ಕರಾವಳಿ ಕರ್ನಾಟಕ ಜನರಿಗಾಗಿ ಟ್ವೀಟ್ ಮಾಡಿದ್ದಾರೆ ಮೋದಿ
Recommended Video
ಬೆಂಗಳೂರು, ಮೇ 29: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ಟರ್ ಮೂಲಕ ಸ್ಪಂದಿಸಿದ್ದಾರೆ.
'ಕರ್ನಾಟಕದ ಕೆಲವು ಭಾಗದ ಜನ ಪ್ರವಾಹದಿಂದ ತೊಂದರೆಗೆ ಸಿಲುಕಿದ್ದು ಅವರ ಸುರಕ್ಷತೆಗಾಗಿ ನಾನು ಪ್ರಾರ್ಥಿಸುತ್ತೇನೆ' ಎಂದಿರುವ ಅವರು, ಅಲ್ಲಿನ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳೊಡನೆ ಮಾತನಾಡಿದ್ದು, ಸೂಕ್ತ ಸಹಾಯ ಒದಗಿಸುವಂತೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
I pray for the safety and wellbeing of all those affected by heavy rains in various parts of Karnataka. Have spoken to officials and asked them to ensure all possible assistance in the affected areas.
— Narendra Modi (@narendramodi) May 29, 2018
ಮೋದಿ ಅವರು ಈ ಟ್ವೀಟ್ ಮಾಡಿದ ಕೇವಲ ಒಂದು ಗಂಟೆಯಲ್ಲಿ 900 ಬಾರಿ ರೀಟ್ವೀಟ್ ಆಗಿದೆ. 3294 ಜನ ಮೆಚ್ಚುಗೆ ಸೂಚಿಸಿದ್ದರು. ಹಲವು ಜನ ಪ್ರತಿಕ್ರಿಯೆಯನ್ನೂ ನಿಡಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಪ್ರವಾಹ: ಮಾಹಿತಿ ಪಡೆದ ಸಿಎಂ ಕುಮಾರಸ್ವಾಮಿ
ದಕ್ಷಿಣ ಕನ್ನಡ, ಉಡುಪಿ, ಮಂಗಳೂರು ಜಿಲ್ಲೆಗಳಲ್ಲಿ ನಿನ್ನೆ ರಾತ್ರಿಯಿಂದ ಸುರಿದ ಭಾರಿ ಮಳೆಗೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟವಾಗಿದ್ದು, ಕೆಲವು ಜೀವ ಕೂಡ ಬಲಿ ಆಗಿದೆ.
ಮಾಯದಂಥ ಮಳೆಗೆ ಮಂಗಳೂರಿನ ರಸ್ತೆಗಳಲ್ಲಿ ನೀರೋ ನೀರು
ಮುಖ್ಯಮಂತ್ರಿಗಳು ರಕ್ಷಣಾ ಕಾರ್ಯಕ್ಕೆ ಅವಶ್ಯಕತೆ ಇದ್ದರೆ ಜಲ ಸೇನೆಯ ನೆರವು ಪಡೆಯುವಂತೆ ಅಧಿಕಾರಿಗಳಿಗೆ ಸೂಚಸಿದ್ದಾರೆ.