Narendra Modi: ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು: ನರೇಂದ್ರ ಮೋದಿ ಕೊಟ್ಟ ಸಂದೇಶವೇನು?
ದೆಹಲಿ, ಡಿಸೆಂಬರ್ 03: ನಾಲ್ಕು ರಾಜ್ಯಗಳ ಪೈಕಿ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ನಾಲ್ಕು ರಾಜ್ಯಗಳ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಸಲ್ಲಿಸಿದ್ದಾರೆ.
ಹೌದು, ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಾರಿಶಕ್ತಿಯ ವಿಕಾಸವೇ ಬಿಜೆಪಿಯ ಆಧಾರಸ್ತಂಭವಾಗಿದೆ. ನಿಮಗೆ ನೀಡಿರುವ ಎಲ್ಲ ಭರವಸೆಗಳನ್ನು ನಾವು ಈಡೇರಿಸುತ್ತೇವೆ. ಇದು ಮೋದಿಯ ಕೇವಲ ಗ್ಯಾರಂಟಿ ಅಲ್ಲ, ಪೂರ್ಣಗೊಳಿಸುವ ಗ್ಯಾರಂಟಿ ಎಂದು ಹೇಳಿದ್ದಾರೆ.

ಇಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಐತಿಹಾಸಿಕ ಮತ್ತು ಅಭೂತಪೂರ್ವವಾಗಿದೆ. ಇದು 'ಸಬ್ಕಾ ಸಾಥ್, ಸಬ್ಕಾ ವಿಕಾಸ್' ಮತ್ತು ಸ್ವಾವಲಂಬಿ ಭಾರತದ ವಿಜಯವಾಗಿದೆ. ದೇಶದಲ್ಲಿ ಮಹಿಳೆಯರು, ಯುವಕರು, ಬಡವರು ಮತ್ತು ರೈತರು ಮಾತ್ರ ಜಾತಿಗಳಾಗಿದ್ದು, ಅವರ ಸಬಲೀಕರಣವು ದೇಶವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅವರು ಪುನರುಚ್ಚರಿಸಿದರು. ನನಗೆ ನಾಲ್ಕು ಜಾತಿಗಳು ಸರ್ವಶ್ರೇಷ್ಠವೆಂದು ನಾನು ಹೇಳುತ್ತಲೇ ಇದ್ದೇನೆ. ಮಹಿಳಾ ಶಕ್ತಿ, ಯುವಕರು, ರೈತರು ಮತ್ತು ಬಡವರು. ಈ ನಾಲ್ವರು ಸಬಲೀಕರಣಗೊಂಡರೆ ದೇಶವು ಬಲಗೊಳ್ಳುತ್ತದೆ.
ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಮೂಲಕ ಭಾರತೀಯ ಜನತಾ ಪಕ್ಷವು ಹೃದಯಭಾಗದ ರಾಜ್ಯಗಳಲ್ಲಿ ನಿರ್ಣಾಯಕ ವಿಜಯವನ್ನು ದಾಖಲಿಸಿದೆ. ಇದು ಸೀಮಿತ ಅಸ್ತಿತ್ವವನ್ನು ಹೊಂದಿರುವ ದಕ್ಷಿಣ ರಾಜ್ಯವಾದ ತೆಲಂಗಾಣದಲ್ಲಿ ತನ್ನ ಸಂಖ್ಯೆಯನ್ನು ಸುಧಾರಿಸಿದೆ. ರಾಜಸ್ಥಾನ, ಛತ್ತೀಸ್ಗಢ ಮತ್ತು ತೆಲಂಗಾಣದಲ್ಲಿ ಅಧಿಕಾರದಲ್ಲಿರುವ ಪಕ್ಷಗಳನ್ನು ಅಧಿಕಾರದಿಂದ ಹೊರಹಾಕಲಾಯಿತು, ಏಕೆಂದರೆ ಅದು ಯುವಕರ ವಿರುದ್ಧವಾಗಿತ್ತು ಮತ್ತು ಅದರ ಅಧಿಕಾರಾವಧಿಯಲ್ಲಿ ಹಗರಣಗಳನ್ನು ಹೊಂದಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಮೊದಲ ಬಾರಿ ವೋಟ್ ಮಾಡಿದವರು ನನ್ನ ಮೊದಲ ಮತ ಗೆಲುವು ಸಾಧಿಸಿದೆ ಎಂದು ಹೆಮ್ಮೆಯಿಂದ ಹೇಳುತ್ತಿದ್ದಾರೆ. ಮಹಿಳೆಯರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ. ಸ್ತ್ರೀಶಕ್ತಿ ಬಗ್ಗೆ ಚುನಾವಣಾ ರ್ಯಾಲಿಯಲ್ಲಿ ಪದೇಪದೆ ಕೆಲವು ವಿಚಾರಗಳನ್ನು ನಾನು ಪ್ರಸ್ತಾಪಿಸಿದ್ದೆ. ನಾರಿ ಸಮ್ಮಾನ್, ಸುರಕ್ಷತೆ ಇದು ಬಿಜೆಪಿಯ ಗ್ಯಾರಂಟಿ ಆಗಿದೆ. ಬಿಜೆಪಿ ದೇಶದ ಯುವಜನತೆ ಹಿತಕ್ಕಾಗಿ ಯೋಜನೆ ಜಾರಿಗೊಳಿಸುತ್ತಿದ್ದೇವೆ. ಆದಿವಾಸಿ ಸಮಾಜಕ್ಕೆ ಅನೇಕ ಯೋಜನೆಗಳನ್ನು ನಾವು ಜಾರಿಗೆ ತಂದಿದ್ದೇವೆ ಎಂದು ಹೇಳಿದ್ದಾರೆ.
ರಾಜಸ್ಥಾನದ ಜನರ ಮೇಲೆ ಬಹಳ ವಿಶ್ವಾಸವಿತ್ತು, ಅದರಂತೆ ಬಿಜೆಪಿ ಗೆಲ್ಲಿಸಿದ್ದಾರೆ. ಛತ್ತೀಸಗಢ್ನಲ್ಲಿ ಮೊದಲ ಪ್ರಚಾರ ಸಭೆಯಲ್ಲಿ ನಾನು ಹೇಳಿದ್ದೆ. ನಾನು ನಿಮಗೆ ಪ್ರಮಾಣಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಬಂದಿದ್ದೇನೆ. ಆದಿವಾದಿ ಸಮುದಾಯ ಇಂದು ತನ್ನ ಅಭಿವೃದ್ದ್ಧಿಗಾಗಿ ಹವಣಿಸುತ್ತಿದೆ. ಬಿಜೆಪಿಯಿಂದ ಮಾತ್ರ ನಮ್ಮ ಅಭಿವೃದ್ಧಿ ಸಾಧ್ಯವೆಂದು ಸಾಬೀತುಪಡಿಸಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಇರುವ ರಾಜ್ಯ ಅಭಿವೃದ್ಧಿಯತ್ತ ಸಾಗುತ್ತಿದೆ. ರಾಜಕೀಯ ಜೀವನದಲ್ಲಿ ಸುಳ್ಳು ಆಶ್ವಾಸನೆ ಎಂದೂ ನೀಡಿಲ್ಲ ಮತ್ತು ನೀಡಲ್ಲ ಎಂದಿದ್ದಾರೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications