೋವು ಮತ್ತು ಸಂಕಟ ತಂದಿದೆ," ಎಂದು ಸಚಿವೆ ಉಮಾಶ್ರೀ ಹೇಳಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications