ಮೋದಿ ರಕ್ಷಣೆಗೆ ಮಂಗಳೂರು ಪೊಲೀಸರು ಸನ್ನದ್ದ

ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿ ನರೇಂದ್ರ ಮೋದಿ ನೇಮಕಗೊಂಡ ಬಳಿಕ ರಾಜ್ಯದಲ್ಲಿ ನಡೆಯುತ್ತಿರುವ ಮೂರನೆಯ ಸಮಾವೇಶ ಇದಾಗಿದೆ. ಭಾರತ ಗೆಲ್ಲಿಸಿ (Bharata Gellisi) ಎಂದು ನಾಮಕರಣ ಮಾಡಲಾಗಿರುವ ಈ ಸಾರ್ವಜನಿಕ ಸಮಾವೇಶವು ನಾಳೆ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ನೆಹರೂ ಮೈದಾನದಲ್ಲಿ ನಡೆಯಲಿದೆ.
ಭದ್ರತೆಯ ಬಗ್ಗೆ ಸ್ಥೂಲ ವಿವರ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಆರ್ ಹಿತೇಂದ್ರ ಅವರು DCP/SP ಶ್ರೇಣಿಯ 7 ಅಧಿಕಾರಿಗಳು, ACP/DySP ಶ್ರೇಣಿಯ 25 ಅಧಿಕಾರಿಗಳು, 67 ಇನ್ಸ್ ಪೆಕ್ಟರುಗಳು, 157 ಸಬ್ ಇನ್ಸ್ ಪೆಕ್ಟರುಗಳು, 211 ಸಹಾಯಕ ಸಬ್ ಇನ್ಸ್ ಪೆಕ್ಟರುಗಳು, 1,450 ಮುಖ್ಯ ಪೇದೆಗಳು- ಪೇದೆಗಳು, 221 ಮಹಿಳಾ ಪೇದೆಗಳು, 135 ಟ್ರಾಫಿಕ್ ಪೇದೆಗಳು ಮತ್ತು 300 ಹೋಂ ಗಾರ್ಡ್ಸ್ ( ಒಟ್ಟು 2,573 ) ಭದ್ರತೆ ನಿಭಾಯಿಸಲಿದ್ದಾರೆ.
12 KSRP ತಂಡಗಳು, 8 ASC, ಒಂದು RAF, 2 ಬಾಂಬ್ ಪತ್ತೆ ದಳ, 1 ವಿಪತ್ತು ನಿರ್ವಹಣಾ ತಂಡ, 13 ಚೆಕ್ ಪೋಸ್ಟುಗಳು, 16 ತಾತ್ಕಾಲಿಕ ಔಟ್ ಪೋಸ್ಟುಗಳು, 5 ಅಗ್ನಿಶಾಮಕ ದಳ, 5 ಆ್ಯಂಬುಲೆನ್ಸ್ ಸಹ ಸೇವೆಗೆ ಸಜ್ಜಾಗಿವೆ.
ಸಂಘಟಕರ ಪ್ರಕಾರ 1 ಲಕ್ಷ ಮಂದಿ ಸಭೆಗೆ ಜಮಾಯಿಸುವ ಸಾಧ್ಯತೆಯಿದೆ. ಇನ್ನು ನಗರದಾದ್ಯಂತ ಟ್ರಾಫಿಕ್ ನಿರ್ಬಂಧ ಸಹ ಜಾರಿಯಲ್ಲಿರುತ್ತದೆ. ನೆಹರೂ ಮೈದಾನದ ಒಂದು ಕಿಮೀ ಫಾಸಲೆಯಲ್ಲಿ ಯಾವುದೇ ಸಾರ್ವಜನಿಕ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ ಎಂದು ಕಮಿಷನರ್ ಆರ್ ಹಿತೇಂದ್ರ ಅವರು ತಿಳಿಸಿದ್ದಾರೆ.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ











Click it and Unblock the Notifications