ಬೆಂಗಳೂರಲ್ಲಿ ಮೋದಿ : ಕ್ಷಣ-ಕ್ಷಣದ ಮಾಹಿತಿ
ಬೆಂಗಳೂರು, ಫೆಬ್ರವರಿ 04 : ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅರಮನೆ ಮೈದಾನದಲ್ಲಿ ನಡೆಯಲಿರುವ ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಭಾನುವಾರ ಸಂಜೆ 4 ಗಂಟೆಗೆ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸುಮಾರು 2 ಲಕ್ಷಕ್ಕೂ ಅಧಿಕ ಜನರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮೋದಿ ಭೇಟಿ ಹಿನ್ನಲೆಯಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮೋದಿ 'ಮಹಾರ್ಯಾಲಿ'ಗೆ ಪೂರ್ವಾಭಿಮುಖ ವೇದಿಕೆ: ಇಲ್ಲೇ ಇರೋದು ವಿಶೇಷ!
ನವೆಂಬರ್ 2ರಂದು ಆರಂಭವಾಗಿದ್ದ ಕರ್ನಾಟಕ ಬಿಜೆಪಿಯ ನವ ಕರ್ನಾಟಕ ಪರಿವರ್ತನಾ ಯಾತ್ರೆ 224 ಕ್ಷೇತ್ರಗಳಲ್ಲಿ ಸಂಚಾರ ನಡೆಸಿದೆ. ಇಂದು ಸಮಾರೋಪ ಸಮಾರಂಭ ನಡೆಯುತ್ತಿದೆ.
ಮೋದಿ ಆಗಮನ, ನಗರದಲ್ಲಿ ಬಿಗಿ ಬಂದೋಬಸ್ತ್
* ಹೆಬ್ಬಾಳ ಹೆಲಿಪ್ಯಾಡ್ಗೆ ಆಗಮನ, ಹೆಬ್ಬಾಳದಿಂದ ರಸ್ತೆ ಮಾರ್ಗದ ಮೂಲಕ ಅರಮನೆ ಮೈದಾನಕ್ಕೆ ಆಗಮನ
* ಮೋದಿ ಸ್ವಾಗತಿಸಿದ ರಾಜ್ಯಪಾಲ ವಜುಭಾಯಿ ವಾಲಾ, ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು
* ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಮೋದಿ ಆಗಮನ
ಅರಮನೆ ಮೈದಾನಕ್ಕೆ ಆಗಮಿಸಿದ ನರೇಂದ್ರ ಮೋದಿ
* ಮಧ್ಯಾಹ್ನದ ಊಟಕ್ಕೆ ಪಲಾವ್, ರೈಸ್ ಬಾತ್, ಮೊಸರನ್ನದ ವ್ಯವಸ್ಥೆ. ಸಮಾವೇಶಕ್ಕೆ ಆಗಮಿಸಿರುವ ಲಕ್ಷಾಂತರ ಕಾರ್ಯಕರ್ತರು.
* ಸಮಾರೋಪ ಸಮಾರಂಭಕ್ಕೆ ಕ್ಷಣಗಣನೆ. ಅಂತಿಮ ಹಂತದ ಭದ್ರತಾ ಪರಿಶೀಲನೆ ನಡೆಸುತ್ತಿರುವ ಪೊಲೀಸರು, ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ
Today I will address a rally in Bengaluru. I am delighted to have this opportunity to interact with the wonderful people of Karnataka. You can watch the speech live here. https://t.co/aGxemoOQY4
— Narendra Modi (@narendramodi) February 4, 2018
* ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೊರಟಿದ್ದಾರೆ.
ಮೋದಿಯನ್ನು ಭರ್ಜರಿ ಟ್ರೋಲ್ ಮಾಡುತ್ತಿರುವ ಕಾಂಗ್ರೆಸ್!
* 'ರಾಜ್ಯದ್ದು ನಂ.1 ಭ್ರಷ್ಟ ಸರ್ಕಾರ. ಭ್ರಷ್ಟ ಸರ್ಕಾರ ಎಂದು ಸಮೀಕ್ಷೆಗಳೇ ಹೇಳಿವೆ. ನಂಬರ್ 1ರಾಜ್ಯಕ್ಕೆ ಸ್ವಾಗತ ಅಂತ ಜಾಹೀರಾತು ಹಾಕುವುದು ಹಾಸ್ಯಸ್ಪದ' ಮಾಜಿ ಸಚಿವ ಆರ್.ಅಶೋಕ್ ಹೇಳಿಕೆ
* ಬೆಳಗಾವಿ ಜಿಲ್ಲೆಯಿಂದ 550 ಕ್ರೂಶರ್ ವಾಹನಗಳ ಮೂಲಕ 9 ಕಾರ್ಯಕರ್ತರು ಹಾಗೂ ರೈಲಿನ ಮೂಲಕ 1 ಸಾವಿರ ಕಾರ್ಯಕರ್ತರು ಬೆಂಗಳೂರಿಗೆ ಆಗಮಿಸಿದ್ದಾರೆ. ಪ್ರತಿ ಕ್ಷೇತ್ರದಿಂದ 30 ವಾಹನದ ಮೂಲಕ 500 ಕಾರ್ಯಕರ್ತರು ಬಂದಿದ್ದಾರೆ.
* ಸಮಾವೇಶಕ್ಕೆ 16 ಜಿಲ್ಲೆಗಳಿಂದ ಜನರನ್ನು ಕರೆತರಲು ಕೆಎಸ್ಆರ್ಟಿಸಿಯ 4,000 ಬಸ್, 3,000 ಖಾಸಗಿ ಬಸ್, ಜತೆಗೆ 2,000ಕ್ಕೂ ಜತೆಗೆ ಟೆಂಪೊ ಟ್ರಾವೆಲರ್ ವ್ಯವಸ್ಥೆ ಮಾಡಲಾಗಿದೆ.
* ನೆಲಮಂಗಲದ ನೀಲಕಂಠ ಹಾಲ್ನಲ್ಲಿಯೂ ಕಾರ್ಯಕರ್ತರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿದೆ
* ಅರಮನೆ ಮೈದಾನದಲ್ಲಿ ಮಧ್ಯಾಹ್ನ 2 ಗಂಟೆಗೆ ಸಮಾವೇಶ ಆರಂಭವಾಗಲಿದೆ. 4 ಗಂಟೆಗೆ ನರೇಂದ್ರ ಮೋದಿ ಆಗಮಿಸಲಿದ್ದಾರೆ.
* ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಕಾರ್ಯಕರ್ತರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. 1,400ಕ್ಕೂ ಹೆಚ್ಚು ಬಸ್ಸುಗಳಲ್ಲಿ ಕಾರ್ಯಕರ್ತರು ನಗರಕ್ಕೆ ಆಗಮಿಸುತ್ತಿದ್ದಾರೆ.
* ತುಮಕೂರಿನ ಸಿದ್ದಗಂಗಾಮಠದಲ್ಲಿ ಉಪಹಾರ ಮುಗಿಸಿ ಕಾರ್ಯಕರ್ತರು ಬೆಂಗಳೂರಿನತ್ತ ಹೊರಟಿದ್ದಾರೆ.