Get Updates
Get notified of breaking news, exclusive insights, and must-see stories!

ಸೂಲಗಿತ್ತಿ ನರಸಮ್ಮ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

Recommended Video

      ಸೂಲಗಿತ್ತಿ ನರಸಮ್ಮ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ | Oneindia Kannada

      ನವದೆಹಲಿ, ಡಿಸೆಂಬರ್ 26: ಹದಿನೈದು ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿದ್ದ ಸೂಲಗಿತ್ತಿ, ಪದ್ಮಶ್ರೀ ಪುರಸ್ಕೃತೆ ನರಸಮ್ಮ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

      ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನರಸಮ್ಮ (98) ಮಂಗಳವಾರ ನಿಧನಹೊಂದಿದ್ದರು. ಅವರು ಸುಮಾರು 25 ದಿನಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

      ಪದ್ಮಶ್ರೀ ಸೂಲಗಿತ್ತಿ ನರಸಮ್ಮ ಅವರ ನಿಧನದಿಂದ ದುಃಖವಾಗಿದೆ. ಕರ್ನಾಟಕದಲ್ಲಿ ಅವರ ಸೂಲಗಿತ್ತಿ ಸೇವೆ ನೀಡುವ ಪ್ರಯತ್ನ ಸದಾ ಸ್ಮರಣೀಯ. ಸಮಾಜದ ಬಡ ವರ್ಗಕ್ಕೆ ಅವರು ತೋರಿದ ದಯಾಳುತನ ಅವರನ್ನು ಎಲ್ಲರಿಗೂ ಪ್ರೀತಿಪಾತ್ರರನ್ನಾಗಿಸಿದೆ. ಅವರ ಕುಟುಂಬಕ್ಕೆ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಸಾಂತ್ವನ ಹೇಳುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

      Narendra modi condolence tweet to sulagitti narasamma death

      ಮೂಲತಃ ತುಮಕೂರಿನ ಪಾವಗಡದವರಾದ ಸೂಲಗಿತ್ತಿ ನರಸಮ್ಮ, ವೈದ್ಯರ ಸೌಲಭ್ಯವಿಲ್ಲದ ಕುಗ್ರಾಮಗಳಲ್ಲಿ 15 ಸಾವಿರಕ್ಕೂ ಅಧಿಕ ಹೆರಿಗೆಗಳನ್ನು ಮಾಡಿಸಿದ್ದಾರೆ. ಅವರ ಸೇವೆಯನ್ನು ಗುರುತಿಸಿ 2018ರಲ್ಲಿ ಪದ್ಮಶ್ರೀ ಪುರಸ್ಕಾರವನ್ನು ಕೇಂದ್ರ ಸರ್ಕಾರ ನೀಡಿತ್ತು.

      ನರಸಮ್ಮ ಅವರ ಅಂತ್ಯಕ್ರಿಯೆ ಇಂದು (ಬುಧವಾರ) ನಡೆಯಲಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+