Get Updates
Get notified of breaking news, exclusive insights, and must-see stories!

Narendra Modi: ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು​: ನರೇಂದ್ರ ಮೋದಿ ಕೊಟ್ಟ ಸಂದೇಶವೇನು?

ದೆಹಲಿ, ಡಿಸೆಂಬರ್‌ 03: ನಾಲ್ಕು ರಾಜ್ಯಗಳ ಪೈಕಿ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ನಾಲ್ಕು ರಾಜ್ಯಗಳ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಸಲ್ಲಿಸಿದ್ದಾರೆ.

ಹೌದು, ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಾರಿಶಕ್ತಿಯ ವಿಕಾಸವೇ ಬಿಜೆಪಿಯ ಆಧಾರಸ್ತಂಭವಾಗಿದೆ. ನಿಮಗೆ ನೀಡಿರುವ ಎಲ್ಲ ಭರವಸೆಗಳನ್ನು ನಾವು ಈಡೇರಿಸುತ್ತೇವೆ. ಇದು ಮೋದಿಯ ಕೇವಲ ಗ್ಯಾರಂಟಿ ಅಲ್ಲ, ಪೂರ್ಣಗೊಳಿಸುವ ಗ್ಯಾರಂಟಿ ಎಂದು ಹೇಳಿದ್ದಾರೆ.

Narendra Modi Reaction to BJP Winning 3 out of 4 States in 2023 Assembly Elections

ಇಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಐತಿಹಾಸಿಕ ಮತ್ತು ಅಭೂತಪೂರ್ವವಾಗಿದೆ. ಇದು 'ಸಬ್ಕಾ ಸಾಥ್, ಸಬ್ಕಾ ವಿಕಾಸ್' ಮತ್ತು ಸ್ವಾವಲಂಬಿ ಭಾರತದ ವಿಜಯವಾಗಿದೆ. ದೇಶದಲ್ಲಿ ಮಹಿಳೆಯರು, ಯುವಕರು, ಬಡವರು ಮತ್ತು ರೈತರು ಮಾತ್ರ ಜಾತಿಗಳಾಗಿದ್ದು, ಅವರ ಸಬಲೀಕರಣವು ದೇಶವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅವರು ಪುನರುಚ್ಚರಿಸಿದರು. ನನಗೆ ನಾಲ್ಕು ಜಾತಿಗಳು ಸರ್ವಶ್ರೇಷ್ಠವೆಂದು ನಾನು ಹೇಳುತ್ತಲೇ ಇದ್ದೇನೆ. ಮಹಿಳಾ ಶಕ್ತಿ, ಯುವಕರು, ರೈತರು ಮತ್ತು ಬಡವರು. ಈ ನಾಲ್ವರು ಸಬಲೀಕರಣಗೊಂಡರೆ ದೇಶವು ಬಲಗೊಳ್ಳುತ್ತದೆ.

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಮೂಲಕ ಭಾರತೀಯ ಜನತಾ ಪಕ್ಷವು ಹೃದಯಭಾಗದ ರಾಜ್ಯಗಳಲ್ಲಿ ನಿರ್ಣಾಯಕ ವಿಜಯವನ್ನು ದಾಖಲಿಸಿದೆ. ಇದು ಸೀಮಿತ ಅಸ್ತಿತ್ವವನ್ನು ಹೊಂದಿರುವ ದಕ್ಷಿಣ ರಾಜ್ಯವಾದ ತೆಲಂಗಾಣದಲ್ಲಿ ತನ್ನ ಸಂಖ್ಯೆಯನ್ನು ಸುಧಾರಿಸಿದೆ. ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಅಧಿಕಾರದಲ್ಲಿರುವ ಪಕ್ಷಗಳನ್ನು ಅಧಿಕಾರದಿಂದ ಹೊರಹಾಕಲಾಯಿತು, ಏಕೆಂದರೆ ಅದು ಯುವಕರ ವಿರುದ್ಧವಾಗಿತ್ತು ಮತ್ತು ಅದರ ಅಧಿಕಾರಾವಧಿಯಲ್ಲಿ ಹಗರಣಗಳನ್ನು ಹೊಂದಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಮೊದಲ ಬಾರಿ ವೋಟ್​ ಮಾಡಿದವರು ನನ್ನ ಮೊದಲ ಮತ ಗೆಲುವು ಸಾಧಿಸಿದೆ ಎಂದು ಹೆಮ್ಮೆಯಿಂದ ಹೇಳುತ್ತಿದ್ದಾರೆ. ಮಹಿಳೆಯರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ. ಸ್ತ್ರೀಶಕ್ತಿ ಬಗ್ಗೆ ಚುನಾವಣಾ ರ‍್ಯಾಲಿಯಲ್ಲಿ ಪದೇಪದೆ ಕೆಲವು ವಿಚಾರಗಳನ್ನು ನಾನು ಪ್ರಸ್ತಾಪಿಸಿದ್ದೆ. ನಾರಿ ಸಮ್ಮಾನ್, ಸುರಕ್ಷತೆ ಇದು ಬಿಜೆಪಿಯ ಗ್ಯಾರಂಟಿ ಆಗಿದೆ. ಬಿಜೆಪಿ ದೇಶದ ಯುವಜನತೆ ಹಿತಕ್ಕಾಗಿ ಯೋಜನೆ ಜಾರಿಗೊಳಿಸುತ್ತಿದ್ದೇವೆ. ಆದಿವಾಸಿ ಸಮಾಜಕ್ಕೆ ಅನೇಕ ಯೋಜನೆಗಳನ್ನು ನಾವು ಜಾರಿಗೆ ತಂದಿದ್ದೇವೆ ಎಂದು ಹೇಳಿದ್ದಾರೆ.

ರಾಜಸ್ಥಾನದ ಜನರ ಮೇಲೆ ಬಹಳ ವಿಶ್ವಾಸವಿತ್ತು, ಅದರಂತೆ ಬಿಜೆಪಿ ಗೆಲ್ಲಿಸಿದ್ದಾರೆ. ಛತ್ತೀಸಗಢ್​ನಲ್ಲಿ ಮೊದಲ ಪ್ರಚಾರ ಸಭೆಯಲ್ಲಿ ನಾನು ಹೇಳಿದ್ದೆ. ನಾನು ನಿಮಗೆ ಪ್ರಮಾಣಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಬಂದಿದ್ದೇನೆ. ಆದಿವಾದಿ ಸಮುದಾಯ ಇಂದು ತನ್ನ ಅಭಿವೃದ್ದ್ಧಿಗಾಗಿ ಹವಣಿಸುತ್ತಿದೆ. ಬಿಜೆಪಿಯಿಂದ ಮಾತ್ರ ನಮ್ಮ ಅಭಿವೃದ್ಧಿ ಸಾಧ್ಯವೆಂದು ಸಾಬೀತುಪಡಿಸಿದ್ದಾರೆ. ಡಬಲ್​ ಇಂಜಿನ್ ಸರ್ಕಾರ ಇರುವ ರಾಜ್ಯ ಅಭಿವೃದ್ಧಿಯತ್ತ ಸಾಗುತ್ತಿದೆ. ರಾಜಕೀಯ ಜೀವನದಲ್ಲಿ ಸುಳ್ಳು ಆಶ್ವಾಸನೆ ಎಂದೂ ನೀಡಿಲ್ಲ ಮತ್ತು ನೀಡಲ್ಲ ಎಂದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+