PM Modi Sworn: ಕರ್ನಾಟಕದ ಅನೇಕ ಕಡೆ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ, 'ಮೋದಿ-ಶ್ರೀರಾಮ' ಪರ ಘೋಷಣೆ
ಬೆಂಗಳೂರು, ಜೂನ್ 09: ನರೇಂದ್ರ ಮೋದಿಯವರು ಇಂದು ಭಾನುವಾರ (ಜೂನ್ 09) ಸಂಜೆ ಮೂರನೇ ಭಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದರು. ಈ ಹಿನ್ನೆಲೆಯಲ್ಲಿ ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಶಿವಮೊಗ್ಗ, ಮಂಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಸಂಭ್ರಮಾಚರಣೆ ಕಂಡು ಬಂತು.
ಪ್ರಧಾನಿ ಪದಗ್ರಹಣ ಸ್ವೀಕಾರ ಆಗುತ್ತಿದ್ದಂತೆ ರಾತ್ರಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಈ ಮೂಲಕ ತಮ್ಮ ನಾಯಕನನ್ನು ಜನರು ಬೆಂಬಲಿಸಿದರು. ಆಯಾ ಜಿಲ್ಲೆಗಳ ಕ್ಷೇತ್ರದಲ್ಲಿ ಚುನಾಯಿತ ಬಿಜೆಪಿ ಸಂಸದರ ಪೋಟೋಗಳನ್ನು ಹಿಡಿದು ಸಂಭ್ರಮಿಸಿದರು. ಪ್ರಧಾನಿ ಮೋದಿ ಪರ, ಭಾರತದ ಪರ ಹಾಗೂ ಶ್ರಿರಾಮನ ಪರ ಘೋಷಣೆ ಕೂಗಿದರು.

ಹುಬ್ಬಳ್ಳಿಯಲ್ಲಿ ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ ವಿವಿಧ ಕಡೆಗಳಲ್ಲಿ ವಿಜಯೋತ್ಸವ ನಡೆಯಿತು. ಹುಬ್ಬಳ್ಳಿ ದುರ್ಗದ ಬೈಲ್, ಹಳೆ ಹುಬ್ಬಳ್ಳಿ ವೃತ್ತದ ಬಳಿ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಬಿಜೆಪಿ ಬೆಂಬಲಿಗರು, ಕಾರ್ಯಕರ್ತರು ಸ್ಥಳೀಯರು ಮುಖಂಡರು ಪಾಲ್ಗೊಂಡು ಸಿಹಿ ಹಂಚಿದರು.
ರಸ್ತೆಗಳು, ಪ್ರಮುಖ ವೃತ್ತಗಳಲ್ಲಿ ಪಟಾಕಿ ಸಿಟಿ, ಪ್ರಧಾನಿ ಮೋದಿ ಬ್ಯಾನರ್ ಹಿಡಿದು ದೇಶದ ಪರ ಘೋಷಣೆ ಕೂಗಿದರು. ''ಮೋದಿ..ಮೋದಿ..ಜೈ ಶ್ರೀರಾಮ, ವಂದೇ ಭಾರತ್ ಮಾತಾಕಿ ಜೈ..' ಎಂದು ಘೋಷಣೆ ಕೂಗಿದರು. ಹುಬ್ಬಳ್ಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಧಾರವಾಡ ಲೋಕಸಭಾ ಚುನಾವಣೆ ಕ್ಷೇತ್ರದಲ್ಲಿ ಚುನಾಯಿತರಾದ ಪ್ರಹ್ಲಾದ್ ಜೋಶಿಯವರ ಭಾವಚಿತ್ರ ಹಿಡಿದು ಅವರ ಪರ ಘೋಷಣೆ ಕೂಗಿದರು.
ಮೋದಿ ಜೊತೆ 69 ಸಂಸದರ ಪದಗ್ರಹಣ
ಸದರಿ ಲೋಕಸಭಾ ಚುನಾವಣೆಯಲ್ಲಿ ದೇಶದ 543 ಸೀಟುಗಳ ಪೈಕಿ ಎನ್ಡಿಎ ಮೈತ್ರಿಕೂಟ 292 ಸ್ಥಾನಗಳನ್ನು ಪಡೆದುಕೊಂಡಿದೆ. ಎನ್ಡಿಗೆ ಬಹುಮತ ಬರುತ್ತಿದ್ದಂತೆ ಪ್ರಧಾನಿ ಮೋದಿಯವರು ಮತ್ತೆ ಮೂರನೇ ಭಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ನಿಶ್ಚಿತವಾಯಿತು. ಅದರಂತೆ ಇಂದು ಪ್ರಧಾನಿ ಮೋದಿ ಜೊತೆಗೆ 69 ಸಂಸದರು ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications